ATM Withdrawals: ಎಟಿಎಂ ಬಳಕೆದಾರರಿಗೆ ಶಾಕ್, ಮೇ 1ರಿಂದ ಹಣ ವಿತ್ಡ್ರಾಗೆ ಹೊಸ ನಿಯಮ
ಈಗಾಗಲೇ ಹಲವು ವಸ್ತುಗಳ ಬೆಲೆ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಇದೀಗ ಮತ್ತೊಂದು ದುಬಾರಿ ಶಾಕ್ ಜನರ ಮುಂದಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಎಟಿಎಂ ಇಂಟರ್ಚೇಂಜ್ ಶುಲ್ಕವನ್ನು ಹೆಚ್ಚಿಸಿದ್ದು, ಮೇ 1ರಿಂದ ದೇಶದ ಎಲ್ಲ ಎಟಿಎಂಗಳಲ್ಲಿ ಹಣ ವಿತ್ಡ್ರಾ ದುಬಾರಿಯಾಗಲಿದೆ. ಇನ್ನು ಹಣಕಾಸಿನ ವಹಿವಾಟುಗಳಿಗಾಗಿ ಎಟಿಎಂಗಳನ್ನು ಅವಲಂಬಿಸಿರುವ ಗ್ರಾಹಕರು ತಮ್ಮ ಉಚಿತ ವಹಿವಾಟು ಮಿತಿಯನ್ನು ಮೀರಿದಾಗ ಹೆಚ್ಚುವರಿ ಶುಲ್ಕಗಳನ್ನು ಪಾವತಿಸಬೇಕಾಗುತ್ತದೆ ಎಂದು ಆರ್ಬಿಐ ತಿಳಿಸಿದೆ.
ಎಟಿಎಂ ಸೇವೆಗಳನ್ನು ಒದಗಿಸಲು ಒಂದು ಬ್ಯಾಂಕ್ ಮತ್ತೊಂದು ಬ್ಯಾಂಕ್ಗೆ ಪಾವತಿಸುವ ಶುಲ್ಕವೇ ಎಟಿಎಂ ಇಂಟರ್ಚೇಂಜ್ ಶುಲ್ಕ. ಇದು ಸಾಮಾನ್ಯವಾಗಿ ಪ್ರತಿ ವಹಿವಾಟಿಗೆ ನಿಗದಿತ ಮೊತ್ತವಾಗಿದ್ದು, ಇದನ್ನು ಸಾಮಾನ್ಯವಾಗಿ ಗ್ರಾಹಕರಿಗೆ ಅವರ ಬ್ಯಾಂಕಿಂಗ್ ವೆಚ್ಚದ ಭಾಗವಾಗಿ ವರ್ಗಾಯಿಸಲಾಗುತ್ತದೆ. ಈಗ ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚಗಳು ತಮ್ಮ ವ್ಯವಹಾರದ ಮೇಲೆ ಪರಿಣಾಮ ಬೀರುತ್ತಿವೆ ಎಂದು ವೈಟ್-ಲೇಬಲ್ ಎಟಿಎಂ ಆಪರೇಟರ್ಗಳ ವಿನಂತಿಗಳನ್ನು ಅನುಸರಿಸಿ, ಆರ್ಬಿಐ ಈ ಶುಲ್ಕಗಳನ್ನು ಪರಿಷ್ಕರಿಸಲು ನಿರ್ಧರಿಸಿದೆ. ಹಾಗಾಗಿ ಮೇ 1ರಿಂದ ಎಟಿಎಂ ವಿತ್ಡ್ರಾ ದುಬಾರಿಯಾಗಲಿದ್ದು, ಆರ್ಬಿಐ ಶುಲ್ಕ ಹೆಚ್ಚಳಕ್ಕೆ ಅನುಮೋದನೆಯೂ ನೀಡಿದೆ.

ಈ ಶುಲ್ಕ ಹೆಚ್ಚಳವು ದೇಶದಾದ್ಯಂತ ಅನ್ವಯವಾಗಲಿದ್ದು, ವಿಶೇಷವಾಗಿ ಸಣ್ಣ ಬ್ಯಾಂಕ್ಗಳ ಗ್ರಾಹಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬ್ಯಾಂಕುಗಳು ಎಟಿಎಂ ಮತ್ತು ಸಂಬಂಧಿತ ಸೇವೆಗಳಿಗಾಗಿ ದೊಡ್ಡ ಹಣಕಾಸು ಸಂಸ್ಥೆಗಳನ್ನು ಅವಲಂಬಿಸಿವೆ. ಇದರಿಂದಾಗಿ ಅವು ಹೆಚ್ಚುತ್ತಿರುವ ವೆಚ್ಚಗಳಿಗೆ ಹೆಚ್ಚು ಗುರಿಯಾಗಲಿವೆ. ಹಾಗಾಗಿ ಮೇ 1ರಿಂದ ಗ್ರಾಹಕರು ತಮ್ಮ ಉಚಿತ ಮಿತಿಯನ್ನು ಮೀರಿದ ಪ್ರತಿ ಹಣಕಾಸು ವಹಿವಾಟಿಗೆ ಹೆಚ್ಚುವರಿಯಾಗಿ 2 ರೂಪಾಯಿ ಪಾವತಿಸಬೇಕು.
ಬ್ಯಾಲೆನ್ಸ್ ಪರಿಶೀಲನೆಯಂತಹ ಹಣಕಾಸುಯೇತರ ವಹಿವಾಟುಗಳಿಗೆ ಶುಲ್ಕವು 1 ರೂಪಾಯಿ ಹೆಚ್ಚಾಗಲಿದೆ. ಇದರ ಪರಿಣಾಮವಾಗಿ ಎಟಿಎಂನಿಂದ ಹಣವನ್ನು ಹಿಂಪಡೆಯಲು ಪ್ರತಿ ವಹಿವಾಟಿಗೆ 19 ರೂಪಾಯಿ ವೆಚ್ಚವಾಗಲಿದೆ. ಈ ಹಿಂದೆ 17 ರೂಪಾಯಿ ಇತ್ತು. ಖಾತೆಯ ಬ್ಯಾಲೆನ್ಸ್ ಪರಿಶೀಲಿಸಲು ಈಗ ಪ್ರತಿ ವಹಿವಾಟಿಗೆ 7 ರೂಪಾಯಿ ವೆಚ್ಚವಾಗಲಿದೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ. ಮೊದಲಿಗೆ ಕ್ರಾಂತಿಕಾರಿ ಬ್ಯಾಂಕಿಂಗ್ ಸೇವೆ ಎಂದು ಪರಿಗಣಿಸಲಾಗಿದ್ದ ಈ ಎಟಿಎಂಗಳು, ಡಿಜಿಟಲ್ ಪಾವತಿಗಳ ಏರಿಕೆಯಿಂದಾಗಿ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿವೆ.

ಆನ್ಲೈನ್ ವ್ಯಾಲೆಟ್ಗಳು ಮತ್ತು ಯುಪಿಐ ವಹಿವಾಟುಗಳ ಅನುಕೂಲತೆಯು ನಗದು ಹಿಂಪಡೆಯುವಿಕೆಯ ಅಗತ್ಯವನ್ನು ಇತ್ತೀಚೆಗೆ ಕಡಿಮೆ ಮಾಡಿದೆ. ಸರ್ಕಾರಿ ದತ್ತಾಂಶವು ಭಾರತದಲ್ಲಿ ಡಿಜಿಟಲ್ ಪಾವತಿಗಳ ಮೌಲ್ಯವು ಮೊದಲಿಗೆ 952 ಲಕ್ಷ ಕೋಟಿ ರೂ.ಗಳಷ್ಟಿತ್ತು. ಆರ್ಥಿಕ ವರ್ಷ 23ರ ಹೊತ್ತಿಗೆ ಈ ಅಂಕಿ ಅಂಶವು 3,658 ಲಕ್ಷ ಕೋಟಿ ರೂಪಾಯಿಗಳಿಗೆ ಏರಿತು. ಇದು ನಗದುರಹಿತ ವಹಿವಾಟಿನತ್ತ ಭಾರಿ ಬದಲಾವಣೆಗೆ ಸಾಕ್ಷಿ ಎನ್ನಲಾಗಿದೆ. ಈ ಹೊಸ ಶುಲ್ಕ ಹೆಚ್ಚಳದೊಂದಿಗೆ ಇನ್ನೂ ನಗದು ವಹಿವಾಟುಗಳನ್ನು ಅವಲಂಬಿಸಿರುವ ಗ್ರಾಹಕರು ಹೊರೆಯನ್ನು ಅನುಭವಿಸಬಹುದು ಎಂದೂ ಹೇಳಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications