ಇನ್ಮುಂದೆ ರಾಜಕಾರಣಿಗಳ, ಸಿನಿಮಾ ಸ್ಟಾರ್ಗಳ ಭವಿಷ್ಯ ಹೇಳಲ್ಲ ಎಂದ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ!
ಅಮರಾವತಿ, ಜೂನ್. 04: ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಮತ್ತೆ ಆಡಳಿತ ನಡೆಸಲಿದೆ ಎಂದು ಭವಿಷ್ಯ ನುಡಿದಿದ್ದ ಜನಪ್ರಿಯ ಜ್ಯೋತಿಷಿ ವೇಣು ಸ್ವಾಮಿ ವಿರುದ್ಧ ಟ್ರೋಲ್ ಗ್ರೂಪ್ ಮುಗಿಬಿದ್ದಿದೆ. ಸುಳ್ಳು ಭವಿಷ್ಯ ಹೇಳುತ್ತಾರೆ ಎಂದು ಅವರನ್ನು ಸಕತ್ ಟ್ರೋಲ್ ಮಾಡಲಾಗುತ್ತಿದೆ. ಹೀಗಾಗಿ ಅವರು ಸ್ಪಷ್ಟನೆ ನೀಡಿದ್ದಾರೆ.
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಆಡಳಿತಾರೂಢ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ಸಿಪಿ ಹೀನಾಯ ಸೋಲು ಕಂಡಿದ್ದಾರೆ. ಟಿಡಿಪಿ+ಜನಸೇನಾ ಮೈತ್ರಿಕೂಟವು ಭರ್ಜರಿ ಜಯ ಗಳಿಸಿದೆ. ಹೀಗಾಗಿ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅವರನ್ನು ಟ್ರೋಲ್ ಮಾಡಲಾಗುತ್ತಿದೆ
ತೆಲಂಗಾಣದಲ್ಲಿ ಕೆಸಿಆರ್ ಮತ್ತು ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ಗೆಲುವು ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಯಾವುದನ್ನೂ ಕೂಡ ಸರಿಯಾಗಿ ಊಹಿಸಲು ವಿಫಲರಾಗಿರುವ ಜ್ಯೋತಿಷಿ ವೇಣು ಸ್ವಾಮಿ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸಕತ್ ರುಬ್ಬಲಾಗುತ್ತಿದೆ. ಸೆಲಬ್ರಿಟಿಗಳ ವೈಯಕ್ತಿಕ ವಿಷಯಗಳಲ್ಲಿ ಭವಿಷ್ಯ ಹೇಳುತ್ತಿದ್ದ ಅವರು ಈಗ ಟ್ರೋಲ್ ಆಗುತ್ತಿದ್ದಾರೆ.

ಮತ ಎಣಿಕೆಯ ದಿನ ಬೆಳಗ್ಗೆ ಕೂಡ ಒಂದೆರಡು ಮಾಧ್ಯಮಗಳ ಜೊತೆ ಮಾತನಾಡಿದ ಜ್ಯೋತಿಷಿ ವೇಣು ಸ್ವಾಮಿ, ವೈಎಸ್ ಜಗನ್ ಭರ್ಜರಿ ಬಹುಮತದಿಂದ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ. ಆದರೆ,ಆರಂಭಿಕ ಫಲಿತಾಂಶಗಳೇ ಇದಕ್ಕೆ ವಿರುದ್ಧವಾಗಿದ್ದವು. ಇದನ್ನು ಜ್ಯೋತಿಷಿ ಸಾಕಷ್ಟು ಗಂಭೀರವಾಗಿ ಪರಿಗಣಿಸಿರುವಂತಿದೆ. ಹೀಗಾಗಿಯೇ ಸ್ಪಷ್ಟನೆ ನೀಡಿದ್ದು, ತಾವು ಇನ್ನು ಮುಂದೆ ರಾಜಕೀಯ ವ್ಯಕ್ತಿ, ಸಿನಿಮಾ ನಟರ ಭವಿಷ್ಯ ಹೇಳಲ್ಲ ಎಂದಿದ್ದಾರೆ.
"ಕೇಂದ್ರದಲ್ಲಿ ನರೇಂದ್ರ ಮೋದಿಯವರ ಪ್ರಭಾವ ಕಳೆದುಹೋಗುತ್ತದೆ ಮತ್ತು ವೈಎಸ್ ಜಗನ್ ಆಂಧ್ರಪ್ರದೇಶದಲ್ಲಿ ಭಾರಿ ಬಹುಮತದೊಂದಿಗೆ ಗೆಲ್ಲುತ್ತಾರೆ ಎಂದು ನಾನು ಭವಿಷ್ಯ ನುಡಿದಿದ್ದೇನೆ. ಮೋದಿಯವರ ವಿಷಯದಲ್ಲಿ ಅದು ಕೆಲಸ ಮಾಡಿದರೂ, ಜಗನ್ ತಪ್ಪಾಗಿದೆ. ನಾನು ನನ್ನ ಭವಿಷ್ಯದಲ್ಲಿ ತಪ್ಪು ಹೇಳಿರುವುದರಿಂದ ಕ್ಷಮೆ ಕೇಳುತ್ತೇನೆ. ತಪ್ಪನ್ನು ನಾನು ಒಪ್ಪಿಕೊಳ್ಳುತ್ತೇನೆ. ಇಂದಿನಿಂದ ನಾನು ರಾಜಕೀಯ ಮತ್ತು ಚಲನಚಿತ್ರ ತಾರೆಯರಿಗೆ ಸಂಬಂಧಿಸಿದ ಯಾವುದೇ ಭವಿಷ್ಯವನ್ನು ನೀಡುವುದಿಲ್ಲ" ಎಂದು ವೇಣು ಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ ತಿಳಿಸಿದ್ದಾರೆ.
ಈ ಹಿಂದೆ, ವೇಣು ಸ್ವಾಮಿ ಅವರು ಪ್ರಭಾಸ್ ಅವರ ಸಮಯ ಮುಗಿದಿದೆ. ಅವರ ಸಲಾರ್ ದೊಡ್ಡ ಪ್ಲಾಪ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದರು. ನಂತರ ಚಲನಚಿತ್ರವು ಬಿಡುಗಡೆಯಾದ ನಂತರ ಗಲ್ಲಾಪೆಟ್ಟಿಗೆಯಲ್ಲಿ 700 ಕೋಟಿ ರೂಪಾಯಿ ಗಳಿಸಿತು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications