Assam floods: ಅಸ್ಸಾಂ ಪ್ರವಾಹಕ್ಕೆ 52 ಮಂದಿ ಬಲಿ, ನಿರಾಶ್ರಿತರಾದ 24 ಲಕ್ಷಕ್ಕೂ ಹೆಚ್ಚು ಜನ!
ದಿಸ್ಪೂರ್, ಜುಲೈ. 06: ಅಸ್ಸಾಂ ಪ್ರವಾಹವು ರಾಜ್ಯವನ್ನು ಧ್ವಂಸ ಮಾಡುತ್ತಲೇ ಇದೆ. ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಕಳೆದ 24 ಗಂಟೆಗಳಲ್ಲಿ ಹದಗೆಟ್ಟಿದ್ದು, 52 ಜನರು ಸಾವನ್ನಪ್ಪಿದ್ದಾರೆ. ಬರೋಬ್ಬರಿ 24 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಪ್ರಮುಖ ನದಿಗಳು ಇನ್ನೂ ಅಪಾಯದ ಮಟ್ಟಕ್ಕಿಂತ ಹೆಚ್ಚು ಹರಿಯುತ್ತಿದೆ ಎಂದು ಅಧಿಕೃತ ಬುಲೆಟಿನ್ ಹೇಳಿದೆ.
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಎದುರಿಸುತ್ತಿರುವ ಎರಡನೇ ಅಲೆಯ ಪ್ರವಾಹದಲ್ಲಿ ರಾಜ್ಯದ 35 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು ತೀವ್ರವಾಗಿ ಬಾಧಿತವಾಗಿವೆ. ರಾಜ್ಯಾದ್ಯಂತ 24 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಸದ್ಯ ನಿರಾಶ್ರಿತ ಕೇಂದ್ರಗಳಲ್ಲಿ ಹಲವು ಮಂದಿ ಆಶ್ರಯ ಪಡೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ ಪರಿಸ್ಥಿತಿಯು ಕಠೋರವಾಗಿದ್ದು, ಜೀವಹಾನಿ ಮತ್ತು ಮೂಲಸೌಕರ್ಯಗಳನ್ನು ಹಾನಿಗೊಳಿಸುವುದರ ಜೊತೆಗೆ ಬೆಳೆ ನಾಶ ಮತ್ತು ಜಾನುವಾರುಗಳ ನಷ್ಟಕ್ಕೆ ಕಾರಣವಾಗಿದೆ.

ನಿಮತಿಘಾಟ್, ಗುವಾಹಟಿ, ಗೋಲ್ಪಾರಾ ಮತ್ತು ಧುಬ್ರಿಯಲ್ಲಿ ಬ್ರಹ್ಮಪುತ್ರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರ ಉಪನದಿಗಳಾದ ಬುರ್ಹಿ ದಿಹಿಂಗ್, ದಿಖೌ, ದಿಸಾಂಗ್, ಧನ್ಸಿರಿ, ಜಿಯಾ ಭರಾಲಿ ಮತ್ತು ಕೊಪಿಲಿ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬರಾಕ್ ನದಿ ಮತ್ತು ಅದರ ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಪಿಟಿಐ ವರದಿಯ ಪ್ರಕಾರ, ಕಾಮ್ರೂಪ್ ಮೆಟ್ರೋಪಾಲಿಟನ್ ಜಿಲ್ಲೆಯ ದಿಸ್ಪುರ್ ಪ್ರದೇಶದಲ್ಲಿ ನಿರಂತರ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಒಂದು ಮಗು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯು ಈ ವರ್ಷದ ಪ್ರವಾಹಗಳು, ಭೂಕುಸಿತಗಳು ಮತ್ತು ಚಂಡಮಾರುತಗಳಿಂದ ಒಟ್ಟು ಸಾವಿನ ಸಂಖ್ಯೆಯನ್ನು 64 ಕ್ಕೆ ಏರಿಸಿದೆ. ಆದರೆ, ಸರ್ಕಾರದ ವರದಿ ಮಾತ್ರ ಸಾವಿನ ಸಂಖ್ಯೆಯನ್ನು 52 ಕ್ಕೆ ಇರಿಸಿದೆ.

ನಿರಂತರ ಸವೆತ ಮತ್ತು ಪ್ರವಾಹದಿಂದಾಗಿ ರೌಮರಿ ಪಥರ್ ಪ್ರದೇಶದಲ್ಲಿ ವಾಸಿಸುವ ಸುಮಾರು 500 ಕುಟುಂಬಗಳು ತಮ್ಮ ಭೂಮಿಯನ್ನು ಕಳೆದುಕೊಳ್ಳುತ್ತಿವೆ. ಈ ಪ್ರವಾಹದಲ್ಲಿ ಸುಮಾರು 100 ರಿಂದ 150 ಮನೆಗಳು ನಾಶವಾಗಿವೆ ಮತ್ತು ಅವರ ಹಳ್ಳಿಯ ಹೆಚ್ಚಿನ ಮನೆಗಳು ಜಲಾವೃತವಾಗಿವೆ. ಅಸ್ಸಾಂನ ಬಾರ್ಪೇಟಾ ಜಿಲ್ಲೆಯಲ್ಲಿ ನದಿ ಸವೆತ ಮತ್ತು ಪ್ರವಾಹಗಳು ಪ್ರಮುಖ ಸಮಸ್ಯೆಗಳಾಗಿವೆ. ಸುಮಾರು 1,40,000 ಜನರು ತೊಂದರೆಗೀಡಾಗಿದ್ದಾರೆ ಮತ್ತು 179 ಗ್ರಾಮಗಳು ಮುಳುಗಿವೆ, ಜೊತೆಗೆ 1,571.5 ಹೆಕ್ಟೇರ್ ಬೆಳೆ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.
ಮತ್ತೊಂದು ಹೆಚ್ಚು ಹಾನಿಗೊಳಗಾದ ಜಿಲ್ಲೆ ಧುಬ್ರಿ, ಅಲ್ಲಿ 775,721 ಜನರು ಬಾಧಿತರಾಗಿದ್ದಾರೆ. ಪ್ರವಾಹದಿಂದ 63,490.97 ಹೆಕ್ಟೇರ್ ಕೃಷಿ ಭೂಮಿ ಮುಳುಗಿದೆ ಮತ್ತು 112 ಕಂದಾಯ ವೃತ್ತಗಳಲ್ಲಿ 3,518 ಹಳ್ಳಿಗಳು ಹಾನಿಗೊಳಗಾಗಿವೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್ಡಿಎಂಎ) ಪ್ರಕಾರ ಬ್ರಹ್ಮಪುತ್ರ ನದಿಯ ನೀರಿನ ಮಟ್ಟವು ನೇಮತಿಘಾಟ್, ಗುವಾಹಟಿ, ಗೋಲ್ಪಾರಾ ಮತ್ತು ಧುಬ್ರಿಯಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚಿದೆ.
ಇದರ ಹೊರತಾಗಿ, ಕಮ್ರೂಪ್ (ಮೆಟ್ರೋಪಾಲಿಟನ್) ನ ಕಾಮ್ರೂಪ್ ಮತ್ತು ದಿಬ್ರುಗಢ್ ಸೇರಿ ಮೂರು ಜಿಲ್ಲೆಗಳಲ್ಲಿ ನಗರ ಪ್ರವಾಹ ವರದಿಯಾಗಿದೆ, ಅಲ್ಲಿ ಮಗು ಕಾಣೆಯಾಗಿದೆ ಎಂದು ವರದಿಯಾಗಿದೆ. ಅಸ್ಸಾಂ ಮುಖ್ಯಮಂತ್ರಿ ಶುಕ್ರವಾರ ಸಂಜೆ ದಿಬ್ರುಗಢ್ ಪಟ್ಟಣಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
-
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications