Jharkhand Election: ಮತ್ತೊಮ್ಮೆ ಜಾರ್ಖಂಡ್ಗೆ ಭೇಟಿ ನೀಡುತ್ತೇನೆ; ಪ್ರಧಾನಿ ಮೋದಿ ಹೀಗೆ ಹೇಳಿದ್ಯಾಕೆ?
Jharkhand Assembly Election 2024: ಜಾರ್ಖಂಡ್ನಲ್ಲಿ 81ರಲ್ಲಿ 43 ವಿಧಾನಸಭೆ ಸ್ಥಾನಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಇಲ್ಲಿ ಮತ್ತೆ ಗೆಲುವು ಸಾಧಿಸಲು ಕಾಂಗ್ರೆಸ್ ಮೈತ್ರಿ ಪಕ್ಷ ಜೆಎಂಎಂ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಮತ್ತೊಂದೆಡೆ ಬಿಜೆಪಿ ಕೂಡ 2019ರ ಸೇಡು ತೀರಿಸಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ ಏನು ಹೇಳಿದ್ದಾರೆಂದು ಇಲ್ಲಿ ತಿಳಿಯಿರಿ.
ಜಾರ್ಖಂಡ್ನ ದಿಯೋಘರ್ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಚುನಾವಣೆ ಫಲಿತಾಂಶದ ನಂತರ ನಾನು ಮತ್ತೊಮ್ಮೆ ಜಾರ್ಖಂಡ್ಗೆ ಭೇಟಿ ನೀಡುತ್ತೇನೆ. ಎನ್ಡಿಎ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆಂದು ಭರವಸೆ ನೀಡುತ್ತೇನೆ ಅಂತಲೂ ಹೇಳುವ ಮೂಲಕ ಗಮನ ಸೆಳೆದಿದ್ದಾರೆ.

ಬಿಜೆಪಿ-ಎನ್ಡಿಎ ಪರವಾಗಿ ಪ್ರತಿ ಮತವೂ ಜಾರ್ಖಂಡ್ನ ಅಭಿವೃದ್ಧಿಗೆ ಹೊಸ ಚೈತನ್ಯವನ್ನು ನೀಡುತ್ತದೆ ಎಂದರು. ಇದೇ ವೇಳೆ ಮಾತು ಮುಂದುವರೆಸಿದ ಅವರು, ಜೆಎಂಎಂ ನೇತೃತ್ವದ ಸರ್ಕಾರವು ಜಾರ್ಖಂಡ್ನಲ್ಲಿ ನುಸುಳುಕೋರರಿಗೆ ಶಾಶ್ವತ ನಾಗರಿಕರಾಗಲು ಅವಕಾಶ ಮಾಡಿಕೊಟ್ಟಿದೆ.
ಕಾಂಗ್ರೆಸ್ ಮೈತ್ರಿ ಪಕ್ಷ ಜೆಎಂಎಂ ಸರ್ಕಾರದ ಅವಧಿಯಲ್ಲಿ, ನುಸುಳುಕೋರರು ಹೊರಗಿನಿಂದ ಖಾಯಂ ನಿವಾಸಿಗಳಾಗಿ ಬರುವಂತೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಮೂಲಕ ಜಾರ್ಖಂಡ್ನಲ್ಲಿ ದೊಡ್ಡ ಪಿತೂರಿ ನಡೆಯುತ್ತಿದೆ. ಇದನ್ನೆಲ್ಲ ಮಟ್ಟ ಹಾಕಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಬೇರೆಡೆಯಿಂದ ಬಂದಂತಹ ನುಸುಳುಕೋರರಿಗೆ ರಾತ್ರೋರಾತ್ರಿ ಖಾಯಂ ನಿವಾಸಿ ಎಂಬ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಅಲ್ಲದೆ, ಬುಡಕಟ್ಟು ಹೆಣ್ಣುಮಕ್ಕಳನ್ನು ಮದುವೆಯ ಹೆಸರಿನಲ್ಲಿ ವಂಚಿಸಲಾಗಿದ್ದು, ಅವರ ಭೂಮಿಯನ್ನು ಕಿತ್ತುಕೊಳ್ಳಲಾಯಿತು. ಈ ಅತಿಕ್ರಮಣಕಾರರು ನಿಮ್ಮ ಉದ್ಯೋಗ, ಅನ್ನವನ್ನು ಕಸಿದುಕೊಂಡರು. ಆದರೂ, ಜಾರ್ಖಂಡ್ನಲ್ಲಿ ಯಾವುದೇ ಒಳನುಸುಳುವಿಕೆ ನಡೆದಿಲ್ಲ ಎಂದು ಜೆಎಂಎಂ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ, ಅಂತಾ ಮೋದಿ ಹೇಳಿದರು.
ಎಸಿ ರೂಂನಲ್ಲಿ ಕುಳಿತುಕೊಂಡು ರಾಜಕೀಯ ಲೆಕ್ಕಾಚಾರ ಹಾಕುವವರಿಗೆ ಈ ಚುನಾವಣೆಯ ಫಲಿತಾಂಶ ತಕ್ಕ ಉತ್ತರ ಕೊಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಈಗಾಗಲೇ ನಿನ್ನೆಯೂ ಕೂಡ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆದಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ: ಕಾಂಗ್ರೆಸ್ ಕರ್ನಾಟಕದ ಜನರನ್ನು ಲೂಟಿ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ನವೆಂಬರ್ 12) ವಾಗ್ದಾಳಿ ನಡೆಸಿದ್ದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಹಣ ಬಳಕೆ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದರು.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮಾತ್ರ ಅಭಿವೃದ್ಧಿ ಸಾಧ್ಯ ಎಂದರು. ಇನ್ನು ಪುಣೆ ಕುರಿತು ಮಾತನಾಡಿದ ಅವರು, ಮುಂದಿನ 5 ವರ್ಷಗಳಲ್ಲಿ ನಗರವು ಪ್ರಗತಿಯತ್ತ ಸಾಗಲಿದೆ. ಪುಣೆಯ ಅಭಿವೃದ್ಧಿ ಕಾಣಲು ಹೂಡಿಕೆ, ಮೂಲಸೌಕರ್ಯ ಮತ್ತು ಉದ್ಯಮದ ಅಗತ್ಯವಿದೆ ಎಂದು ಹೇಳಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications