ವಿಧಾನಸಭೆ ಚುನಾವಣೆ 2025: ಈ ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ ಮತದಾನ: ತಾತ ಏನ್ ಹೇಳಿದ್ರು ನೋಡಿ..
Bihar Assembly Election 2025: ಬಿಹಾರದಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ನವೆಂಬರ್ 6) ನಡೆಯುತ್ತಿದೆ. 18 ಜಿಲ್ಲೆಗಳ 121 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇನ್ನೂ ಇಲ್ಲೊಂದು ಕ್ಷೇತ್ರದ ಜನರಿಗೆ 20 ವರ್ಷಗಳ ಬಳಿಕ ಈ ಭಾಗ್ಯ ಸಿಕ್ಕಿದೆ. ಹಾಗಾದ್ರೆ ಎಲ್ಲಿ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಿಹಾರದಲ್ಲಿ ಒಟ್ಟು 2 ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಪೈಕಿ ಇಂದು (ನವೆಂಬರ್ 6) 18 ಜಿಲ್ಲೆಗಳ 121 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ. ನವೆಂಬರ್ 11ರಂದು 2ನೇ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14ರಂದು ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

ಇದೀಗ ಬಿಹಾರದ ನಕ್ಸಲ್ ಪ್ರಭಾವಿತ ಮುಂಗೇರ್ನ ಭೀಂಬಾಂಡ್ ಪ್ರದೇಶದಲ್ಲಿ 20 ವರ್ಷಗಳ ಬಳಿಕ ಮೊದಲ ಬಾರಿಗೆ ಮತದಾನ ನಡೆಯುತ್ತಿದೆ. ಈ ಬಗ್ಗೆ ಸ್ಥಳೀಯ ವೃದ್ಧರೊಬ್ಬರು ಮಾತನಾಡಿದ್ದು, "ನಮಗೆ ಮತದಾನ ಮಾಡಿದ್ದಕ್ಕೆ ತುಂಬಾ ತುಂಬಾ ಸಂತೋಷ ಆಗಿದೆ. ನೀವು ಎಲ್ಲರೂ ಇಲ್ಲಿ ಬಂದಿದ್ದಕ್ಕೆ ನನಗೆ ಬಹಳ ಖುಷಿಯಾಗಿದೆ. 20 ವರ್ಷಗಳ ನಂತರ ಇಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ," ಎಂದು ಹೇಳಿದ್ದಾರೆ.
"2005ರಿಂದ ಇಲ್ಲಿನ ಪರಿಸ್ಥಿತಿ ಅನುಕೂಲಕರವಾಗಿರಲಿಲ್ಲ. ಈಗ ಯಾವುದೇ ಭಯವಿಲ್ಲ. ಇಲ್ಲಿ ಭದ್ರತಾ ಪಡೆಗಳ ಶಿಬಿರ ಸ್ಥಾಪನೆಯಾದ ನಂತರದಿಂದ ನಾವು ಶಾಂತಿಯುತವಾಗಿ ಬದುಕುತ್ತಿದ್ದೇವೆ. ಸರ್ಕಾರದ ಸೌಲಭ್ಯಗಳು ಈಗ ಬಹಳ ಉತ್ತಮವಾಗಿವೆ. ಕಳೆದ ಕೆಲವು ವರ್ಷಗಳಿಂದ ನಮಗೆ ಉಚಿತ ಪಡಿತರ ದೊರಕುತ್ತಿದೆ. ಇದಕ್ಕಾಗಿ ನಾವು ಧನ್ಯರಾಗಿದ್ದೇವೆ," ಎಂದು ಹೇಳಿದರು.
"ಈಗ ನಮಗೆ ಯಾವುದೇ ತೊಂದರೆಗಳಿಲ್ಲ. ನಾವು ಕಾಡಿನೊಳಗೆ ಶಾಂತಿಯುತವಾಗಿ ಜೀವನ ನಡೆಸುತ್ತಿದ್ದೇವೆ. ಇಲ್ಲಿ ಮತಗಟ್ಟೆ ಸ್ಥಾಪನೆ ಆಗಿರುವುದು ನಮಗೆ ಬಹಳ ಸಂತೋಷದ ವಿಷಯ. ಯುವಕರು ಮತ್ತು ವಯೋವೃದ್ಧರು ಎಲ್ಲರೂ ಮತ ಚಲಾಯಿಸಲು ಸಾಧ್ಯವಾಗಿದೆ," ಎಂದು ಸಂತಸ ವ್ಯಕ್ತಪಡಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications