ಬಜೆಟ್ ಮಂಡನೆಯಲ್ಲಿ ಇತಿಹಾಸ ನಿರ್ಮಿಸಿದ ಅಸ್ಸಾಂ
ಗುವಾಹಟಿ, ಮಾರ್ಚ್ 12: ಅಸ್ಸಾಂ ಸರಕಾರ ಇ-ಬಜೆಟ್ ಮಂಡನೆ ಮಾಡುವ ವಿಶಿಷ್ಟ ದಾಖಲೆ ನಿರ್ಮಿಸಿದೆ.
ಶಾಸಕರಿಗೆ ಟ್ಯಾಬ್ಲೆಟ್ ಗಳನ್ನು ನೀಡಿ ದೇಶದಲ್ಲಿ ಇದೇ ಮೊದಲ ಬಾರಿಗೆ ವಿಶಿಷ್ಟ ಡಿಜಿಟಲ್ ಬಜೆಟ್ ನ್ನು ಇಂದು ಅಸ್ಸಾಂನಲ್ಲಿ ಮಂಡಿಸಲಾಯಿತು. ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ಬಜೆಟ್ ಮಂಡಿಸಿದರು. ಈ ಬಜೆಟ್ ನ್ನು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮೂಲಕ ರಚಿಸಲಾಗಿರುವುದು ಇನ್ನೊಂದು ವಿಶೇಷ.
ಪ್ರತಿ ಶಾಸಕರಿಗೂ ಬಜೆಟ್ ಪ್ರತಿ ಇರುವ ಟ್ಯಾಬ್ಲೆಟ್ ನೀಡಲಾಯಿತು. ಇಲ್ಲಿಯವರೆಗೆ ಉಳಿದ ರಾಜ್ಯಗಳಲ್ಲಿ ಬಜೆಟ್ ಪ್ರತಿಗಳನ್ನು ನೀಡಲಾಗುತ್ತಿತ್ತು. ಆದರೆ ಇಲ್ಲಿ ಟ್ಯಾಬ್ಲೆಟ್ ಗಳನ್ನು ನೀಡುವ ಮೂಲಕ ಡಿಜಿಟಲ್ ಬಜೆಟ್ ಮಂಡನೆ ಮಾಡಲಾಯಿತು.

ಇನ್ನು ಬಜೆಟ್ ವರದಿಗಾರಿಕೆಗೆ ಬಂದ ಮಾಧ್ಯಮ ಪ್ರತಿನಿಧಿಗಳಿಗೆ ಬಜೆಟ್ ಪ್ರತಿ ಇರುವ 8ಜಿಬಿಗಳ ಪೆನ್ ಡ್ರೈವ್ ನೀಡಲಾಯಿತು. ಇದಲ್ಲದೆ ಪೂರ್ಣ ಪ್ರಮಾಣದ ಬಜೆಟ್ ನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಅಪ್ಲೋಡ್ ಕೂಡ ಮಾಡಲಾಗಿತ್ತು.
ಇದಲ್ಲದೆ ಬಜೆಟ್ ಮಂಡನೆಯನ್ನು ಫೇಸ್ಬುಕ್ ಮತ್ತು ಟ್ಟಿಟ್ಟರ್ ನಲ್ಲಿ ಲೈವ್ ಪ್ರಸಾರವನ್ನೂ ಮಾಡಲಾಗಿತ್ತು. ಒಂದೊಮ್ಮೆ ಪ್ರಯಾಣದಲ್ಲಿದ್ದವರು ನೇರ ಪ್ರಸಾರವನ್ನು ತಪ್ಪಿಸಿಕೊಂಡಿದ್ದರೆ ಅವರಿಗಾಗಿ ಬಜೆಟ್ ಮಂಡನೆಯನ್ನು ಗೂಗಲ್ ಆ್ಯಪ್ ನಲ್ಲಿ ಅಪ್ಲೋಡ್ ಕೂಡ ಮಾಡಲಾಗಿದೆ.
ಈ ಹಿಂದೆ ಆಂಧ್ರ ಪ್ರದೇಶ ಕೂಡ ಇ-ಬಜೆಟ್ ಮಂಡಿಸಿತ್ತು. ಆದರೆ ಇದು ಶಾಸಕರಿಗೆ ಮಾತ್ರ ಸೀಮಿತವಾಗಿತ್ತು. ಉಳಿದವರಿಗೆ ಈ ಸೌಲಭ್ಯ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಪೂರ್ಣ ಪ್ರಮಾಣದ ಇ-ಬಜೆಟ್ ನ್ನು ಅಸ್ಸಾಂನಲ್ಲಿ ಮಂಡಿಸಲಾಯಿತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications