ಸಮೀಕ್ಷೆ: ಉತ್ತರಖಂಡ, ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ
ಚುನಾವಣೆಗೆ ಮೊದಲು ಹೊರಬಿದ್ದಿರುವ ಅಂತಿಮ ಸಮೀಕ್ಷೆಯಲ್ಲಿ ಉತ್ತರಖಂಡ ಮತ್ತು ಈಶಾನ್ಯ ರಾಜ್ಯ ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ.
ದೆಹಲಿ, ಫೆಬ್ರವರಿ 1: ಹಲವು ರಾಜಕೀಯ ಮೇಲಾಟಗಳಿಗೆ ಸಾಕ್ಷಿಯಾದ ಉತ್ತರಖಂಡದಲ್ಲಿ ಬಿಜೆಪಿ ಈ ಬಾರಿ ಅಧಿಕಾರಕ್ಕೇರಲಿದೆ ಎಂದು ಬಹುತೇಕ ಸಮೀಕ್ಷೆಗಳು ಬೆಟ್ಟು ಮಾಡುತ್ತಿವೆ. ಆದರೆ ಸ್ಥಳೀಯ ಪತ್ರಿಕೆ ಉತ್ತರಖಂಡ್ ಪೋಸ್ಟ್ ಮಾತ್ರ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲಿದೆ ಎಂದಿದೆ.
ಇನ್ನು ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಅಂತ ಇಂಡಿಯಾ ಟುಡೆ-ಆಕ್ಸಿಸ್ ಸಮೀಕ್ಷೆ ಹೇಳಿದೆ. ಆದರೆ ರಾಜ್ಯದಲ್ಲಿ ಉಳಿದ ಯಾರೂ ಸಮೀಕ್ಷೆ ಮಾಡಿಲ್ಲ. ಹಾಗಾಗಿ ಇದೊಂದೇ ಸಮೀಕ್ಷೆ ಚುನಾವಣೆಗೂ ಮುನ್ನ ಹೊರ ಬಿದ್ದಿದೆ.[ಉತ್ತರಖಂಡ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಪ್ರತಿಷ್ಠೆಯೇ ಹೈಲೈಟ್]
ಉತ್ತರಖಂಡದಲ್ಲಿ ಅರಳಲಿದೆ ಕಮಲ
71 ಸದಸ್ಯ ಬಲದ ಉತ್ತರಖಂಡ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಇಂಡಿಯಾ ಟುಡೆ-ಆಕ್ಸಿಸ್ ಸರ್ವೆ ಹೇಳಿದೆ.

ಉತ್ತರಖಂಡದಲ್ಲಿ ಈ ಬಾರಿ ಬಿಜೆಪಿ 40-44 ಸ್ಥಾನಗಳನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ 23-27 ಸ್ಥಾನಗಳನ್ನಷ್ಟೆ ಪಡೆದುಕೊಳ್ಳಬಹುದು. ಇನ್ನು ಇತರರು 1 ರಿಂದ 6 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.[ಉತ್ತರಪ್ರದೇಶ ಸರ್ವೇ: ಎಸ್ಪಿ-ಕಾಂಗ್ರೆಸ್ ಮೈತ್ರಿಯಿಂದ ಬಿಜೆಪಿಗೆ ಕಷ್ಟಕಷ್ಟ]
ಇದೇ ಮಾದರಿಯ ಸಮೀಕ್ಷೆಯನ್ನು ಎಬಿಪಿ ನ್ಯೂಸ್ ಕೂಡಾ ಮುಂದಿಟ್ಟಿದೆ. ಶೇಕಡಾ 39 ಮತಗಳನ್ನು ಪಡೆಯುವ ಮೂಲಕ ಭಾರತೀಯ ಜನತಾ ಪಕ್ಷ 32 ರಿಂದ 40 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಬಿಜೆಪಿಗೆ ಕಾಂಗ್ರೆಸ್ ತುರುಸಿನ ಸ್ಪರ್ಧೆ ನೀಡಲಿದ್ದು ಶೇಕಡಾ 36 ಮತಗಳೊಂದಿಗೆ 24-32 ಸ್ಥಾನಗಳಲ್ಲಿ ಗೆಲ್ಲಲಿದೆ. ಉಳಿದವರು 3 ರಿಂದ 9 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಸಮೀಕ್ಷೆಯು ಹೇಳಿದೆ.
ಆದರೆ ಸ್ಥಳೀಯ ಪತ್ರಿಕೆ ಉತ್ತರಖಂಡ್ ಪೋಸ್ಟ್ ಮಾತ್ರ ಕಾಂಗ್ರೆಸ್ ತನ್ನ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಹೇಳಿದೆ. ಅದು ಬಿಜೆಪಿ 29 ಹಾಗೂ ಕಾಂಗ್ರೆಸ್ 36 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ತನ್ನ ಅಂಕಿ ಅಂಶಗಳನ್ನು ನೀಡಿದೆ.
ಮಣಿಪುರದಲ್ಲಿ ಬಿಜೆಪಿ ಅಧಿಕಾರಕ್ಕೆ
ಈಶಾನ್ಯ ರಾಜ್ಯಗಳಲ್ಲಿ ಒಂದಾದ ಮಣಿಪುರದಲ್ಲಿ ಸರಿಯಾದ ಸಮೀಕ್ಷೆಗಳೇ ನಡೆದಿಲ್ಲ. ಒಟ್ಟು 60 ಸದಸ್ಯ ಬಲದ ರಾಜ್ಯದಲ್ಲಿ ಇಂಡಿಯಾ ಟುಡೆ-ಆಕ್ಸಿಸ್ ಮಾತ್ರ ಸಮೀಕ್ಷೆ ನಡೆಸಿದ್ದು ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಹೇಳಿದೆ. ಬಿಜೆಪಿ 31-35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್ 19-24 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ. ಹಾಗೂ ಸ್ಥಳೀಯ ಎನ್.ಪಿ.ಎಫ್ (ನಾಗಾ ಪೀಪಲ್ಸ್ ಫ್ರಂಟ್ 3-5 ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications