ಪಂಚರಾಜ್ಯ ಚುನಾವಣೆ: 80 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತದಾನಕ್ಕೆ ಅವಕಾಶ
ನವದೆಹಲಿ, ಜನವರಿ 08: ಕೇಂದ್ರ ಚುನಾವಣಾ ಆಯೋಗವು ಪಂಚರಾಜ್ಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 10ರಂದು ಫಲಿತಾಂಶ ಹೊರಬೀಳಲಿದೆ.
80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ದಿವ್ಯಾಂಗರು ಮತ್ತು ಕೋವಿಡ್-19 ಸೋಂಕಿತ ರೋಗಿಗಳು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಬಹುದು' ಎಂದು ಕೇಂದ್ರ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ಬಹು ನಿರೀಕ್ಷಿತ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಶನಿವಾರ (ಜನವರಿ 8, 2022) ಬಿಡುಗಡೆ ಮಾಡಿದೆ.

"ಓಮಿಕ್ರಾನ್ ರೂಪಾಂತರದ ದೃಷ್ಟಿಯಿಂದ COVID-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿ, ತಜ್ಞರು ಮತ್ತು ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳೊಂದಿಗೆ ಸಭೆಗಳನ್ನು ನಡೆಸಿತು.
ಈ ಅಭಿಪ್ರಾಯಗಳನ್ನು ಮತ್ತು ತಳಮಟ್ಟದಲ್ಲಿನ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡ ನಂತರ, ಚುನಾವಣಾ ಆಯೋಗ ಸುರಕ್ಷತೆಯೊಂದಿಗೆ ಚುನಾವಣೆಗಳನ್ನು ಘೋಷಿಸಲು ನಿರ್ಧರಿಸಿದೆ. ಈಗ ನಿಯಮಾವಳಿ ಜಾರಿಯಲ್ಲಿದೆ ಎಂದು ಸುಶೀಲ್ ಚಂದ್ರ ಹೇಳಿದ್ದಾರೆ.
ವಿಸ್ತೃತ ಸಿದ್ಧತೆಗಳೊಂದಿಗೆ ಗರಿಷ್ಠ ಮತದಾರರ ಭಾಗವಹಿಸುವಿಕೆಯೊಂದಿಗೆ ಐದು ರಾಜ್ಯಗಳಲ್ಲಿ ಕೋವಿಡ್-ಸುರಕ್ಷಿತ ಚುನಾವಣೆಗಳನ್ನು ನಡೆಸುವ ಗುರಿಯನ್ನು ನಾವು ಹೊಂದಿದ್ದೇವೆ. ಒಟ್ಟು 18.34 ಕೋಟಿ ಮತದಾರರು ಈ ಚುನಾವಣೆಯಲ್ಲಿ ಪಾಲ್ಗೊಳ್ಳಲಿದ್ದು, 8.55 ಕೋಟಿ ಮಹಿಳಾ ಮತದಾರರಿದ್ದಾರೆ.
ಪ್ರಸ್ತುತ ಉತ್ತರ ಪ್ರದೇಶದ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳುತ್ತಿದ್ದರೆ, ಇತರ ನಾಲ್ಕು ವಿಧಾನಸಭೆಗಳ ಅವಧಿಯು ಮಾರ್ಚ್ನಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ.ಈ 5 ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳ ಪೈಕಿ, ಗೋವಾ, ಮಣಿಪುರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಸೇರಿದಂತೆ 4 ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಧಿಕಾರದಲ್ಲಿದೆ.
ಉತ್ತರ ಪ್ರದೇಶ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ 7 ಹಂತಗಳಲ್ಲಿ ಮತದಾನ ನಡೆಯಲಿದೆ, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ಫೆಬ್ರವರಿ 14 ರಂದು ಮತ್ತು ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಡೆಯಲಿದೆ" ಎಂದು ಚಂದ್ರ ಹೇಳಿದರು.
ಎಲ್ಲಾ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯು ಒಟ್ಟು ಏಳು ಹಂತಗಳಲ್ಲಿ ಪೂರ್ಣಗೊಳ್ಳಲಿದೆ ಮತ್ತು ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದರು. ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ ಎಂದು ಅವರು ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications