ಆರಂಭಿಕ ಹಿನ್ನಡೆ ಅನುಭವಿಸುತ್ತಿರುವ ಪ್ರಮುಖ ಅಭ್ಯರ್ಥಿಗಳು
ನವದೆಹಲಿ, ಮೇ 02: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಮೊದಲಾರ್ಧಕ್ಕೆ ಸನಿಹದಲ್ಲಿದೆ. ಆರಂಭಿಕ ಮುನ್ನಡೆಗಳು ಬಂದಿದ್ದು ಕೆಲವೇ ಗಂಟೆಗಳಲ್ಲಿ ಚಿತ್ರಣ ಇನ್ನಷ್ಟು ಸ್ಪಷ್ಟವಾಗಲಿದೆ.
ಹಲವು ಅತಿರಥ-ಮಹಾರಥರು ಈ ಬಾರಿ ಚುನಾವಣೆಯಲ್ಲಿ ರಾಜಕೀಯ ಭವಿಷ್ಯ ಪಣಕ್ಕೆ ಇಟ್ಟಿದ್ದಾರೆ. ಕೆಲವು ದಿಗ್ಗಜರ ರಾಜಕೀಯ ಭವಿಷ್ಯವನ್ನು ಈ ಚುನಾವಣೆ ನಿರ್ಧರಿಸಲಿದೆ.
ಎರಡೂವರೆ ಗಂಟೆಗಳ ಚುನಾವಣಾ ಮತ ಎಣಿಕೆ ನಡೆದಿದ್ದು ಹಲವು ಪ್ರಮುಖ ಅಭ್ಯರ್ಥಿಗಳು ಆರಂಭಿಕ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಆರಂಭಿಕ ಹಿನ್ನಡೆ ಅನುಭವಿಸುತ್ತಿರುವ ಪ್ರಮುಖ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ವಕ್ಷೇತ್ರ ಬಿಟ್ಟು ತಮಗೆ ಕೈಕೊಟ್ಟ ಮಾಜಿ ಬಲಗೈ ಭಂಟ ಸುವೇಂದು ಅಧಿಕಾರಿ ವಿರುದ್ಧ ನಂದಿ ಗ್ರಾಮದಲ್ಲಿ ಸ್ಪರ್ಧೆ ಮಾಡಿದ್ದು ಮಮತಾ ಅವರು 8000 ಕ್ಕೂ ಹೆಚ್ಚು ಮತಗಳ ಹಿನ್ನಡೆ ಅನುಭವಿಸಿದ್ದಾರೆ. ಅಲ್ಲಿ ಈವರೆಗೆ (10:30 AM) ಮೂರು ಸುತ್ತಿನ ಮತ ಎಣಿಕೆ ಅಷ್ಟೆ ನಡೆದಿದೆ.
ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿ ಆಗಿದ್ದ ಅಣ್ಣಾಮಲೈ ಅವರು ಬಿಜೆಪಿಯಿಂದ ರಾಜಕೀಯ ಪಯಣ ಆರಂಭಿಸಿದ್ದು ಮೊದಲ ಬಾರಿಗೆ ತಮ್ಮದೇ ಸ್ವಕ್ಷೇತ್ರ ತಮಿಳುನಾಡಿನ ಅರವಕುರುಚ್ಚಿಯಿಂದ ಸ್ಪರ್ಧೆಗಿಳಿದಿದ್ದಾರೆ. ಆದರೆ ಅಲ್ಲಿ ಅವರು ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. ಡಿಎಂಕೆಯ ಎಲಂಗೋ ಅವರು ಮುನ್ನಡೆ ಸಾಧಿಸಿದ್ದಾರೆ.
ಹೊಸ ಪಕ್ಷ ಸ್ಥಾಪಿಸಿ ಚುನಾವಣೆಗೆ ನಿಂತಿರುವ ನಟ ಕಮಲ್ ಹಾಸನ್ ಸಹ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿರುವ ಅವರು ಪ್ರಬಲ ಎದುರಾಳಿ ಮಯೂರ ಎಸ್ ಜಯಕುಮಾರ್ ಅನ್ನು ಎದುರಿಸುತ್ತಿದ್ದಾರೆ.
ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿರುವ ಖುಷ್ಬು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ತಮಿಳುನಾಡಿನ ಥೌಸಂಡ್ಸ್ ಲೈಟ್ಸ್ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅವರಿಗೂ ಅಲ್ಲಿ ಆರಂಭಿಕ ಹಿನ್ನಡೆ ಉಂಟಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications