ಚೀನಾಕ್ಕೆ ಭೂಮಿ ಕೊಟ್ಟವರು ಯಾರೆಂದು ನಿಮ್ಮ ಅಜ್ಜನನ್ನು ಕೇಳಿ: ರಾಹುಲ್ಗೆ ತಿರುಗೇಟು
ನವದೆಹಲಿ, ಫೆಬ್ರವರಿ 12: ಲಡಾಖ್ ಗಡಿ ಭಾಗದಲ್ಲಿನ ಭಾರತದ ಭೂಪ್ರದೇಶಗಳನ್ನು ಮೋದಿ ಸರ್ಕಾರ ಚೀನಾಕ್ಕೆ ಬಿಟ್ಟುಕೊಟ್ಟಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟೀಕೆಗೆ ಕೇಂದ್ರ ಸರ್ಕಾರ ತೀಕ್ಷ್ಣ ತಿರುಗೇಟು ನೀಡಿದೆ.
ಭಾರತ-ಚೀನಾ ಸಮಸ್ಯೆ ಕುರಿತು ಶುಕ್ರವಾರ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಖಾತೆ ಸಚಿವ ಜಿ ಕಿಶನ್ ರೆಡ್ಡಿ, ರಾಹುಲ್ ಗಾಂಧಿ ಅವರು ಭಾರತದ ಭಾಗವನ್ನು ಚೀನಾಕ್ಕೆ ಬಿಟ್ಟುಕೊಟ್ಟವರು ಯಾರು ಎಂಬುದನ್ನು ಅವರ ಅಜ್ಜನಿಗೆ (ಜವಹರಲಾಲ್ ನೆಹರೂ) ಕೇಳಬೇಕು ಎಂದು ವ್ಯಂಗ್ಯವಾಡಿದ್ದಾರೆ.
'ಭಾರತದ ಭೂಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಟ್ಟವರು ಯಾರು ಎಂಬ ಬಗ್ಗೆ ಅವರು ತಮ್ಮ ಅಜ್ಜನನ್ನು ಕೇಳಬೇಕು. ಅವರೇ ಉತ್ತರ ನೀಡಲಿದ್ದಾರೆ. ಯಾರು ದೇಶಭಕ್ತ ಮತ್ತು ಯಾರು ಅಲ್ಲ ಎಂಬುದು ಜನರಿಗೆ ಚೆನ್ನಾಗಿ ತಿಳಿದಿದೆ' ಎಂದು ರೆಡ್ಡಿ ಹೇಳಿದ್ದಾರೆ. ಮುಂದೆ ಓದಿ.

ತಿರುಗಿ ಹೋರಾಟ ಮಾಡುತ್ತದೆ
ದಾಳಿ ಮಾಡಿದರೆ ಭಾರತ ಮರು ಹೋರಾಟ ಮಾಡುತ್ತದೆ ಎಂಬುದನ್ನು ನೆರೆಯ ದೇಶಗಳಿಗೆ ಬಿಜೆಪಿ ಸರ್ಕಾರ ತೋರಿಸಿಕೊಟ್ಟಿದೆ ಎಂದು ಕೇಂದ್ರ ಸಚಿವ ಆರ್ಕೆ ಸಿಂಗ್ ಹೇಳಿದ್ದಾರೆ.
'ನಮ್ಮ ಸರ್ಕಾರವು ನಮ್ಮ ಎಲ್ಲ ಸುತ್ತಮುತ್ತಲಿನ ದೇಶಗಳಿಗೆ, ಮುಖ್ಯವಾಗಿ ಉತ್ತರ ಹಾಗೂ ಪೂರ್ವ ಭಾಗಗಳಲ್ಲಿ ನೀವು ಭಾರತದ ಮೇಲೆ ದಾಳಿ ಮಾಡಿದರೆ ನಾವು ತಿರುಗಿ ಹೋರಾಡುತ್ತಾವೆ ಎಂಬುದನ್ನು ತೋರಿಸಿದೆ ಮತ್ತು ಜಗತ್ತು ಅದನ್ನು ನೋಡಿದೆ' ಎಂದಿದ್ದಾರೆ.

ಅಸಂಸದೀಯ, ಅಪ್ರಬುದ್ಧ ಹೇಳಿಕೆ
ರಾಹುಲ್ ಗಾಂಧಿ ಅವರ ಹೇಳಿಕೆಯು ಅಸಂಸದೀಯ ಮತ್ತು ಅಪ್ರಬುದ್ಧವಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ. 'ಅವರು ಯಾವುದನ್ನೂ ಅರ್ಥ ಮಾಡಿಕೊಳ್ಳುವುದೂ ಇಲ್ಲ ಹಾಗೂ ವಿಚಾರಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನ ಹಾಕುವುದೂ ಇಲ್ಲ. ನನಗನ್ನಿಸುತ್ತದೆ ಅವರ ಹೇಳಿಕೆಯು ಅಸಂಸದೀಯ ಮತ್ತು ಅಪ್ರಬುದ್ಧವಾಗಿದೆ' ಎಂದು ಸಿಂಗ್ ಟೀಕಿಸಿದ್ದಾರೆ.

ಫಿಂಗರ್ 4 ನಮ್ಮ ಜಾಗ
ಫಿಂಗರ್ 3ರ ಬಳಿ ಶಾಶ್ವತ ನೆಲೆಗಳನ್ನು ಸ್ಥಾಪಿಸಲಿರುವುದಾಗಿ ರಕ್ಷಣಾ ಸಚಿವರು ತಿಳಿಸಿದ್ದಾರೆ. ಆದರೆ ಫಿಂಗರ್ 4 ನಮ್ಮ ನೆಲೆ. ನಾವು ಅಲ್ಲಿರಬೇಕು. ಫಿಂಗರ್ 4ಇಂದ ಫಿಂಗರ್ 3ಗೆ ಹಿಂದಕ್ಕೆ ಸರಿಯಲಾಗಿದೆ. ನಮ್ಮ ಜಾಗವನ್ನು ಮೋದಿ ಸರ್ಕಾರ ಚೀನಾಗೆ ಬಿಟ್ಟುಕೊಟ್ಟಿದೆ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದರು.

ಪ್ರಧಾನಿ ಹೇಡಿಯಾಗಿದ್ದಾರೆ
ಮೋದಿ ಸರ್ಕಾರ ಭಾರತದ ಭಾಗವನ್ನು ಚೀನಾಗೆ ಹಸ್ತಾಂತರಿಸುತ್ತಿದೆ ಹಾಗೂ ಅದನ್ನು ಪ್ರಶ್ನಿಸಲು ವಿರೋಧ ಪಕ್ಷಗಳಿಗೆ ಅವಕಾಶ ನೀಡುತ್ತಿಲ್ಲ. ಭಾರತೀಯ ಪಡೆಗಳನ್ನು ಏಕೆ ವಾಪಸ್ ಕರೆಸಿಕೊಳ್ಳಲಾಗುತ್ತಿದೆ? ಚೀನೀಯರ ವಿರುದ್ಧ ನಿಲ್ಲಲು ಸಾಧ್ಯವಾಗದೇ ಪ್ರಧಾನಿ ಹೇಡಿಯಂತಾಗಿದ್ದಾರೆ. ಪ್ರಧಾನಿ ನಮ್ಮ ಸೇನೆಯ ತ್ಯಾಗಕ್ಕೆ ಬೆಲೆ ನೀಡಿಲ್ಲ ಎಂದು ಆರೋಪಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications