ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 8ಕ್ಕೆ ಏರಿಕೆ- 4 ಲಕ್ಷಕ್ಕೂ ಹೆಚ್ಚು ಸಂತ್ರಸ್ತರು
ಮಿಜೋರಾಂ ಮೇ 18: ಬೆಂಬಿಡದೆ ಸುರಿಯುತ್ತಿರುವ ಮಳೆಗೆ ಅಸ್ಸಾಂ ತತ್ತರಿಸಿ ಹೋಗಿದೆ. ಸಾವಿನ ಸಂಖ್ಯೆ 8ಕ್ಕೆ ತಲುಪಿದ್ದು, 4 ಲಕ್ಷಕ್ಕೂ ಹೆಚ್ಚು ಸಂತ್ರಸ್ತರಾಗಿದ್ದಾರೆ.
ಅಸ್ಸಾಂನಲ್ಲಿ ಭಾರೀ ಮಳೆ ಪ್ರವಾಹ ಹಾನಿಯನ್ನುಂಟುಮಾಡುತ್ತಿದೆ. ಕಳೆದ ದಿನಕ್ಕಿಂತ ಸಂತ್ರಸ್ತರ ಸಂಖ್ಯೆ ದ್ವಿಗುಣಗೊಂಡಿದೆ. ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಮನೆ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಮಂಗಳವಾರ ಸರ್ಕಾರದ ಹೇಳಿಕೆಯ ಪ್ರಕಾರ ವಿಪತ್ತಿನಿಂದಾಗಿ ಇನ್ನೂ ಮೂರು ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಒಟ್ಟು ಎಂಟಕ್ಕೆ ಏರಿಕೆಯಾಗಿದೆ. ಸೋಮವಾರ 20 ಜಿಲ್ಲೆಗಳಲ್ಲಿ 1,97,248 ಇದ್ದ ಸಂತ್ರಸ್ತರ ಸಂಖ್ಯೆ ಇಂದು 26 ಜಿಲ್ಲೆಗಳಲ್ಲಿ ಪೀಡಿತ ಜನರ ಸಂಖ್ಯೆ 4,03,352 ಕ್ಕೆ ತಲುಪಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ASDMA) ಬುಲೆಟಿನ್ ತಿಳಿಸಿದೆ.
ಅಸ್ಸಾಂ ಮತ್ತು ನೆರೆಯ ರಾಜ್ಯಗಳಾದ ತ್ರಿಪುರಾ, ಮಿಜೋರಾಂ ಮತ್ತು ಮಣಿಪುರದಲ್ಲಿ ಭಾರೀ ಭೂಕುಸಿತ ಉಂಟಾಗಿದೆ. ಬರಾಕ್ ಕಣಿವೆ ಮತ್ತು ದಿಮಾ ಹಸಾವೊ ಜಿಲ್ಲೆಗೆ ರೈಲು ಮತ್ತು ರಸ್ತೆ ಸಂಪರ್ಕ ಕಡಿತಗೊಂಡಿದೆ. ಭೂಕುಸಿತಗಳು ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ವಿನಾಶವನ್ನುಂಟುಮಾಡಿವೆ. ಮಾತ್ರವಲ್ಲದೆ ಅನೇಕ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜೊತೆಗೆ ಪ್ರವಾಹದ ನೀರಿನಿಂದ 16,645.61 ಹೆಕ್ಟೇರ್ ಬೆಳೆಗಳು ಮುಳುಗಿ ನಾಶವಾಗಿದೆ.

ಕ್ಯಾಚಾರ್ 96,697 ಪೀಡಿತ ಜನರೊಂದಿಗೆ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದೆ. ಪ್ರಾದೇಶಿಕ ಹವಾಮಾನ ಮುನ್ಸೂಚನೆ ಕೇಂದ್ರ ಗುವಾಹಟಿ, ಅಸ್ಸಾಂನಲ್ಲಿ ಬುಧವಾರದವರೆಗೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ, ಜೊತೆಗೆ ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತದೆ ಎಂದು ತಿಳಿಸಿದೆ. ಇದರಿಂದಾಗಿ ವಿವಿಧ ಪೀಡಿತ ಪ್ರದೇಶಗಳಲ್ಲಿ 89 ಪರಿಹಾರ ಶಿಬಿರಗಳಲ್ಲಿ ಸುಮಾರು 40,000 ಜನರು ಆಶ್ರಯ ಪಡೆದಿದ್ದಾರೆ.
ಸೋಮವಾರದಿಂದ ಹನ್ನೊಂದು ಒಡ್ಡುಗಳು ಒಡೆದಿದ್ದು, ಮನೆಗಳು, ರಸ್ತೆಗಳು, ಸೇತುವೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗುವುದರ ಜೊತೆಗೆ ಇನ್ನೂ ಆರು ಜಿಲ್ಲೆಗಳು ಬಾಧಿತವಾಗಿವೆ. ದರ್ರಾಂಗ್ ಜಿಲ್ಲೆಯ ಗುವಾಹಟಿ ಮತ್ತು ಖಾರುಪೇಟಿಯಾದಲ್ಲಿ ಭಾರೀ ಪ್ರಮಾಣದ ನೀರು ಹರಿಯುತ್ತಿದೆ ಎಂದು ASDMA ಬುಲೆಟಿನ್ ತಿಳಿಸಿದೆ.

ಪೀಡಿತ ಪ್ರದೇಶಗಳಿಗೆ ಅಗತ್ಯ ವಸ್ತುಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಂವಹನ ಮಾರ್ಗಗಳನ್ನು ಪುನಃಸ್ಥಾಪಿಸಲು ರಾಜ್ಯ ಆಡಳಿತ ಕ್ರಮಗಳನ್ನು ಅನುಸರಿಸುತ್ತಿರುವಾಗಲೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂಗೆ ಕೇಂದ್ರ ಸರ್ಕಾರದಿಂದ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಮೇಘಾಲಯ ಸಹವರ್ತಿಯೊಂದಿಗೆ ಮಾರ್ಗವನ್ನು ತೆರವುಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿರುವುದು ತಿಳಿದುಬಂದಿದೆ. ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಭಾರತೀಯ ಸೇನೆಯನ್ನು ರಕ್ಷಣಾ ಕಾರ್ಯಾಚರಣೆಗೆ ಕರೆಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications