ಈ ರಾಜ್ಯದಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ!
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದವರಿಗೆ ಸರ್ಕಾರಿ ಉದ್ಯೋಗ ನಿರಾಕರಿಸುವ ಜನಸಂಖ್ಯಾ ಯೋಜನೆಯ ಕರಡು ನೀತಿಯೊಂದನ್ನು ಅಸ್ಸಾಂ ಸರ್ಕಾರ ಜಾರಿಗೆ ತಂದಿದೆ. ಗೃಹ ಹಂಚಿಕೆ ಮುಂತಾದ ಸರ್ಕಾರಿ ಯೋಜನೆಗಳಿಗೂ ಈ ಯೋಜನೆ ಅನ್ವಯವಾಗಲಿದೆ.
ಗುವಾಹಟಿ, ಏಪ್ರಿಲ್ 10 : ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದವರಿಗೆ ಸರ್ಕಾರಿ ಉದ್ಯೋಗ ನಿರಾಕರಿಸುವ ಜನಸಂಖ್ಯಾ ಯೋಜನೆಯ ಕರಡು ನೀತಿಯೊಂದನ್ನು ಅಸ್ಸಾಂ ಸರ್ಕಾರ ಭಾನುವಾರ ಪ್ರಕಟಿಸಿದೆ.
ಕರಡು ನೀತಿಯ ಪ್ರಕಾರ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವವರು ಸರ್ಕಾರಿ ಉದ್ಯೋಗಕ್ಕೆ ಅರ್ಹರಾಗಿರುವುದಿಲ್ಲ ಎಂದು ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಷರತ್ತಿನ ಅನ್ವಯ ಈಗಾಗಲೇ ಉದ್ಯೋಗ ಪಡೆದುಕೊಂಡವರು ತಮ್ಮ ಸೇವಾವಧಿ ಪೂರ್ಣಗೊಳ್ಳುವವರೆಗೂ ಇದನ್ನು ಪಾಲಿಸಬೇಕು. ಅಲ್ಲದೇ, ಟ್ರ್ಯಾಕ್ಟರ್ ನೀಡಿಕೆ, ಗೃಹ ಹಂಚಿಕೆ ಮುಂತಾದ ಸರ್ಕಾರಿ ಯೋಜನೆಗಳಿಗೂ ಯೋಜನೆ ಅನ್ವಯವಾಗಲಿದೆ.
Assam: No govt. jobs if you have more than two kids
— ANI Digital (@ani_digital) April 10, 2017
Read @ANI_news story:https://t.co/LRR2a2sl17 pic.twitter.com/9P0UjEa4iS
ಪಂಚಾಯತ್, ಮುನಿಸಿಪಾಲಿಟಿ ಚುನಾವಣೆ ಸೇರಿದಂತೆ ರಾಜ್ಯ ಚುನಾವಣಾ ಆಯೋಗದ ಅಡಿಯಲ್ಲಿ ನೆಡೆಯುವ ಚುನಾವಣಾ ಅಭ್ಯರ್ಥಿಗಳೂ ಈ ನೀತಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications