ಅಸ್ಸಾಂ ಚುನಾವಣೆ: ನಾಗರಿಕ ನೋಂದಣಿಯಲ್ಲಿ ಹೆಸರಿಲ್ಲದಿದ್ದರೂ ಮತದಾನ
ದಿಸ್ಪುರ್, ಜನವರಿ.20: ಅಸ್ಸಾಂ ವಿಧಾನಸಭಾ ಚುನಾವಣೆ-2021ರ ಹೊಸ್ತಿಲಿನಲ್ಲೇ ಚುನಾವಣಾ ಆಯೋಗವು ಮಹತ್ವದ ಘೋಷಣೆಯನ್ನು ಹೊರಡಿಸಿದೆ. ಅಸ್ಸಾಂ ನಾಗರಿಕ ನೋಂದಣಿಯಲ್ಲಿ ಹೆಸರು ದಾಖಲಿಸಿಲ್ಲ. ಹೀಗಿದ್ದೂ ಕೂಡಾ ರಾಜ್ಯದ ಮತದಾರರ ಗುರುತಿನ ಚೀಟಿಯಲ್ಲಿ ಹೆಸರು ಹೊಂದಿದ್ದರೆ ಅಂಥವರು ಈ ಬಾರಿ ಚುನಾವಣೆಯಲ್ಲಿ ಮತದಾನ ಮಾಡಬಹುದು ಎಂದು ಆಯೋಗ ತಿಳಿಸಿದೆ.
2021ರ ಅಸ್ಸಾಂ ವಿಧಾನಸಭಾ ಚುನಾವಣಾ ಸಿದ್ಧತೆಗಳ ಪರಾಮರ್ಶೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರ ತಂಡವು ರಾಜ್ಯಕ್ಕೆ ಮೂರು ದಿನಗಳ ಭೇಟಿ ನೀಡಿತ್ತು. ತದನಂತರ ಬುಧವಾರ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಸಾಮಾಜಿಕ ಅಂತರ ಸೇರಿದಂತೆ ಕೆಲವು ನಿಯಮಗಳನ್ನು ಪರಿಷ್ಕರಿಸಲಾಗಿದೆ. ಒಂದು ಚುನಾವಣಾ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸುವ ಮತದಾರರ ಸಂಖ್ಯೆಯನ್ನು 1500 ರಿಂದ 1000ಕ್ಕೆ ತಗ್ಗಿಸಲಾಗಿದೆ. ರಾಜ್ಯದಲ್ಲಿ ಇದರಿಂದ ಮತದಾನ ಕೇಂದ್ರಗಳ ಸಂಖ್ಯೆ 33000ಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆಯೋಗವು ಮಾಹಿತಿ ನೀಡಿದೆ.

ಅಸ್ಸಾಂನಲ್ಲಿ ಚುನಾವಣೆಗೆ ಆಯೋಗದ ಸಭೆ:
ಕಳೆದ ಜನವರಿ.18ರ ಸೋಮವಾರವೇ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾ ನೇತೃತ್ವದ ತಂಡವು ಅಸ್ಸಾಂಗೆ ಭೇಟಿ ನೀಡಿತ್ತು. ಖಾಸಗಿ ಹೋಟೆಲ್ ವೊಂದರಲ್ಲಿ ಅಸ್ಸಾಂನ ಚುನಾವಣಾ ಆಯೋಗದ ಮುಖ್ಯಸ್ಥ ನಿತಿನ್ ಖಾಡೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಿಇಸಿ ಮುಖ್ಯಸ್ಥ ಸುನಿಲ್ ಅರೋರಾ ಸಭೆ ನಡೆಸಿದ್ದರು. ಅಲ್ಲದೇ ಕೇಂದ್ರ ಆಯೋಗದ ತಂಡವು ರಾಜ್ಯದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾ ಚುನಾವಣಾ ಅಧಿಕಾರಿಗಳು, ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿತು.
ಕೇಂದ್ರ ಚುನಾವಣಾ ಆಯೋಗದ ತಂಡದಲ್ಲಿದ್ದ ಸದಸ್ಯರು:
ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾ ನೇತೃತ್ವದ ತಂಡದಲ್ಲಿ ಚುನಾವಣಾ ಆಯುಕ್ತರಾದ ಸುಶೀಲ್ ಚಂದ್ರ ಮತ್ತು ರಾಜೀವ್ ಕುಮಾರ್. ಮಹಾನಿರ್ದೇಶಕ ಧರ್ಮೇಂದರ್ ಶರ್ಮಾ, ಚುನಾವಣಾ ಉಪ-ಆಯುಕ್ತ ಚಂದ್ರಭೂಷಣ್ ಕುಮಾರ್, ಸೀನಿಯರ್ ಪ್ರಿನ್ಸಿಪಲ್ ಸೆಕ್ರೆಟರಿ ನರೇಂದ್ರ ಎನ್ ಭೂತೋಲಿಯಾ, ಡೈರೆಕ್ಟರ್ ಆಫ್ ಎಕ್ಸ್ ಪೆಂಡಿಚರ್ ಪಂಕಜ್ ಶ್ರೀವಾಸ್ತವ್ ಮತ್ತು ಇವಿಎಂ ಕನ್ಸಲ್ಟೆಂಟ್ ವಿಪಿನ್ ಕತಾರಾ ಸೇರಿದ್ದಾರೆ.
ಅಸ್ಸಾಂನಲ್ಲಿ ಪ್ರಸ್ತುತ ಸರ್ಕಾರದ ಅವಧಿಯು 2021ರ ಮೇ ತಿಂಗಳಿಗೆ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ 126 ವಿಧಾನಸಭಾ ಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗವು ಸಿದ್ಧತೆ ನಡೆಸುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications