ಕೊವಿಡ್ 19 ಸೋಂಕಿತರು ಮತದಾನ ಮಾಡಬಹುದು ಹೇಗೆ ?
ಚೆನ್ನೈ, ಏಪ್ರಿಲ್ 6: ಕೋವಿಡ್-19 ಸಾಂಕ್ರಾಮಿಕದ ಭೀತಿಯ ನಡುವೆ ದೇಶದಲ್ಲಿ ಐದು ರಾಜ್ಯಗಳ ಚುನಾವಣೆ ಪ್ರಕ್ರಿಯೆ ಸಾಂಗವಾಗಿ ನಡೆದಿದೆ. ಪಶ್ಚಿಮ ಬಂಗಾಳ ಹಾಗೂ ಉಪ ಚುನಾವಣೆಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲ ರಾಜ್ಯಗಳ ಮತದಾನ ಪ್ರಕ್ರಿಯೆ ಇಂದೇ ಮುಕ್ತಾಯವಾಗಲಿದೆ. ಈ ನಡುವೆ ಕೊವಿಡ್ 19 ಸೋಂಕಿತರು ಮತದಾನ ಹೇಗೆ ಮಾಡಬಹುದು? ಎಂಬ ಪ್ರಶ್ನೆ ಎದ್ದಿದೆ.
ಮತದಾನದ ಕೊನೆಯ ಒಂದು ಗಂಟೆಯಲ್ಲಿ ಕೋವಿಡ್ ಸೋಂಕಿತರು ಮತ ಹಾಕಲು ಅವಕಾಶವನ್ನು ಮಾಡಿಕೊಡಲಾಗುತ್ತದೆ, ಇದು ಐದು ರಾಜ್ಯಗಳಿಗೂ ಅನ್ವಯವಾಗಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
1961ರ ಚುನಾವಣಾ ನಿಯಮಗಳನ್ನು ತಿದ್ದುಪಡಿ ಮಾರುವ ಸರ್ಕಾರ ಮತದಾನ ವ್ಯಾಪ್ತಿಯನ್ನು ವಿಸ್ತರಣೆ ಮಾಡಿದೆ. ಕೊರೊನಾ ವೈರಸ್ ಭೀತಿ ಹಿನ್ನೆಲೆ 65 ವರ್ಷದ ಮೇಲ್ಪಟ್ಟವರು ಅಂಚೆ ಮತಪತ್ರವನ್ನು ಬಳಸಿ ತಮ್ಮ ಮತ ಚಲಾಯಿಸಬಹುದು ಎಂದು ಸರ್ಕಾರ ಆದೇಶಿಸಿದೆ.

ಕೊರೊನಾ ಬಿಕ್ಕಟ್ಟಿನ ನಡುವೆ ರಾಜ್ಯಸಭೆ ಚುನಾವಣೆ ನಡೆದಾಗ ಸೋಂಕಿತ ಶಾಸಕರು ಪಿಪಿಇ ಕಿಟ್ ಧರಿಸಿ ಸದನಕ್ಕೆ ಬಂದ ಮತದಾನ ಮಾಡಿದ್ದನ್ನು ಸ್ಮರಿಸಬಹುದು.
ಪಶ್ಚಿಮ ಬಂಗಾಳದ 294, ತಮಿಳುನಾಡಿನ 234, ಕೇರಳದ 140, ಅಸ್ಸಾಂನ 126 ಮತ್ತು ಪುದುಚೇರಿಯ 30 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು ಎಂಟು ಹಂತಗಳಲ್ಲಿ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉಳಿದ ಮೂರು ಕಡೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.
ಇದಲ್ಲದೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಕ್ಷೇತ್ರಗಳು ಮತ್ತು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಎಲ್ಲ ಚುನಾವಣೆಗಳ ಫಲಿತಾಂಶ ಮೇ 2ರಂದು ಪ್ರಕಟವಾಗಲಿದೆ.
ಮತದಾನ ಪ್ರಕ್ರಿಯೆ ಹೇಗೆ?:
ಮತದಾನದ ದಿನ ಸಂಜೆ 6 ಗಂಟೆಯಿಂದ 7 ಗಂಟೆ ಅವಧಿಯಲ್ಲಿ ಐಸೊಲೇಷನ್ನಲ್ಲಿರುವವ ಸೋಂಕಿತರು ಮತದಾನ ಮಾಡಬಹುದು. ಮತಗಟ್ಟೆಗಳಲ್ಲಿ ಪಿಪಿಇ ಕಿಟ್, ಸ್ಯಾನಿಟೈಸರ್, ರೋಗ ನಿರೋಧಕ ಸಿಂಪಡಣೆ ವ್ಯವಸ್ಥೆ ಮಾಡಲಾಗಿದೆ. ಸೋಂಕಿತ ಮತದಾರ ಹಾಗೂ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಪಿಪಿಇ ಕಿಟ್ ಧರಿಸಿರಬೇಕು.
ಬಳಸಲಾದ ಮಾಸ್ಕ್, ಕಿಟ್, ಫೇಸ್ ಶೀಲ್ಡ್ ಇತ್ಯಾದಿ ಬಯೋ ತ್ಯಾಜ್ಯಗಳ ನಿರ್ವಹಣೆ ಬಗ್ಗೆ ಕೂಡಾ ಜಿಲ್ಲಾ ಚುನಾವಣಾಧಿಕಾರಿಗಳು ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಿದ್ದಾರೆ.
ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ದೇಹದ ಉಷ್ಣಾಂಶ ಪರೀಕ್ಷೆ ಕಡ್ಡಾಯವಾಗಿದ್ದು, ಮತದಾರರಿಗೆ ಜ್ವರ ಇದ್ದರೂ ಸಂಜೆ ಕೊವಿಡ್ 19 ಸೋಂಕಿತರು ಮತ ಹಾಕುವ ಸಂದರ್ಭದಲ್ಲೇ ಮತದಾನ ಮಾಡಬೇಕು ಎಂದು ನಿಯಮ ರೂಪಿಸಲಾಗಿದೆ.
ತಮಿಳುನಾಡಿನಲ್ಲಿ 6.28 ಕೋಟಿ ಮತದಾರರಿದ್ದು, 88,000 ಮತಗಟ್ಟೆಗಳಲ್ಲಿ ಏಪ್ರಿಲ್ 6ರಂದು ಮತದಾನ ನಡೆದಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications