ಕೊವಿಡ್ 19 ಸೋಂಕಿತರು ಮತದಾನ ಮಾಡಬಹುದು ಹೇಗೆ ?
ಚೆನ್ನೈ, ಏಪ್ರಿಲ್ 6: ಕೋವಿಡ್-19 ಸಾಂಕ್ರಾಮಿಕದ ಭೀತಿಯ ನಡುವೆ ದೇಶದಲ್ಲಿ ಐದು ರಾಜ್ಯಗಳ ಚುನಾವಣೆ ಪ್ರಕ್ರಿಯೆ ಸಾಂಗವಾಗಿ ನಡೆದಿದೆ. ಪಶ್ಚಿಮ ಬಂಗಾಳ ಹಾಗೂ ಉಪ ಚುನಾವಣೆಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲ ರಾಜ್ಯಗಳ ಮತದಾನ ಪ್ರಕ್ರಿಯೆ ಇಂದೇ ಮುಕ್ತಾಯವಾಗಲಿದೆ. ಈ ನಡುವೆ ಕೊವಿಡ್ 19 ಸೋಂಕಿತರು ಮತದಾನ ಹೇಗೆ ಮಾಡಬಹುದು? ಎಂಬ ಪ್ರಶ್ನೆ ಎದ್ದಿದೆ.
ಮತದಾನದ ಕೊನೆಯ ಒಂದು ಗಂಟೆಯಲ್ಲಿ ಕೋವಿಡ್ ಸೋಂಕಿತರು ಮತ ಹಾಕಲು ಅವಕಾಶವನ್ನು ಮಾಡಿಕೊಡಲಾಗುತ್ತದೆ, ಇದು ಐದು ರಾಜ್ಯಗಳಿಗೂ ಅನ್ವಯವಾಗಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
1961ರ ಚುನಾವಣಾ ನಿಯಮಗಳನ್ನು ತಿದ್ದುಪಡಿ ಮಾರುವ ಸರ್ಕಾರ ಮತದಾನ ವ್ಯಾಪ್ತಿಯನ್ನು ವಿಸ್ತರಣೆ ಮಾಡಿದೆ. ಕೊರೊನಾ ವೈರಸ್ ಭೀತಿ ಹಿನ್ನೆಲೆ 65 ವರ್ಷದ ಮೇಲ್ಪಟ್ಟವರು ಅಂಚೆ ಮತಪತ್ರವನ್ನು ಬಳಸಿ ತಮ್ಮ ಮತ ಚಲಾಯಿಸಬಹುದು ಎಂದು ಸರ್ಕಾರ ಆದೇಶಿಸಿದೆ.

ಕೊರೊನಾ ಬಿಕ್ಕಟ್ಟಿನ ನಡುವೆ ರಾಜ್ಯಸಭೆ ಚುನಾವಣೆ ನಡೆದಾಗ ಸೋಂಕಿತ ಶಾಸಕರು ಪಿಪಿಇ ಕಿಟ್ ಧರಿಸಿ ಸದನಕ್ಕೆ ಬಂದ ಮತದಾನ ಮಾಡಿದ್ದನ್ನು ಸ್ಮರಿಸಬಹುದು.
ಪಶ್ಚಿಮ ಬಂಗಾಳದ 294, ತಮಿಳುನಾಡಿನ 234, ಕೇರಳದ 140, ಅಸ್ಸಾಂನ 126 ಮತ್ತು ಪುದುಚೇರಿಯ 30 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉಳಿದ ಮೂರು ಕಡೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.
ಇದಲ್ಲದೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಕ್ಷೇತ್ರಗಳು ಮತ್ತು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಎಲ್ಲ ಚುನಾವಣೆಗಳ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ.
ಮತದಾನ ಪ್ರಕ್ರಿಯೆ ಹೇಗೆ?:
ಮತದಾನದ ದಿನ ಸಂಜೆ 6 ಗಂಟೆಯಿಂದ 7 ಗಂಟೆ ಅವಧಿಯಲ್ಲಿ ಐಸೊಲೇಷನ್ನಲ್ಲಿರುವವ ಸೋಂಕಿತರು ಮತದಾನ ಮಾಡಬಹುದು. ಮತಗಟ್ಟೆಗಳಲ್ಲಿ ಪಿಪಿಇ ಕಿಟ್, ಸ್ಯಾನಿಟೈಸರ್, ರೋಗ ನಿರೋಧಕ ಸಿಂಪಡಣೆ ವ್ಯವಸ್ಥೆ ಮಾಡಲಾಗಿದೆ. ಸೋಂಕಿತ ಮತದಾರ ಹಾಗೂ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಿರಬೇಕು.
ಬಳಸಲಾದ ಮಾಸ್ಕ್, ಕಿಟ್, ಫೇಸ್ ಶೀಲ್ಡ್ ಇತ್ಯಾದಿ ಬಯೋ ತ್ಯಾಜ್ಯಗಳ ನಿರ್ವಹಣೆ ಬಗ್ಗೆ ಕೂಡಾ ಜಿಲ್ಲಾ ಚುನಾವಣಾಧಿಕಾರಿಗಳು ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಿದ್ದಾರೆ.
ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ದೇಹದ ಉಷ್ಣಾಂಶ ಪರೀಕ್ಷೆ ಕಡ್ಡಾಯವಾಗಿದ್ದು, ಮತದಾರರಿಗೆ ಜ್ವರ ಇದ್ದರೂ ಸಂಜೆ ಕೊವಿಡ್ 19 ಸೋಂಕಿತರು ಮತ ಹಾಕುವ ಸಂದರ್ಭದಲ್ಲೇ ಮತದಾನ ಮಾಡಬೇಕು ಎಂದು ನಿಯಮ ರೂಪಿಸಲಾಗಿದೆ.
ತಮಿಳುನಾಡಿನಲ್ಲಿ 6.28 ಕೋಟಿ ಮತದಾರರಿದ್ದು, 88,000 ಮತಗಟ್ಟೆಗಳಲ್ಲಿ ಏಪ್ರಿಲ್ 6ರಂದು ಮತದಾನ ನಡೆದಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications