ಸಮೀಕ್ಷೆ: ಗೋವಾದಲ್ಲಿ ಬಿಜೆಪಿಯದ್ದೇ ಆಧಿಪತ್ಯ, ಲೆಕ್ಕಕಷ್ಟೆ ಎಎಪಿ
ಚುನಾವಣೆಗೆ ಮೊದಲು ಹೊರಬಿದ್ದಿರುವ ಗೋವಾ ರಾಜ್ಯದ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ; ಕಾಂಗ್ರೆಸ್ ಪ್ರಬಲ ಸ್ಪರ್ಧೆ ನೀಡಲಿದೆ ಎಂದು ಹೇಳಲಾಗಿದೆ.
ಪಣಜಿ, ಫೆಬ್ರವರಿ 1: ಸಣ್ಣ ಆದರೆ ಬಿಜೆಪಿ ಪಾಲಿನ ಅತಿ ಮುಖ್ಯ ರಾಜ್ಯ ಗೋವಾದಲ್ಲಿ ಕೇಸರಿ ಪಕ್ಷ ಅಧಿಕಾರ ಉಳಿಸಿಕೊಳ್ಳಲಿದೆ ಅಂತ ಹೆಚ್ಚಿನ ಸಮೀಕ್ಷೆಗಳು ಹೇಳಿವೆ. ಈ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೇರುವ ಎಎಪಿ ಮತ್ತು ಕಾಂಗ್ರೆಸ್ ಆಸೆಗೆ ಮತದಾರರು ತಣ್ಣೀರೆರಚಲಿದ್ದಾರೆ..[ಗೋವಾ: ಭಾಷಣದಲ್ಲಿ ಲಂಚದ ಪ್ರಸ್ತಾಪ; ಕೇಜ್ರಿವಾಲ್ ಮೇಲೆ ಎಫ್ಐಆರ್]
40 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಫೆಬ್ರವರಿ 4ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ನಾಲ್ಕು ದಿನಗಳಿರುವಾಗ ಇಂಡಿಯಾ ಟುಡೇ-ಆಕ್ಸಿಸ್ ಸಮೀಕ್ಷೆ ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಬಿಜೆಪಿ 22-25 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ. ಇನ್ನು ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನಕಷ್ಟೆ ತೃಪ್ತಿ ಪಟ್ಟುಕೊಳ್ಳಬಹುದು ಎಂದು ಹೇಳಿರುವ ಸಮೀಕ್ಷೆ 12-14 ಸ್ಥಾನಗಳು ಸಿಗಬಹುದು ಎಂದು ಅಂದಾಜು ಮಾಡಿದೆ. ಎಎಪಿ 1-2 ಸ್ಥಾಣಗಳಲ್ಲಷ್ಟೆ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.[ಗೋವಾ: ಉದ್ಯೋಗ ಸೃಷ್ಠಿಯೇ ಬಿಜೆಪಿ ಪ್ರಣಾಳಿಕೆಯ ಮಂತ್ರ]

ಇತರ ಸಮೀಕ್ಷೆಗಳತ್ತ ನೋಡುವುದಾದರೆ, ಕೌಟಿಲ್ಯ ಬಿಜೆಪಿ-14, ಕಾಂಗ್ರೆಸ್-7, ಎಎಪಿ-14 ಹಾಗೂ ಎಂಜಿಪಿ 6 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದೆ.
ಪ್ರುಡೆಂಟ್ ಮೀಡಿಯಾ ಸಮೀಕ್ಷೆ ಬಿಜೆಪಿ 17-18, ಕಾಂಗ್ರೆಸ್ 12-13, ಎಎಪಿ 4-5, ಎಂಜಿಪಿ 3-4 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದೆ.
ಇನ್ನೊಂದು ಸಮೀಕ್ಷೆ ವಿಡಿಪಿ ಅಸೋಸಿಯೇಟ್ಸ್, ಬಿಜೆಪಿ 22, ಎಎಪಿ 9 ಮತ್ತು ಕಾಂಗ್ರೆಸ್ 6 ಸ್ಥಾನದಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications