ಅತೀಕ್ ಅಹ್ಮದ್, ಅಶ್ರಫ್ ಅಹ್ಮದ್ ಹತ್ಯೆ ಕೇಸ್: ಯುಪಿಯಲ್ಲಿ ಸುರಕ್ಷತೆಯ ಬಗ್ಗೆ ದೀದಿ ಪ್ರಶ್ನೆ
ಕ್ರಿಮಿನಲ್ ಅತೀಕ್ ಅಹ್ಮದ್ ಹಾಗೂ ಅಶ್ರಫ್ ಅಹ್ಮದ್ ಮೇಲಿನ ಗುಂಡಿನ ದಾಳಿಯಿಂದಾಗಿ ಯುಪಿ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ಮಾಡಿವೆ. ಜೊತೆಗೆ ಯುಪಿಯಲ್ಲಿ ಸುರಕ್ಷತೆಯ ಬಗ್ಗೆ ಪ್ರಶ್ನೆ ಮಾಡಿವೆ.
ಈ ಘಟನೆಯ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಭಾರತದ ಅತೀ ದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಅಧಃಪತನಕ್ಕೆ ಇಳಿದಿರುವುದನ್ನು ಕಂಡು ತುಂಬಾ ಆಘಾತವಾಗಿದೆ' ಎಂದು ಟ್ವೀಟ್ ಮಾಡಿದ್ದಾರೆ.

'ಉತ್ತರ ಪ್ರದೇಶದಲ್ಲಿನ ಅರಾಜಕತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಕುಸಿತಗೊಂಡಿದೆ. ಇದರಿಂದ ನನಗೆ ಆಘಾತವಾಗಿದೆ. ಪೊಲೀಸರು ಮತ್ತು ಮಾಧ್ಯಮದವರ ಕಣ್ನೆದುರು ದುಷ್ಕರ್ಮಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಇಂತಹ ಕಾನೂನುಬಾಹಿರ ಕೃತ್ಯಗಳಿಗೆ ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ' ಎಂದು ದೀದಿ ಟ್ವೀಟ್ ಮಾಡಿದ್ದಾರೆ.
On the occasion of Poila Boishakh, I extend my heartfelt greetings to all fellow residents.
— Mamata Banerjee (@MamataOfficial) April 15, 2023
I wish the dawn of New Year brings an abundance of hope, happiness, & health in your lives.
Today, let's commit to the inclusive welfare & development of society.
Shubho Nobo Borsho!
ಉತ್ತರಪ್ರದೇಶದಲ್ಲಿ ಹಿಂದೆಂದೂ ಕೇಳಿ ಕಂಡರಿಯದ ಘಟನೆ ನಡೆದಿದೆ. ಮಾಧ್ಯಮದವರ ಮುಂದೆ ದಾಳಿಕೋರರು ಅಟ್ಟಹಾಸ ಮೆರೆದಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಕ್ರಿಮಿನಲ್ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಮೇಲೆ ದಾಳಿ ನಡೆದಿಎ. ಘಟನೆಯಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ.
ಕಳೆದ ರಾತ್ರಿ (ಏಪ್ರಿಲ್15) ಪೊಲೀಸ್ ಭದ್ರತೆಯಲ್ಲಿದ್ದ ಆರೋಪಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಮೇಲೆ ನಡೆದ ಗುಂಡಿನ ದಾಳಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ನೋಡ ನೋಡುತ್ತಿದ್ದಂತೆ ದಾಳಿಕೋರರು ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಮೇಲೆ ಗುಂಡಿನ ಸುರಿ ಮಳೆ ಸುರಿಸಿದ್ದಾಳೆ.

ಪೊಲೀಸರು ಪ್ರಯಾಗ್ರಾಜ್ನಲ್ಲಿ ಬಂಧಿತ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಎಂದಿನಂತೆ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಾಧ್ಯಮದವರು ಅತೀಕ್ ಅಹ್ಮದ್ ಮತ್ತು ಅಶ್ರಫ್ ಅಹ್ಮದ್ ಅವರ ಮುಂದೆ ಕ್ಯಾಮರಾ ಹಿಡಿದು ಪ್ರಶ್ನೆಗಳನ್ನು ಕೇಳಲು ಮುಂದಾಗಿದ್ದಾರೆ. ಇದೇ ವೇಳೆ ಸುದ್ದಿಗಾರರಂತೆ ವೇಷಧರಿಸಿದ್ದ ಮೂವರು ದಾಳಿಕೋರರು ಏಕಾಏಕಿ ಗುಂಡಿನ ದಾಳಿಗೆ ಮುಂದಾಗಿದ್ದಾರೆ. ದಾಳಿಯ ನಂತರ ಪೊಲೀಸರು ಮೂವರು ದಾಳಿಕೋರರನ್ನು ಬಂಧಿಸಿದ್ದಾರೆ.
ಜೊತೆಗೆ ದಾಳಿಕೋರರ ವಿಚಾರಣೆ ಕೂಡ ನಡೆಯುತ್ತಿದೆ.
ಈ ದೃಶ್ಯಗಳು ಸ್ಪಷ್ಟವಾಗಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರಪ್ರದೇಶದಲ್ಲಿ ಭದ್ರತೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿದೆ. ಜನನಿಬಿಡ ಪ್ರದೇಶದಲ್ಲಿ ದಾಳಿಕೋರರು ಯಾವುದೇ ಭಯವಿಲ್ಲದೆ ಈ ರೀತಿ ದಾಳಿ ಮಾಡಿದ್ದು ಭೀತಿಯನ್ನು ಹುಟ್ಟುಹಾಕಿದೆ. ಘಟನೆಯಿಂದಾಗಿ ಉತ್ತರಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು 144 ಸೆಕ್ಷನ್ ಜಾರಿಗೊಳಿಸಲಾಗಿದೆ. ರಾಜ್ಯದಾದ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ವಿಶೇಷವಾಗಿ ಪ್ರಯಾಗ್ರಾಜ್ನಲ್ಲಿ ಪೊಲೀಸ್ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications