'ನಟಿ ಮೇಲೆ ನಡೆದಿದ್ದು ವ್ಯವಸ್ಥಿತವಾದ ಹಲ್ಲೆ'
ನಟಿ ಮೇಲೆ ಹಲ್ಲೆ ನಡೆದಿರುವುದರ ಹಿಂದೆ ವ್ಯವಸ್ಥಿತವಾದ ಸಂಚಿದೆ. ಆದರೆ, ಪೊಲೀಸರ ತನಿಖೆ ಬಗ್ಗೆ ನಂಬಿಕೆ ಇದೆ ಎಂದು ನಟಿ ಮಂಜು ವಾರಿಯರ್ ಪ್ರತಿಕ್ರಿಯಿಸಿದ್ದಾರೆ.
ತಿರುವನಂತಪುರಂ, ಫೆಬ್ರವರಿ 24: ನಟಿ ಮೇಲೆ ಹಲ್ಲೆ ನಡೆದಿರುವುದರ ಹಿಂದೆ ವ್ಯವಸ್ಥಿತವಾದ ಸಂಚಿದೆ. ಆದರೆ, ಪೊಲೀಸರ ತನಿಖೆ ಬಗ್ಗೆ ನಂಬಿಕೆ ಇದೆ ಎಂದು ನಟಿ ಮಂಜು ವಾರಿಯರ್ ಪ್ರತಿಕ್ರಿಯಿಸಿದ್ದಾರೆ.
ಯುವನಟಿಯ ಮೇಲಿನ ಹಲ್ಲೆ ಪ್ರಕರಣಕ್ಕ್ ಸಂಬಂಧಿಸಿದಂತೆ ನನ್ನದೇನೂ ತಪ್ಪಿಲ್ಲ ಎಂದು ಜನಪ್ರಿಯ ಸ್ಟಾರ್ ನಟ ದಿಲೀಪ್ ಹೇಳಿಕೆ ನೀಡಿದ ಬಳಿಕ ಅವರ ಮಾಜಿ ಪತ್ನಿ ಮಂಜು ಪ್ರತಿಕ್ರಿಯಿಸಿದ್ದಾರೆ.
ಹಲ್ಲೆ ಹಿಂದಿನ ವ್ಯಕ್ತಿಗಳು, ಪಿತೂರಿ ಎಲ್ಲವೂ ಬಹಿರಂಗವಾಗಲಿ, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಮಂಜು ವಾರಿಯರ್ ಹೇಳಿದ್ದಾರೆ.[ನಟಿ ಮೇಲೆ ಕಿರುಕುಳ, ನನ್ನ ಪಾತ್ರವಿಲ್ಲ ಎಂದ ಸ್ಟಾರ್ ನಟ]

ದಿಲೀಪ್ ಹೇಳಿಕೆ: ನನ್ನ ಮನಗೆ ವಿಚಾರಣೆಗಾಗಿ ಪೊಲೀಸರು ಬಂದಿಲ್ಲ. ನಾನು ಕೂಡಾ ಠಾಣೆಗೆ ಹೋಗಿಲ್ಲ. ಈ ಕೇಸಿನಲ್ಲಿ ನಾನು ಆರೋಪಿಯಾಗಿದ್ದರೂ ಪೊಲೀಸರು ನನ್ನನ್ನು ವಿಚಾರಣೆ ಒಳಪಡಿಸಲ್ಲ ಎಂಬ ಆಧಾರ ರಹಿತ ಸುದ್ದಿಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಡಲಾಗುತ್ತಿದೆ. ಇದೊಂದು ವ್ಯವಸ್ಥಿತ ಸಂಚು ಎಂದು ದಿಲೀಪ್ ಹೇಳಿದ್ದರು. [ಮಲಯಾಳಿ ನಟಿ ಮೇಲೆ ದೌರ್ಜನ್ಯ : ಆರೋಪಿ ನಂ.1 ಪಲ್ಸರ್ ಸುನಿ ಅರೆಸ್ಟ್]
ನಟಿ ಮಂಜು ವಾರಿಯರ್ ಹಾಗೂ ದಿಲೀಪ್ ನಡುವಿನ ವಿವಾಹ ಬಂಧನ ಮುರಿದು ನಂತರ ದಿಲೀಪ್ ಅವರು ಇತ್ತೀಚೆಗೆ ನಟಿ ಕಾವ್ಯ ಮಾಧವನ್ ಅವರನ್ನು ಮದುವೆಯಾಗಿದ್ದು ಗೊತ್ತಿರಬಹುದು. ಆದರೆ, ಮಂಜು ವಾರಿಯರ್ ಅವರೊಂದಿಗೆ ವಿವಾಹ ವಿಚ್ಛೇದನ ಪಡೆಯುವ ಸಂದರ್ಭದಲ್ಲಿ ಈಗ ಹಲ್ಲೆಗೊಳಲಾಗಿರುವ ನಟಿ ಅವರು ಮಂಜು ಪರ ನಿಂತಿದ್ದರು. ಇದರಿಂದ ದಿಲೀಪ್ ಹಾಗೂ ನಟಿ ನಡುವೆ ಕಂದಕ ಏರ್ಪಟ್ಟಿತ್ತು ಎಂಬ ಸುದ್ದಿಯಿತ್ತು.
ಈಗ ಹಲ್ಲೆಗೊಳಗಾದ ನಟಿ ಮೇಲೆ ಚಿತ್ರರಂಗ ನಿಷೇಧ, ನಿರ್ಬಂಧ ಹೇರಲು ಪರೋಕ್ಷವಾಗಿ ಕಾರಣರಾಗಿದ್ದರು ಎಂಬ ಸುದ್ದಿ ಹಬ್ಬಿತ್ತು. ಆದರೆ, ಮಂಜು ಇದಕ್ಕೆಲ್ಲ ಸ್ಪಷ್ಟನೆ ನೀಡಿದ್ದರು. [ಮಲಯಾಳಂ ನಟಿ ದೌರ್ಜನ್ಯದ ಹಿಂದೆ ಕೊಟೇಷನ್ ಮಾಫಿಯಾ?]
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications