Atiq, Ashraf Murder Case: ಅತೀಕ್, ಅಶ್ರಫ್ ಹತ್ಯೆ ಪ್ರಕರಣ: 5 ಯುಪಿ ಪೊಲೀಸರ ಅಮಾನತು
ಲಕ್ನೋ ಏಪ್ರಿಲ್ 19: ಕ್ರಿಮಿನಲ್ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಗರಾಜ್ನ ಐವರು ಪೊಲೀಸ್ ಅಧಿಕಾರಿಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ. ಅಧಿಕಾರಿಗಳನ್ನು ಶಹಗಂಜ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದೆ.
ಏಪ್ರಿಲ್ 16 ರಂದು ಕ್ರಿಮಿನಲ್ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯತ್ತದ್ದ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಿದ್ದಾಗ ಪತ್ರಕರ್ತರಂತೆ ನುಗ್ಗಿ ಬಂದ ಮೂವರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಅತೀಕ್, ಅಶ್ರಫ್ ಮೇಲೆ ಸರಿಣಿ ಗುಂಡಿನ ದಾಳಿ ಮಾಡಿದ್ದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಎಚ್ಚತ್ತ ಪೊಲೀಸರು ಮೂವರು ದಾಳಿಕೋರರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಪ್ರಕರಣ MLN ವೈದ್ಯಕೀಯ ಕಾಲೇಜು ಆವರಣದಲ್ಲಿ ನಡೆದಿತ್ತು. ಇದು ಶಹಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಡುತ್ತದೆ. ಮೂವರು ಶೂಟರ್ಗಳಾದ ಹಮೀರ್ಪುರದ ಸನ್ನಿ ಸಿಂಗ್ (23), ಬಂಡಾದ ಲವಲೇಶ್ ತಿವಾರಿ (22) ಮತ್ತು ಕಾಸ್ಗಂಜ್ನ ಅರುಣ್ ಮೌರ್ಯ (18) ಅವರನ್ನು ಬುಧವಾರ ಏಪ್ರಿಲ್ 23 ರವರೆಗೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ಮಾಧ್ಯಮದವರು ಹಾಗೂ ಪೊಲೀಸರ ಮುಂದೆ ಯಾವುದೇ ಭಯಭೀತಿಯಿಲ್ಲದೆ ಗುಂಡು ಹಾರಿಸಿರುವ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಇದು ಉತ್ತರಪ್ರದೇಶದಲ್ಲಿ ಸುರಕ್ಷತೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ಇದರಿಂದ ಘಟನೆಯ ದಿನವೇ ಸಭೆ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್ ನಡೆಸಿದರು. ಮರುದಿನವೇ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಉಮೇಶ್ ಪಾಲ್ ಹತ್ಯೆಯ ಎಫ್ಐಆರ್ನಲ್ಲಿ ಹೆಸರಿಸಲಾದ 10 ಜನರಲ್ಲಿ ಗುಡ್ಡು ಮುಸ್ಲಿಂ ಒಬ್ಬರು. ಅವರಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಪರಾರಿಯಾಗಿರುವ ನಾಲ್ವರಲ್ಲಿ ಗುಡ್ಡು ಮುಸ್ಲಿಂ ಕೂಡ ಒಬ್ಬರು.

ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಉತ್ತರ ಪ್ರದೇಶ ಪೊಲೀಸ್ ಎಸ್ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ವಿಶೇಷ ಡಿಜಿ ಪ್ರಶಾಂತ್ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಶೈಸ್ತಾ ಮತ್ತು ಗುಡ್ಡು ಮುಸ್ಲಿಂರನ್ನು ತ್ವರಿತವಾಗಿ ಬಂಧಿಸುವುದು ಹೇಗೆ ಎಂದು ಅಧಿಕಾರಿಗಳೊಂದಿಗೆ ಸಿಎಂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಶೈಸ್ತಾ ಪರ್ವೀನ್ಗೆ ಸಹಾಯ ಮಾಡಿದ ಶಂಕಿತ 20 ಕ್ಕೂ ಹೆಚ್ಚು ಜನರನ್ನು ಪೊಲೀಸರು ಇದುವರೆಗೆ ಗುರುತಿಸಿದ್ದಾರೆ. ಗುಡ್ಡು ಮುಸಲ್ಮಾನರ ಕೊನೆಯ ಸ್ಥಳ ಕರ್ನಾಟಕದಲ್ಲಿತ್ತು ಎಂದು ತಿಳಿದು ಬಂದಿದೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ












Click it and Unblock the Notifications