ಕುಸಿದಿರುವ ಜಿಡಿಪಿ ಸದ್ಯಕ್ಕೆ ಎದ್ದೇಳುವ ಲಕ್ಷಣಗಳೇ ಕಾಣಿಸುತ್ತಿಲ್ಲ
ಬೆಂಗಳೂರು, ಸೆಪ್ಟೆಂಬರ್ 1: ಕುಂಠಿತಗೊಂಡಿರುವ ಭಾರತೀಯ ಆರ್ಥಿಕತೆ ಸದ್ಯಕ್ಕೆ ಚೇತರಿಸಿಕೊಳ್ಳುವ ಲಕ್ಷಣಗಳಿಲ್ಲ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಏಪ್ರಿಲ್ ನಿಂದ ಜೂನ್ ವರೆಗಿನ ಮೊದಲ ತ್ರೈಮಾಸಿಕದ ಜಿಡಿಪಿ (ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್) ಬೆಳವಣಿಗೆ ದರವು ಶೇ 5.7ಕ್ಕೆ ಕುಸಿದಿದ್ದು, ಆತಂಕಕ್ಕೆ ಕಾರಣವಾಗಿದೆ. ಜನವರಿಯಿಂದ ಮಾರ್ಚ್ ವರೆಗಿನ ತ್ರೈಮಾಸಿಕದಲ್ಲಿ ಜಿಡಿಪಿ ಶೇ 6.1ರಷ್ಟಿತ್ತು. ಅದೀಗ ಮತ್ತೂ ಕುಸಿತ ಕಂಡು, ಅಂದರೆ ಶೇ 0.4ರಷ್ಟು ಇಳಿಕೆಯಾಗಿ 5.7 ತಲುಪಿದೆ. 2014ರ ಜೂನ್-ಮಾರ್ಚ್ ನಡಿವಿನ ಜಿಡಿಪಿ ಕುಸಿತದ ನಂತರ ಇದೇ ಮೊದಲ ಬಾರಿಗೆ ಇಷ್ಟು ಕೆಳಮಟ್ಟಕ್ಕೆ ಜಿಡಿಪಿ ಇಳಿಕೆಯಾಗಿದೆ.

ಕನಿಷ್ಠ ಮುಂದಿನ ತ್ರೈಮಾಸಿಕದವರಗೆ ಜಿಡಿಪಿ ಬೆಳವಣಿಗೆ ದರದಲ್ಲಿ ಯಾವುದೇ ಬದಲಾವಣೆಗಳಾಗುವ ಸಾಧ್ಯತೆಗಳಿಲ್ಲ. ಜಿಡಿಪಿ ಕುಸಿತ ಹೀಗೆ ಮುಂದುವರಿಯಲಿದೆ ಎನ್ನಲಾಗಿದೆ.
ಇನ್ನು ಸದ್ಯಕ್ಕೆ ಜಿಎಸ್ಟಿ ಕೂಡಾ ಜಾರಿಗೆ ಬಂದಿದ್ದು ಆರ್ಥಿಕತೆಯ ಸ್ಥಿರತೆಯನ್ನೇ ಇದು ಅಲ್ಲಾಡಿಸಿದೆ. ಇದರ ಪ್ರಭಾವ ಮುಂದಿನ ಎರಡು ತ್ರೈಮಾಸಿಕಗಳ ಮೇಲೆ ಪರಿಣಾಮ ಬೀರಲಿದೆ ಎಂದು ಆರ್ಥಿಕ ತಜ್ಞರು ಭವಿಷ್ಯ ನುಡಿದಿದ್ದಾರೆ.
"ಜಿಡಿಪಿ ಬೆಳವಣಿಗೆ ಮೇಲೆ ಜಿಎಸ್ಟಿ ನಕಾರಾತ್ಮಕ ಪರಿಣಾಮ ಬೀರಲಿದೆ," ಎಂದು ಆರ್ಥಿಕ ತಜ್ಞೆ ಅಂಜಲಿ ವರ್ಮಾ 'ರಾಯ್ಟರ್' ಸುದ್ದಿಸಂಸ್ಥೆಗೆ ಅಭಿಪ್ರಾಯ ತಿಳಿಸಿದ್ದಾರೆ.
"ಖಾಸಗಿ ಹೂಡಿಕೆಗಳು ಹೆಚ್ಚುತ್ತಿಲ್ಲ. ಈ ಕಾರಣಕ್ಕೆ ನಾವು ಜಿಎಸ್ಟಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ," ಎಂದು ಹಿರಿಯ ಸಂಶೋಧಕಿ ಮಿಹಿರ್ ಶರ್ಮಾ ಎನ್ಡಿಟಿವಿಗೆ ತಿಳಿಸಿದ್ದಾರೆ.
ಇನ್ನು ಕೈಗಾರಿಕಾ ಉದ್ಯಮಿಗಳ ಒಕ್ಕೂಟ 'ಅಸೋಚಾಮ್' ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ. ಖಾಸಗಿ ಹೂಡಿಕೆಯನ್ನು ಆಕರ್ಷಿಸಲು ಸರಕಾರ ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಸೋಚಾಮ್ ಒತ್ತಾಯಿಸಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications