ಜಾರ್ಖಂಡ್ ವಿಧಾನಸಭೆ ಚುನಾವಣೆ 2024: ಅಂತಿಮ ಹಂತದ ಮತದಾನ ಆರಂಭ-ಕಣದಲ್ಲಿರುವ ಅಭ್ಯರ್ಥಿಗಳೆಷ್ಟು?
Jharkhand Election 2024: ಜಾರ್ಖಂಡ್ನಲ್ಲಿ ಈಗಾಗಲೇ ನವೆಂಬರ್ 13ರಂದು ಮೊದಲ ಹಂತದಲ್ಲಿ 43 ವಿಧಾನಸಭಾ ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿದೆ. ಇನ್ನು ಇಂದು (ನವೆಂಬರ್ 20) 38 ಸ್ಥಾನಗಳಿಗೆ ಎರಡನೇ ಹಂತದಲ್ಲಿ ಮತದಾನ ಆರಂಭವಾಗಿದೆ. ಹಾಗಾದರೆ ಒಟ್ಟು ಎಷ್ಟು ಅಭ್ಯರ್ಥಿಗಳು ಇದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಾರ್ಖಂಡ್ನಲ್ಲಿ ಒಟ್ಟು 81 ವಿಧಾನಸಭಾ ಕ್ಷೇತ್ರಗಳಲ್ಲಿ 38 ಸ್ಥಾನಗಳಿಗೆ ಇಂದು ಅಂತಿಮ ಹಂತದ ಮತದಾನ ಆರಂಭವಾಗಿದೆ. ಇದರಲ್ಲಿ ಜೆಎಂಎಂ ಅಭ್ಯರ್ಥಿ ಮತ್ತು ಸಿಎಂ ಹೇಮಂತ್ ಸೊರೆನ್, ಅವರ ಪತ್ನಿ ಕಲ್ಪನಾ ಸೊರೆನ್ ಮತ್ತು ವಿಪಕ್ಷದ ನಾಯಕ ಮತ್ತು ಬಿಜೆಪಿ ಅಭ್ಯರ್ಥಿ ಅಮರ್ ಕುಮಾರ್ ಬೌರಿ ಸೇರಿ 528 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ನಿರ್ಧಾರ ಆಗಲಿದೆ.

ರಾಜ್ಯದಲ್ಲಿ ಆಡಳಿತಾರೂಢ ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇನ್ನು ಇಂದು ಎಷ್ಟು ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇಂದು 14,218 ಮತಗಟ್ಟೆಗಳಲ್ಲಿ ಎರಡನೇ ಹಂತದ ಮತದಾನ ಆರಂಭ ಆಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಈ ಪೈಕಿ 31 ಮತಗಟ್ಟೆಗಳಲ್ಲಿ ಸಂಜೆ 4 ಗಂಟೆಗೆ ಮತದಾನ ಮುಕ್ತಾಯ ಆಗಲಿದೆ. 60.79 ಲಕ್ಷ ಮಹಿಳೆಯರು ಸೇರಿದಂತೆ ಒಟ್ಟು 1.23 ಕೋಟಿ ಮತದಾರರು ಇಂದು ಮತದಾನ ಮಾಡಲಿದ್ದಾರೆ. 472 ಪುರುಷರು, 55 ಮಹಿಳೆಯರು ಮತ್ತು ಒಬ್ಬರು ತೃತಿಯಲಿಂಗಿ ಕಣದಲ್ಲಿದ್ದಾರೆ.
ಮಹರಾಷ್ಟರದಲ್ಲಿ ಎಷ್ಟು ಸ್ಥಾನಗಳಿಗೆ ಮತದಾನ?: ಇಂದಿನ ಚುನಾವಣೆಯಲ್ಲಿ ಆಡಳಿತಾರೂಢ ಎಂವಿಎ ಭಾಗ ಆಗಿರುವ ಬಿಜೆಪಿ 149 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅಜಿತ್ ಪವಾರ್ ನೇತೃತ್ವದ ಎನ್ಸಿಪಿ 59 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಎಂವಿಎ ಒಳಗೊಂಡಿರುವ ಕಾಂಗ್ರೆಸ್ 101 ಸ್ಥಾನ, ಶಿವಸೇನೆ 95 ಮತ್ತು ಎನ್ಸಿಪಿ 86 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಬಹುಜನ ಸಮಾಜ ಪಕ್ಷ ಮತ್ತು ಎಐಎಂಐಎಂ ಸೇರಿದಂತೆ ಸಣ್ಣ ಪಕ್ಷಗಳು ಸಹ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ. ಬಿಎಸ್ಪಿ 237 ಮತ್ತು ಎಐಎಂಐಎಂ 17 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಇನ್ನು ಈ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನವೆಂಬರ್ 23ರಂದು ಹೊರಬೀಳಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications