ಸಿಎಎ ರದ್ದು, 5 ಲಕ್ಷ ಮಂದಿಗೆ ಉದ್ಯೋಗ ಭರವಸೆ ಸಮರ್ಥಿಸಿಕೊಂಡ ಕಾಂಗ್ರೆಸ್
ನವದೆಹಲಿ, ಮಾರ್ಚ್ 21: ಅಸ್ಸಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದುಪಡಿಸುವುದಾಗಿ ನೀಡಿದ ಭರವಸೆ ಈಗ ಚರ್ಚಗೆ ಕಾರಣವಾಗಿದೆ.
ಅಸ್ಸಾಂ ಜನರ ಆಕಾಂಕ್ಷೆಗೆ ತಕ್ಕಂತೆ ಪ್ರಣಾಳಿಕೆ ರೂಪಿಸಲಾಗಿದೆ. 5 ಲಕ್ಷ ಮಂದಿಗೆ ಸರ್ಕಾರಿ ಉದ್ಯೋಗ ಭರವಸೆ ನೀಡಲಾಗಿದೆ ಎಂದು ರಾಹುಲ್ ಗಾಂಧಿ ಸಮರ್ಥಿಸಿಕೊಂಡಿದ್ದಾರೆ.
ಅಸ್ಸಾಂನಲ್ಲಿ ಕೇಸರಿ ಪಕ್ಷವು ಆಕ್ರಮಣ ಮಾಡುತ್ತಿದೆ "ಆರ್ಎಸ್ಎಸ್ ಮತ್ತು ಬಿಜೆಪಿ ಈ ರಾಷ್ಟ್ರದ ವೈವಿಧ್ಯಮಯ ಸಂಸ್ಕೃತಿಗಳ ಮೇಲೆ ಆಕ್ರಮಣ ಮಾಡುತ್ತಿವೆ ಎಂಬುದು ಎಲ್ಲರಿಗೂ ತಿಳಿದಿದೆ. ನಮ್ಮ ಭಾಷೆ, ಇತಿಹಾಸ, ನಮ್ಮ ಆಲೋಚನಾ ವಿಧಾನ, ಜೀವನಶೈಲಿ ಮೇಲೆ ನಿರಂತರ ಆಕ್ರಮಣ ನಡೆಯುತ್ತಿದೆ. ಅಸ್ಸಾಂ ರಾಜ್ಯದ ಸಂಸ್ಕೃತಿ, ಘನತೆ ಕಾಪಾಡಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ 2019 ಅನ್ನು ರದ್ದುಗೊಳಿಸುವ ಭರವಸೆ ನೀಡಿರುವುದಲ್ಲದೆ, ಚಹಾ ತೋಟ ಕಾರ್ಮಿಕರ ಕನಿಷ್ಠ ವೇತನವನ್ನು 365 ರೂ.ಗೆ ಏರಿಸುವುದಾಗಿ ಆಶ್ವಾಸನೆ ನೀಡಲಾಗಿದೆ. ಐದು ಲಕ್ಷ ಸರ್ಕಾರಿ ಉದ್ಯೋಗಗಳು ಮತ್ತು ಎಲ್ಲರಿಗೂ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಭರವಸೆ ನೀಡಲಾಗಿದೆ.
126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಂದು 47 ಸ್ಥಾನ, ಏಪ್ರಿಲ್ 1ರಂದು 39 ಸ್ಥಾನ, ಏಪ್ರಿಲ್ 6 ರಂದು ಮೂರನೇ ಮತ್ತು ಅಂತಿಮ ಹಂತದಲ್ಲಿ 40 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ, ಫಲಿತಾಂಶ ಹೊರ ಬರಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications