Assembly Election Result 2023: ಮೂರೂ ರಾಜ್ಯಗಳಲ್ಲಿ ಆಪ್ ಸಾಧನೆ ಠುಸ್
ಈ ಪಕ್ಷಕ್ಕೆ ಇದೇ ವರ್ಷ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಕ್ಕಿತ್ತು. ಕೆಲವು ವಿಧಾನಸಭೆಯಲ್ಲಿ ಮೋಡಿ ಮಾಡುವ ಆಸೆಯನ್ನು ಹೊಂದಿದ್ದ ಪಕ್ಷಕ್ಕೆ ಮತದಾರ ಪೆಟ್ಟು ನೀಡಿದ್ದಾನೆ. ಭಾನುವಾರ ಪ್ರಕಟಗೊಂಡ ವಿಧಾನಸಭೆಯ ಚುನಾವಣೆಯಲ್ಲಿ ಆಪ್ ಸಾಧನೆ ಠುಸ್ ಆಗಿದೆ. ಆಪ್ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಭಗವಂತ್ ಮಾನ್ ಅವರೊಂದಿಗೆ ಹಲವಾರು ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದರು. ಇದರ ಹೊರತಾಗಿಯೂ ಎಎಪಿ ಈ ಚುನಾವಣೆಗಳಲ್ಲಿ ಸೋಲು ಕಂಡಿದೆ.
ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಮತದಾರ ಒಂದೇ ಪಕ್ಷದ ಕೈ ಹಿಡಿದಿದ್ದಾನೆ. ಮಧ್ಯಪ್ರದೇಶದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಹತ್ತಿರವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ ರಚಿಸಬಹುದು.

ಈ ವರ್ಷ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ಆಮ್ ಆದ್ಮಿ ಪಕ್ಷವು ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಪೂರ್ಣ ಶಕ್ತಿಯೊಂದಿಗೆ ಚುನಾವಣೆ ಎದುರಿಸಿತು. ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಭಗವಂತ್ ಮಾನ್ ಅವರೊಂದಿಗೆ ಹಲವಾರು ರ್ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದರು. ಇದರ ಹೊರತಾಗಿಯೂ ಎಎಪಿ ಈ ಚುನಾವಣೆಗಳಲ್ಲಿ ಸೋಲನ್ನು ಎದುರಿಸಬೇಕಾಯಿತು.
ಚುನಾವಣಾ ಆಯೋಗದ ಈವರೆಗಿನ ಅಂಕಿ-ಅಂಶಗಳನ್ನು ಗಮನಿಸಿದರೆ, ಆಮ್ ಆದ್ಮಿ ಪಕ್ಷವು ಚುನಾವಣೆಯಲ್ಲಿ ಯಾವುದೇ ವಿಶೇಷ ಸಾಧನೆ ಮಾಡಿಲ್ಲ. ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಸಿಎಂ ಅರವಿಂದ್ ಕೇಜ್ರಿವಾಲ್ ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಪಕ್ಷದ ಮತ ಗಳಿಕೆಯನ್ನು ಹೆಚ್ಚಿಸುವತ್ತ ಚಿತ್ತ ನೆಟ್ಟಿದ್ದರು. ಆದರೆ ಅವರ ಆಸೆ ಕೈ ಕೊಟ್ಟಿದೆ.
ಈ ಚುನಾವಣೆಯು ಆಪ್ ಪಕ್ಷ ವಿಸ್ತರಣೆಗೆ ಪೆಟ್ಟು ನೀಡಿದೆ. ಈ ಮೂರು ರಾಜ್ಯಗಳ ಚುನಾವಣೆಗಳು ಆಮ್ ಆದ್ಮಿ ಪಕ್ಷಕ್ಕೆ ಬಹಳ ಮಹತ್ವದ್ದಾಗಿದ್ದವು. ಆದರೆ ಆಪ್ ಈ ಪ್ರಯತ್ನವನ್ನು ಬಳಸಿಕೊಳ್ಳುವಲ್ಲಿ ಎಡವಿದೆ. ಇತ್ತೀಚಿಗಿನ ಶೇಕಡಾ ವಾರು ಮತಗಳನ್ನು ನೋಡಿದರೆ, ಛತ್ತೀಸ್ಗಢದಲ್ಲಿ ಆಮ್ ಆದ್ಮಿ ಪಕ್ಷ ಶೇ.0.94 ಮತಗಳನ್ನು ಪಡೆದಿದೆ. ಮಧ್ಯಪ್ರದೇಶದಲ್ಲಿ ಪಕ್ಷವು 0.44 ಮತಗಳನ್ನು ಪಡೆದಿದೆ. ಇದಲ್ಲದೇ ಎಎಪಿ ರಾಜಸ್ಥಾನದಲ್ಲಿ ಶೇ.0.38 ಮತಗಳನ್ನು ಪಡೆದಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications