ರಾಹುಲ್ ಗಾಂಧಿಗೆ ಕಿಸ್ ಕೊಟ್ಟಿದ್ದ ಮಹಿಳೆಯ ಭೀಕರ ಹತ್ಯೆ
ಜೊರ್ಹಾತ್ (ಗುವಾಹಟಿ), ಮಾರ್ಚ್ 1- ಇನ್ನೂ ಲೋಕಸಭಾ ಚುನಾವಣೆಗೆ ಅಧಿಸೂಚನೆಯೇ ಪ್ರಕಟವಾಗಿಲ್ಲ. ಅದಾಗಲೆ ರಾಜಕೀಯ ಪಕ್ಷಗಳು ನ ಭೂತೋ ಎಂಬಂತೆ ತೀವ್ರ ಪ್ರಚಾರದಲ್ಲಿ ತೊಡಗಿವೆ. ಹೀಗಿರುವಾಗಲೇ ಚುನಾವಣಾ ಪ್ರವಾರವು ತನ್ನ ಮೊದಲ ಬಲಿಯನ್ನು ತೆಗೆದುಕೊಂಡಿದೆ.
ಬುಧವಾರ ಗೌಹಾಟಿಯ ಜೊರ್ಹಾತ್ (जोरहाट) ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ವೇಳೆ ಕೆಲ ಮಹಿಳೆಯರು ರಾಹುಲ್ ಗಾಂಧಿ ಕೆನ್ನೆಯ ಮೇಲೆ ಮುತ್ತಿನ ಮಳೆ ಸುರಿಸಿದ್ದರು. ಆದರೆ ಆ ಪೈಕಿ ಒಬ್ಬ ಮಹಿಳೆಯನ್ನು ಇಂದು ಬೆಳಗ್ಗೆ ಆಕೆಯ ಪತಿರಾಯ ಬೆಂಕಿ ಹಚ್ಚಿ ಸಾಯಿಸಿದ್ದಾನೆ. ತದನಂತರ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮಹಿಳೆಯು ಪರಪುರುಷನಿಗೆ ಅದೂ ಸಾರ್ವಜನಿಕವಾಗಿ ಚುಂಬಿಸಿದ್ದೇ ಈ ಕುಕೃತ್ಯಕ್ಕೆ ಕಾರಣವಾ? ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲವಾದರೂ ಸಾಂದರ್ಭಿಕ ಸಾಕ್ಷ್ಯ ನೋಡಿದರೆ ಕಿಸ್ ಕೊಟ್ಟಿದ್ದೇ ಮಹಿಳೆಯನ್ನು ಸಾವಿನ ಮನೆಗೆ ದೂಡಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ಅಬ್ಬರದಲ್ಲಿ ತೊಡಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇದು ಇರುಸುಮುರುಸು ತರುವಂತಹ ಸಂಗತಿಯಾಗಿದೆ.
ಮಹಿಳೆಯರು ರಾಹುಲ್ ಗಾಂಧಿಯನ್ನು ಮುತ್ತಿಕ್ಕುವ ದೃಶ್ಯಗಳು ಟಿವಿಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿತ್ತು. ಆದರೆ ರಾಹುಲ್ ಗಾಂಧಿ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಅದೊಂದು ಅತ್ಯುತ್ಸಾಹದ ವರ್ತನೆಯಷ್ಟೇ ಎಂದಿದ್ದರು. ಆದರೆ ಮಹಿಳೆಯ ಪತಿರಾಯ ಇದನ್ನು ಗಂಭೀರವಾಗಿ ಪರಿಗಣಿಸಿ ಇದೀಗ ಅನಾಹುತ ಮಾಡಿದ್ದಾನೆ.
ಮಹಿಳಾ ಸಶಕ್ತೀಕರಣ ಸಮಾವೇಶದಲ್ಲಿ... ಅಂದು ಸುಮಾರು 600 ಮಹಿಳೆಯರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಅವರ ಪೈಕಿ ಕೆಲವರು ಬಿಗಿ ಭದ್ರತೆಯನ್ನು ಬೇಧಿಸಿ, ರಾಹುಲ್ ಬಳಿ ಸಾಗಿಬಂದು ರಾಹುಲ್ ಗಾಂಧಿಯನ್ನು ಒಂದೇ ಸಮನೆ ಮುದ್ದುಮಾಡಿದ್ದರು. ಮೃತ ಮಹಿಳೆಯ ಹೆಸರು ಬೊಂತಿ (Bonti) ಎಂದು ತಿಳಿದುಬಂದಿದೆ. ಈಕೆ ಸ್ಥಳೀಯ ವಾರ್ಡೊಂದರ ಕಾಂಗ್ರೆಸ್ ಸದಸ್ಯೆಯಾಗಿದ್ದರು.

'ಮಹಿಳೆಯರನ್ನು ರಾಜಕೀಯದ ಮುಖ್ಯವಾಹಿನಿಗೆ ತರಬೇಕು. ಅವರನ್ನು ಸಬಲೀಕರಣಗೊಳಿಸಬೇಕು. ಅವರಿಗೆ ಎಲ್ಲ ಕ್ಷೇತ್ರಗಳಲ್ಲೂ ಅರ್ಹ ಸ್ಥಾನಗಳನ್ನು ನೀಡಬೇಕು. ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಮೊದಲು ನಮ್ಮ ಸಮಾಜದಲ್ಲಿ ಪರಿವರ್ತನೆ ಕಾಣಬೇಕು. ಹೆಣ್ಣನ್ನು ಉನ್ನತ ಸ್ಥಾನದಲ್ಲಿ ನೋಡಬೇಕು' ಎಂದು ಬುಧವಾರ ಈ ಮಹಿಳೆಯರನ್ನುದ್ದೇಶಿಸಿ ರಾಹುಲ್ ಹೇಳಿದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications