ಪಂಚರಾಜ್ಯ ಚುನಾವಣೆ: 80 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ
ನವದೆಹಲಿ, ಜನವರಿ 08: ಕೇಂದ್ರ ಚುನಾವಣಾ ಆಯೋಗವು ಪಂಚರಾಜ್ಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10ರಂದು ಫಲಿತಾಂಶ ಹೊರಬೀಳಲಿದೆ.
80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ದಿವ್ಯಾಂಗರು ಮತ್ತು ಕೋವಿಡ್-19 ಸೋಂಕಿತ ರೋಗಿಗಳು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಬಹುದು' ಎಂದು ಕೇಂದ್ರ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಬಹು ನಿರೀಕ್ಷಿತ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಶನಿವಾರ (ಜನವರಿ 8, 2022) ಬಿಡುಗಡೆ ಮಾಡಿದೆ.

"ಓಮಿಕ್ರಾನ್ ರೂಪಾಂತರದ ದೃಷ್ಟಿಯಿಂದ COVID-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ, ತಜ್ಞರು ಮತ್ತು ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಸಭೆಗಳನ್ನು ನಡೆಸಿತು.
ಈ ಅಭಿಪ್ರಾಯಗಳನ್ನು ಮತ್ತು ತಳಮಟ್ಟದಲ್ಲಿನ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡ ನಂತರ, ಚುನಾವಣಾ ಆಯೋಗ ಸುರಕ್ಷತೆಯೊಂದಿಗೆ ಚುನಾವಣೆಗಳನ್ನು ಘೋಷಿಸಲು ನಿರ್ಧರಿಸಿದೆ. ಈಗ ನಿಯಮಾವಳಿ ಜಾರಿಯಲ್ಲಿದೆ ಎಂದು ಸುಶೀಲ್ ಚಂದ್ರ ಹೇಳಿದ್ದಾರೆ.
ವಿಸ್ತೃತ ಸಿದ್ಧತೆಗಳೊಂದಿಗೆ ಗರಿಷ್ಠ ಮತದಾರರ ಭಾಗವಹಿಸುವಿಕೆಯೊಂದಿಗೆ ಐದು ರಾಜ್ಯಗಳಲ್ಲಿ ಕೋವಿಡ್-ಸುರಕ್ಷಿತ ಚುನಾವಣೆಗಳನ್ನು ನಡೆಸುವ ಗುರಿಯನ್ನು ನಾವು ಹೊಂದಿದ್ದೇವೆ. ಒಟ್ಟು 18.34 ಕೋಟಿ ಮತದಾರರು ಈ ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದು, 8.55 ಕೋಟಿ ಮಹಿಳಾ ಮತದಾರರಿದ್ದಾರೆ.
ಪ್ರಸ್ತುತ ಉತ್ತರ ಪ್ರದೇಶದ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತಿದ್ದರೆ, ಇತರ ನಾಲ್ಕು ವಿಧಾನಸಭೆಗಳ ಅವಧಿಯು ಮಾರ್ಚ್ನಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ.ಈ 5 ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳ ಪೈಕಿ, ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಸೇರಿದಂತೆ 4 ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧಿಕಾರದಲ್ಲಿದೆ.
ಉತ್ತರ ಪ್ರದೇಶ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ಫೆಬ್ರವರಿ 14 ರಂದು ಮತ್ತು ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಡೆಯಲಿದೆ" ಎಂದು ಚಂದ್ರ ಹೇಳಿದರು.
ಎಲ್ಲಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಒಟ್ಟು ಏಳು ಹಂತಗಳಲ್ಲಿ ಪೂರ್ಣಗೊಳ್ಳಲಿದೆ ಮತ್ತು ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದರು. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ ಎಂದು ಅವರು ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications