2022ರ ವಿಧಾನಸಭೆ ಚುನಾವಣೆ: ಛತ್ತೀಸ್‌ಗಢದಲ್ಲಿ 'ಕೈ'ಹಿಡಿದ ವಿವಿಧ ನಾಯಕರು

ರಾಯ್ ಪುರ್, ನವೆಂಬರ್ 26: ವಿಧಾನಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಬಂಡಾಯ ನಾಯಕರು ಪಕ್ಷ ಬದಲಿಸುತ್ತಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿ ಹಾಗೂ ಬಿಜೆಪಿಯಿಂದ ಕಾಂಗ್ರೆಸ್‌ಗೆ ಅಥವಾ ಬೇರೆ ಬೇರೆ ಪಕ್ಷಗಳಿಂದಲೂ ಶಾಸಕರು ಪಕ್ಷ ಬದಲಿಸುವುದು ಕಂಡುಬರುತ್ತಿದೆ. ಇಂದು ಛತ್ತೀಸ್‌ಗಢದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಅತೃಪ್ತರು ಸೇರ್ಪಡೆಯಾಗಿದ್ದಾರೆ.

ಶುಕ್ರವಾರ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಸಮ್ಮುಖದಲ್ಲಿ ವಿವಿಧ ಪಕ್ಷಗಳ ನಾಯಕರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ವಿಕಾಸಶೀಲ್ ಇನ್ಸಾನ್ ಪಕ್ಷದ (ವಿಐಪಿ) ರಾಜ್ಯಾಧ್ಯಕ್ಷ ಬಿಹಾರದ ಮೀನುಗಾರರ ಮುಖಂಡ ಮುಖೇಶ್ ಸಾಹ್ನಿ ಮತ್ತು ಅಲ್ಲಿನ ರಾಜ್ಯ ಸಚಿವ ಚೌಧರಿ ಲೌಟನ್ ರಾಮ್ ನಿಶಾದ್ ಅವರು ಕಾಂಗ್ರೆಸ್ ಸೇರಿದರು. ಮುಖೇಶ್ ಸಾಹ್ನಿ ಮೇಲೆ ಗಂಭೀರ ಆರೋಪ ಮಾಡುವ ಒಂದು ದಿನ ಮೊದಲು ನಿಶಾದ್ ವಿಐಪಿಗೆ ರಾಜೀನಾಮೆ ನೀಡಿದ್ದರು. ಅವರ ಜೊತೆಗೆ, ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಅಧ್ಯಕ್ಷ ಸಲ್ಮಾನ್ ಇಮ್ತಿಯಾಜ್ ಕೂಡ ಶುಕ್ರವಾರ ಕಾಂಗ್ರೆಸ್ ಸೇರಿದರು.

ಭಾರತೀಯ ಕಿಸಾನ್ ಯೂನಿಯನ್‌ನ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ದಲಾನಾ ಮತ್ತು ಸುಹೇಲ್ದಿಯೋ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ನಾಯಕ ಪುನೀತ್ ಪಾಠಕ್ ಕಾಂಗ್ರೆಸ್ ಸೇರಿದ ಇತರರಲ್ಲಿ ಸೇರಿದ್ದಾರೆ. ಪಾಠಕ್ ಯುಪಿ ಮಾಜಿ ಸಚಿವ ಬಚ್ಚಾ ಪಾಠಕ್ ಅವರ ಪುತ್ರ ಮತ್ತು ಪೂರ್ವ ಯುಪಿಯಿಂದ ಬಂದವರು. ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕಿ ಸೀಮಾದೇವಿ ಮತ್ತು ಜಿಲ್ಲಾ ಪಂಚಾಯತ್ ಸದಸ್ಯೆ ನೀಲಂ ಕೂಡ ಭೂಪೇಶ್ ಬಘೇಲ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

Assembly Elections 2022:Leaders joined Congress In Chhattisgarh

ಈ ಸಂದರ್ಭದಲ್ಲಿ, ಛತ್ತೀಸ್‌ಗಢ ಸಿಎಂ ಯುಪಿ ಕಾಂಗ್ರೆಸ್‌ನ ಸದಸ್ಯತ್ವ ಅಭಿಯಾನಕ್ಕೂ ಚಾಲನೆ ನೀಡಿದರು. ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಒಂದು ಕೋಟಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಗುರಿಯನ್ನು ಯುಪಿಯಲ್ಲಿ ಕಾಂಗ್ರೆಸ್ ಹೊಂದಿದೆ. ಪಕ್ಷವು ರಾಜ್ಯದಲ್ಲಿ ಏಕ್ ಪರಿವಾರ ಸದಾಸ್ಯಾ ಚಾರ್ (ಒಂದು ಕುಟುಂಬ ಮತ್ತು ನಾಲ್ಕು ಸದಸ್ಯರು) ಎಂಬ ಘೋಷಣೆಯನ್ನು ನೀಡಿದೆ.

ಈ ಸಂದರ್ಭದಲ್ಲಿ ಬಘೇಲ್ ಅವರು ಮಾತನಾಡಿ, ಇಂದು ಸಂವಿಧಾನ ದಿನದಂದು ಕಾಂಗ್ರೆಸ್‌ನ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು, ಇದು ಡಿಸೆಂಬರ್ 10 ರವರೆಗೆ 15 ದಿನಗಳ ಕಾಲ ನಡೆಯಲಿದೆ ಎಂದು ಹೇಳಿದರು. ಈ ಅಭಿಯಾನದಡಿ ಐದು ಸದಸ್ಯರ ತಂಡವನ್ನು ರಚಿಸಲಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದ ನ್ಯಾಯ ಪಂಚಾಯಿತಿ ಮತ್ತು ವಾರ್ಡ್‌ಗಳಲ್ಲಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಗುವುದು ಎಂದು ಅವರು ಹೇಳಿದರು.

ಪಕ್ಷವು ದೂರವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ಮಿಸ್ಡ್ ಕಾಲ್ ನಿಮ್ಮನ್ನು ಕಾಂಗ್ರೆಸ್ ಸದಸ್ಯರನ್ನಾಗಿ ದಾಖಲಿಸಬಹುದು. ಸದಸ್ಯತ್ವಕ್ಕಾಗಿ ರಚಿಸಲಾದ ಪ್ರತಿ ತಂಡವು ಪ್ರತಿದಿನ ಕನಿಷ್ಠ 25 ಹೊಸ ಸದಸ್ಯರನ್ನು ನೋಂದಾಯಿಸಿಕೊಳ್ಳುತ್ತದೆ. ಇದಕ್ಕಾಗಿ 23000 ತಂಡಗಳನ್ನು ರಚಿಸಲಾಗಿದೆ ಎಂದರು.

ಇದೇ ವೇಳೆ ಹೊಸ ಸದಸ್ಯರ ನೋಂದಣಿಗಾಗಿ ಮಾರುಕಟ್ಟೆ, ಬಸ್ ಮತ್ತು ರೈಲು ನಿಲ್ದಾಣಗಳಲ್ಲಿ ವಿಶೇಷ ಶಿಬಿರಗಳನ್ನು ನಿರ್ಮಿಸಲಾಗುವುದು ಎಂದು ಯುಪಿ ಕಾಂಗ್ರೆಸ್‌ನ ಮಾಧ್ಯಮ ಸಂಚಾಲಕ ಲಲನ್ ಕುಮಾರ್ ತಿಳಿಸಿದರು. ಕಾಂಗ್ರೆಸ್ ಸದಸ್ಯತ್ವಕ್ಕಾಗಿ ಮಹಿಳೆಯರನ್ನು ಪ್ರೋತ್ಸಾಹಿಸಲು ಪದವಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿಶೇಷ ಶಿಬಿರಗಳನ್ನು ಸ್ಥಾಪಿಸಲಾಗುವುದು ಎಂದರು.

ಈ ನಡುವೆ ಈಗಾಗಲೇ ''ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನಗಳನ್ನು ಗೆಲ್ಲುವುದು ಖಚಿತ'' ಎಂದು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೊರೊನಾ ನಿರ್ವಹಣೆ ವಿಚಾರದಲ್ಲಿ ಯೋಗಿ ಆದಿತ್ಯನಾಥ್‌ ವಿರುದ್ದ ಅಸಮಾಧಾನ ವ್ಯಕ್ತವಾದ ಹಿನ್ನೆಲೆ ಮೇ ಅಂತ್ಯದಲ್ಲೇ ಬಿಜೆಪಿ ಚುನಾವಣಾ ತಯಾರಿ ಆರಂಭಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+