'ಮದ್ರಸಾ ಮಾದರಿ' ಶಿಕ್ಷಣಕ್ಕೆ ಗುಡ್ ಬೈ ಹೇಳಿದ ಅಸ್ಸಾಂ ಬಿಜೆಪಿ ಸರಕಾರ
“ಮದ್ರಸಾ ಶಿಕ್ಷಣಕ್ಕೆ ನಾವು ತಿಲಾಂಜಲಿ ನೀಡುತ್ತಿಲ್ಲ. ಇದನ್ನು ಪ್ರೌಢ ಶಿಕ್ಷಣದಡಿಯಲ್ಲಿ ತರಲಾಗುವುದು,” ಎಂದು ಅಸ್ಸಾ ಶಿಕ್ಷಣ ಸಚಿವ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.
ಅಸ್ಸಾಂ, ಮೇ 10: ಮದ್ರಸಾ ಮಾದರಿಯ ಶಿಕ್ಷಣಕ್ಕೆ ಅಸ್ಸಾಂ ಬಿಜೆಪಿ ಸರಕಾರ ಅಂತಿಮ ವಿದಾಯ ಹೇಳಿದೆ. ಆಧುನಿಕ ಶಿಕ್ಷಣವನ್ನು ಬೆಂಬಲಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ.
ಈ ಕುರಿತು ಹೇಳಿಕೆ ನೀಡಿರುವ ರಾಜ್ಯ ಶಿಕ್ಷಣ ಸಚಿವ ಹಿಮಂತ ಬಿಸ್ವ ಶರ್ಮಾ, "ರಾಜ್ಯ ಸರಕಾರ ಮದ್ರಸಾ ಶಿಕ್ಷಣ ಮಂಡಳಿಯನ್ನು ವಿಸರ್ಜನೆ ಮಾಡಲು ನಿರ್ಧರಿಸಿದೆ. ಇದನ್ನು ಪ್ರೌಢ ಶಿಕ್ಷಣ ಮಂಡಳಿ ಅಡಿಯಲ್ಲಿ ತರಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದಾರೆ.

"ಮದ್ರಸಾ ಶಿಕ್ಷಣಕ್ಕೆ ನಾವು ತಿಲಾಂಜಲಿ ನೀಡುತ್ತಿಲ್ಲ. ಇದನ್ನು ಪ್ರೌಢ ಶಿಕ್ಷಣದಡಿಯಲ್ಲಿ ತರಲಾಗುವುದು," ಎಂದು ಶರ್ಮಾ ಹೇಳಿದ್ದಾರೆ. ಈ ಹಿಂದೆ ಶರ್ಮಾ ಮದ್ರಸಾಗಳಿಗೆ ಶುಕ್ರವಾರ ರಜೆ ಇರುವುದಿಲ್ಲ ಎಂದ ಹೇಳಿ ವಿವಾದ ಹುಟ್ಟುಹಾಕಿದ್ದರು.
ಕಂಪ್ಯೂಟರ್ ರೀತಿಯ ಅತ್ಯಾಧುನಿಕ ಶಿಕ್ಷಣ ಮಾದರಿಯನ್ನು ಈ ಶಾಲೆಗಳಲ್ಲಿ ಜಾರಿಗೆ ತರಲು ಸಾಧ್ಯವಿಲ್ಲ.ಹೀಗಾಗಿ ನಾವು ಈಗಿರುವ ಮದ್ರಸಾ ಶಿಕ್ಷಣದ ವಿನ್ಯಾಸವನ್ನು ಬದಲಿಸುತ್ತಿರುವುದಾಗಿ ಅವರು ಹೇಳಿದ್ದಾರೆ.
ಇನ್ನು ಅಸ್ಸಾಂನ ಎಲ್ಲಾ ಶಾಲೆಗಳಲ್ಲೂ 5ನೇ ತರಗತಿ ನಂತರ ಪರೀಕ್ಷೆ ಕಡ್ಡಾಯ ಮಾಡಲಾಗುವುದು ಎಂದು ಶರ್ಮಾ ಹೇಳಿದ್ದಾರೆ. ಇಲ್ಲಿಯವರಗೆ ಅಸ್ಸಾಂನಲ್ಲಿ 8ನೇ ತರಗತಿಯ ನಂತರ ಮಾತ್ರ ಪರೀಕ್ಷೆ ಇರುತ್ತಿತ್ತು.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications