ಸೂಪರ್ ಆಫರ್: ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ Free ಸ್ಕೂಟರ್!
ಗುವಾಹಟಿ, ಅಕ್ಟೋಬರ್ 20: ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಓದುತ್ತಿರುವ ಮಕ್ಕಳು ಈ ಬಾರಿ ಹೆಚ್ಚು ಅಂಕ ತೆಗೆದುಕೊಂಡರೆ ನೀನು ಕೇಳಿದ್ದನ್ನು ಕೊಡಿಸುತ್ತೀನಿ ಎನ್ನುವ ಪೋಷಕರ ಬಗ್ಗೆ ಕೇಳಿದ್ದೀರಿ ಅಲ್ಲವೇ. ಆದರೆ ಅಸ್ಸಾಂ ಸರ್ಕಾರವೇ ಅಂಥದೊಂದು ಆಫರ್ ಅನ್ನು ಕೊಡುತ್ತಿದೆ.
ರಾಜ್ಯದಲ್ಲಿ 12ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕೂಟರ್ ನೀಡುವುದಾಗಿ ಘೋಷಿಸಿದೆ. 2022ನೇ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕ ಪಡೆದುಕೊಂಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ವರ್ಷ ಹೈಯರ್ ಸೆಕೆಂಡರಿ (12ನೇ ತರಗತಿ) ಪರೀಕ್ಷೆಯಲ್ಲಿ ಉತ್ತೀರ್ಣರಾದ 35,800 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟರ್ ನೀಡಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಶೇ.60 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ 29,748 ಹುಡುಗಿಯರಿಗೆ ಮತ್ತು ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ 6,052 ಹುಡುಗರಿಗೆ ಸ್ಕೂಟರ್ಗಳನ್ನು ನೀಡಲಾಗುತ್ತಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಕಳೆದ ಬುಧವಾರ ಗುವಾಹಟಿಯ ಜನತಾ ಭವನದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಇಂಥದೊಂದು ಆಫರ್ ಅನ್ನು ಕೊಡಲಾಗಿದೆ.

ವಿದ್ಯಾರ್ಥಿಗಳಿಗೆ ಯಾವಾಗ ಸಿಗುತ್ತೆ ಉಚಿತ ಸ್ಕೂಟರ್?
ಅಸ್ಸಾಂ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಸಚಿವ ಜಯಂತ್ ಮಲ್ಲಾ ಬರುವಾ ವಿವರಿಸಿದರು. ಸಚಿವ ಸಂಪುಟ ಸಭೆಯ ನಂತರದಲ್ಲಿ ಮಾತನಾಡಿದ ಅವರು, "ನವೆಂಬರ್ 30 ರಿಂದ ಸ್ಕೂಟರ್ ವಿತರಣಾ ಸಮಾರಂಭವು ನಡೆಯಲಿದೆ. ಈ ಸಂಬಂಧ ಉದ್ಘಾಟನಾ ಕಾರ್ಯಕ್ರಮವು ಕಾಮರೂಪ್ ಜಿಲ್ಲೆಯ ಕಾಮರೂಪ್ ನಗರದಲ್ಲಿ ನಡೆಯಲಿದೆ," ಎಂದು ಮಾಹಿತಿ ನೀಡಿದರು.

258.9 ಕೋಟಿ ರೂ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಸ್ಕೂಟರ್
ಅಸ್ಸಾಂನಲ್ಲಿ 12ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸ್ಕೂಟರ್ ನೀಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಅಂದಾಜು ವೆಚ್ಚವನ್ನು ಲೆಕ್ಕ ಹಾಕಲಾಗುತ್ತಿದೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆಯು ನೋಡಲ್ ಪ್ರಾಂಶುಪಾಲರ ಮೂಲಕ ಫಲಾನುಭವಿಗಳಿಗೆ ನೋಂದಣಿ ಮತ್ತು ವಿಮೆಗಾಗಿ ಹಣಕಾಸಿನ ನೆರವು ನೀಡುತ್ತದೆ. ಈ ಯೋಜನೆಗಾಗಿ ಒಟ್ಟು 258.9 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದು ಅಂದಾಜಿಸಲಾಗಿದೆ.

ಪ್ರತಿ ತಿಂಗಳು ಸಹಾಯಕ ಪ್ರಾಧ್ಯಾಪಕರಿಗೆ 55 ಸಾವಿರ ವೇತನ!
ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಕೊಟ್ಟಿರುವ ಅಸ್ಸಾಂ ಸರ್ಕಾರವು ಸಹಾಯಕ ಪ್ರಾಧ್ಯಾಪಕರಿಗೂ ಗುಡ್ ನ್ಯೂಸ್ ಕೊಟ್ಟಿದೆ. ಪ್ರಾಂತೀಯ ಕಾಲೇಜುಗಳಲ್ಲಿ ನಿಗದಿತ ವೇತನಕ್ಕಾಗಿ ಕೆಲಸ ಮಾಡುವ ಸಹಾಯಕ ಪ್ರಾಧ್ಯಾಪಕರ ಮಾಸಿಕ ಸಂಭಾವನೆಯನ್ನು 55,000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಅಸ್ಸಾಂ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಲ್ಲದೇ ಎರಡನೇ ಹಂತದ ಮಿಷನ್ ಬಾಸುಂಧರ ಅನುಷ್ಠಾನದ ಬಗ್ಗೆಯೂ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications