Jharkhand Assembly Election 2024: ಜಾರ್ಖಂಡ್ನಲ್ಲಿ ಗೆಲ್ಲುವ ಪಕ್ಷ ಹೆಸರಿಸಿದ ಜೆ.ಪಿ.ನಡ್ಡಾ
Jharkhand Assembly Election 2024: ಈಗಾಗಲೇ ಜಾರ್ಖಂಡ್ನಲ್ಲಿ 43 ವಿಧಾನಸಭೆ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆದಿದೆ. ಇನ್ನು ಎರಡನೇ ಹಂತದ ಮತದಾನ ನವೆಂಬರ್ 20ರಂದ ನಡೆಯಲಿದೆ. ಈ ಹಿನ್ನೆಲೆ ಗೆಲುವು ಸಾಧಿಸಲು ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಇದೀಗ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಬಾಕಿಯಿದ್ದು, ಮತದಾರರನ್ನು ಸೆಳೆಯುವ ಕೆಲಸದಲ್ಲಿ ರಾಜಕೀಯ ನಾಯಕರು ನಿರತರಾಗಿದ್ದಾರೆ. ಒಬ್ಬರ ಮೇಲೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಹಾಗೆಯೇ ಇದೀಗ ಜಾರ್ಖಂಡ್ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆಕ್ರೋಶ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಹೇಮಂತ್ ಸೊರೇನ್ ನೇತೃತ್ವದ ಜೆಎಂಎಂ ಪಕ್ಷವು ತನ್ನ 5 ವರ್ಷಗಳ ಅಧಿಕಾರದಲ್ಲಿ ಬುಡಕಟ್ಟು ರಾಜ್ಯ ಜಾರ್ಖಂಡ್ ಅನ್ನು ವಂಚನೆ, ಶೋಷಣೆ ಮತ್ತು ಲೂಟಿ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆರೋಪ ಮಾಡಿದ್ದಾರೆ.
ಬೊಕಾರೊದ ಗೋಮಿಯಾದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೇಮಂತ್ ಸೊರೇನ್ ಸರ್ಕಾರವು ನಿಮ್ಮೊಂದಿಗೆ ದೊಡ್ಡ ಮೋಸವನ್ನು ಮಾಡಿದೆ. ಅವರ 5 ವರ್ಷಗಳ ಸರ್ಕಾರವು ಜಾರ್ಖಂಡ್ ಅನ್ನು ಬಡವಾಗುವಂತೆ ಮಾಡಿದೆ ಎಂದು ಆರೋಪ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ನವೆಂಬರ್ 20ರಂದು ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಸರ್ಕಾರವನ್ನು ಬೇರುಸಹಿತ ಕಿತ್ತೆಸೆಯಲು ಜಾರ್ಖಂಡ್ನ ಜನರು ಬಯಸಿದ್ದಾರೆ ಎಂಬ ಸಂಕೇತಗಳಿಗೆ ಜನ್ ಸೈಲಾಬ್ ಸಾಕ್ಷಿಯಾಗಿದೆ ಎಂದು ಹೇಳಿದರು. ನವೆಂಬರ್ 13ರಂದು ನಡೆದ ಮೊದಲ ಹಂತದ ಮತದಾನವು ಬಿಜೆಪಿ, ಎಜೆಎಸ್ಯು ಮತ್ತು ಎನ್ಡಿಎ ನೇತೃತ್ವದ ಸರ್ಕಾರವನ್ನು ಜನರು ಆಯ್ಕೆ ಮಾಡಲು ಸಿದ್ಧರಾಗಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ಈಗಾಗಲೇ ರವಾನಿಸಿದೆ ಎಂದು ಹೇಳಿದರು.
ಈಗಾಗಲೇ ಜಾರ್ಖಂಡ್ನ 43 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 13ರಂದು ಮೊದಲ ಹಂತದಲ್ಲಿ ಮತದಾನ ನಡೆದಿದ್ದು, ನವೆಂಬರ್ 20ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿ ವಿರುದ್ಧ ಆರೋಪ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಉತ್ತರ ಪ್ರದೇಶದಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೆಯೇ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮೂಲಕ ಗಳಿಸಿದ ಹಣವನ್ನು ಬಿಜೆಪಿಯು ಇತರ ರಾಜ್ಯಗಳಲ್ಲಿನ ಚುನಾವಣಾ ಪ್ರಚಾರಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
"ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಗಳಿಸಿದ ಹಣದಿಂದ ಜಾರ್ಖಂಡ್ ಚುನಾವಣೆ ವೇಳೆ ಬಿಜೆಪಿ ಆಡಂಬರ ಮುಂದುವರೆಸಿದೆ. ಇತ್ತೀಚಿನ ದಿನಗಳಲ್ಲಿ ಕೋಳಿ ಕಳ್ಳತನ ಪ್ರಕರಣಗಳನ್ನೂ ತನಿಖೆ ನಡೆಸುತ್ತಿರುವ ಇ.ಡಿ, ಸಿಬಿಐ, ಎನ್ಐಎ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ತನಿಖೆ ಆರಂಭಿಸಿಲ್ಲ. ಯಾಕೆಂದರೆ, ಅದರ ಹಿಂದೆ ಇರುವುದೇ ಬಿಜೆಪಿ. ಚುನಾವಣೆ ಮುಗಿದ ಬಳಿಕ ಆ ಹಣದಿಂದಲೇ ಶಾಸಕರು, ಸಂಸದರನ್ನು ಖರೀದಿ ಮಾಡುತ್ತಿದೆ," ಎಂದು ಟ್ವೀಟ್ ಮೂಲಕ ಆರೋಪ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications