Get Updates
Get notified of breaking news, exclusive insights, and must-see stories!

ಅತೀಕ್ ಅಹ್ಮದ್ ಮತ್ತು ಅಶ್ರಫ್ ಹತ್ಯೆ: ತಡರಾತ್ರಿವರೆಗೂ ಸಿಎಂ ಸಭೆ, ಯುಪಿಯಲ್ಲಿ ಹೈಅಲರ್ಟ್

ಲಕ್ನೋ ಏಪ್ರಿಲ್ 16: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಮಾಫಿಯಾ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಕಳೆದ ರಾತ್ರಿ (ಏಪ್ರಿಲ್15) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇದರಿಂದ ಉತ್ತರ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಕ್ರಿಮಿನಲ್ ಹತ್ಯೆಯ ಬಳಿಕ ಶನಿವಾರ (ಏಪ್ರಿಲ್15) ರಾತ್ರಿ ಸಿಎಂ ಯೋಗಿ ಆದಿತ್ಯನಾಥ್ ಅವರು ಉನ್ನತ ಮಟ್ಟದ ಸಭೆ ಕರೆದಿದ್ದರು. ಈ ಮಹತ್ವದ ಸಭೆ ತಡರಾತ್ರಿ 3 ಗಂಟೆ ಸುಮಾರಿಗೆ ಮುಕ್ತಾಯವಾಗಿದೆ. ಮೂಲಗಳ ಪ್ರಕಾರ ಯುಪಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಇದೇ ವೇಳೆ, ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಸಿಎಂ ಯೋಗಿ ಜನತೆಗೆ ಮನವಿ ಮಾಡಿದ್ದಾರೆ.

Assassination of Atiq Ahmed and Ashraf: Late night high-level meeting at CM Yogis residence

ಎಚ್ಚರಿಕೆಯಿಂದ ಇರುವಂತೆ ಯೋಗಿ ಸೂಚನೆ

ಕ್ಷೇತ್ರದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಹೇಳಿದ್ದಾರೆ. 'ಇದಕ್ಕೆ ರಾಜ್ಯದ ಎಲ್ಲ ನಿವಾಸಿಗಳೂ ಸಹಕಾರ ನೀಡುತ್ತಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ಸಮಸ್ಯೆ ಎದುರಿಸುವುದಿಲ್ಲ. ಯಾರೂ ಕಾನೂನಿನ ಜೊತೆ ಆಟವಾಡಬಾರದು. ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ' ಎಂದು ಸಿಎಂ ಯೋಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಡಿಜಿಪಿ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಉಪಸ್ಥಿತ

ಸಿಎಂ ಯೋಗಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಡಿಜಿಪಿ ಆರ್.ಕೆ.ವಿಶ್ವಕರ್ಮ ಅವರಲ್ಲದೆ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸಂಜಯ್ ಪ್ರಸಾದ್ ಕೂಡ ಭಾಗಿಯಾಗಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ವಿಶೇಷ ವಿಮಾನದ ಮೂಲಕ ಪ್ರಯಾಗ್‌ರಾಜ್‌ಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ಸಭೆಯಲ್ಲಿ ನಿರ್ಧರಿಸಿದ್ದಾರೆ. ಈ ಸಭೆಯ ನಂತರ ಡಿಜಿಪಿ ಮತ್ತು ಹೆಚ್ಚುವರಿ ಮಹಾನಿರ್ದೇಶಕರಾದ ಕಾನೂನು ಮತ್ತು ಸುವ್ಯವಸ್ಥೆ ಪ್ರಶಾಂತ್ ಕುಮಾರ್ ಬೆಳಗಿನ ಜಾವ 3 ಗಂಟೆ ಸುಮಾರಿಗೆ ತೆರಳಿದರು.

ಅಶ್ರಫ್-ಅತೀಕ್ ಹತ್ಯೆಯ ನಂತರ ಇಡೀ ಯುಪಿಯಲ್ಲಿ ಅಲರ್ಟ್

ಪ್ರಯಾಗ್‌ರಾಜ್‌ನಲ್ಲಿ ಅತೀಕ್-ಅಶ್ರಫ್ ಹತ್ಯೆಯ ನಂತರ, ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಶನಿವಾರ ರಾತ್ರಿ ಪ್ರಯಾಗ್‌ರಾಜ್‌ನಲ್ಲಿ ಅತೀಕ್-ಅಶ್ರಫ್ ಹತ್ಯೆಯ ನಂತರ ಭದ್ರತೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಪೊಲೀಸ್ ಸಿಬ್ಬಂದಿಯ ರಜೆ ರದ್ದತಿಯೊಂದಿಗೆ 17 ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಪೊಲೀಸ್ ಪೇದೆ ಮೇಲೆ ಗುಂಡು ಹಾರಿಸಿರುವುದಾಗಿ ವರದಿಯಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Assassination of Atiq Ahmed and Ashraf: Late night high-level meeting at CM Yogis residence

ಉಮೇಶ್ ಪಾಲ್ ಮನೆಗೆ ಭದ್ರತೆ ಹೆಚ್ಚಳ

ಉತ್ತರ ಪ್ರದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಕಣ್ಣಿಡಲು ರಾಜ್ಯದ ಎಲ್ಲಾ ನಗರಗಳಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಉಮೇಶ್ ಪಾಲ್ ಅವರ ಮನೆಯ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಕರಣದ ಪರಿಶೀಲನೆಯ ನಂತರ, ಡಿಜಿಪಿ ಮತ್ತು ಗೃಹ ಕಾರ್ಯದರ್ಶಿಯನ್ನು ಪ್ರಯಾಗ್‌ರಾಜ್‌ಗೆ ಕಳುಹಿಸಿದ್ದಾರೆ. ಓಲ್ಡ್ ಲಕ್ನೋದ ಹುಸೇನಾಬಾದ್‌ನಲ್ಲಿ ಪೊಲೀಸರು ಧ್ವಜ ಮೆರವಣಿಗೆಯನ್ನು ಕೈಗೊಂಡಿದ್ದಾರೆ ಮತ್ತು ಯುಪಿಯ ಎಲ್ಲಾ ಪಕ್ಷಗಳ ಕಚೇರಿಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+