ವಿಧಾನಸಭೆ ಚುನಾವಣೆ: 3 ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಯ್ಪುರ, ಅಕ್ಟೋಬರ್ 23: ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ಐದು ರಾಜ್ಯಗಳ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಬೇರೆ ಬೇರೆ ಪಕ್ಷಗಳು ಈಗಾಗಲೇ ಬಿಡುಗಡೆ ಮಾಡುತ್ತಿವೆ.
ಅದರದೇ ಒಂದು ಭಾಗವಾಗಿ ಬಿಜೆಪಿಯು ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ಗಳಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಛತ್ತೀಸ್ ಗಢದ 90 ವಿಧಾನಸಭಾ ಕ್ಷೇತ್ರಗಳಲ್ಲಿ 77 ಕ್ಕೆ ತನ್ನ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ.
ಛತ್ತೀಸ್ ಗಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಹಿರಿಯ ಬಿಜೆಪಿ ನಾಯಕ ಜೆಪಿ ನಡ್ಡಾ, ಟಿಕೆಟ್ ಹಂಚಿಕೆಯ ಸಮಯದಲ್ಲಿ ಎಲ್ಲರಿಗೂ ನ್ಯಾಯ ನೀಡಲು ಪ್ರಯತ್ನಿಸಿದ್ದೇವೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.

ಛತ್ತೀಸ್ ಗಢದಲ್ಲಿ 77 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಛತ್ತೀಸ್ ಗಢದಲ್ಲಿ ಬಿಜೆಪಿ 49(90) ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರೆ, ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು. ಈ ರಾಜ್ಯದಲ್ಲಿ ನವೆಂಬರ್ 12 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ.

ತೆಲಂಗಾಣದಲ್ಲಿ 38 ಅಭ್ಯರ್ಥಿಗಳು
ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಲ್ಲಿ 38 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ಈಗಾಗಲೇ ಘೋಷಿಸಿದೆ. ತೆಲಂಗಾಣದಲ್ಲಿ ಡಿಸೆಂಬರ್ 7 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆ ಚಂದ್ರಶೇಖರ ರಾವ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದರಿಂದ ಅವಧಿಗೂ ಮುನ್ನವೇ ಚುನಾವಣೆ ನಡೆಯುತ್ತಿದೆ.

ಮಿಜೋರಾಂ ನಲ್ಲಿ 13 ಅಭ್ಯರ್ಥಿಗಳ ಹೆಸರು
ಮಿಜೋರಾಂನ 40 ವಿಧಾನಸಭಾ ಕ್ಷೇತ್ರಗಳಲ್ಲಿ 13 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಇದೀಗ ಬಿಡುಗಡೆ ಮಾಡಿದೆ. ಮಿಜೋರಾಂ ನಲ್ಲಿ ನವೆಂಬರ್ 28 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಫಲಿತಾಂಶ ಡಿಸೆಂಬರ್ 11 ರಂದು ಹೊರಬೀಳಲಿದೆ.

ಬಿಎಸ್ಪಿ ಅಭ್ಯರ್ಥಿಗಳ ಪಟ್ಟಿ
ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷವೂ ಛತ್ತೀಸ್ ಗಢ ವಿಧಾನಸಭೆ ಚುನಾವಣೆಗೆ ತನ್ನ 12 ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಸಿದೆ. ಈ ರಾಜ್ಯದಲ್ಲಿ ಬಿಎಸ್ಪಿಯು ಮಾಜಿ ಮುಖ್ಯಮಮತ್ರಿ ಅಜಿತ್ ಜೋಗಿ ಅವರ ಜನತಾ ಕಾಂಗ್ರೆಸ್ ಛತ್ತೀಸ್ ಗಢ(ಜೆ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಜೊತೆ ಮೈತ್ರಿ ಮಾಡಿಕೊಂಡಿದ್ದು, 33 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications