2020ರ ಹೊತ್ತಿಗೆ ಎಂಟಿಎಂ, ಕಾರ್ಡುಗಳು ನಿರುಪಯುಕ್ತ !
ಬೆಂಗಳೂರು, ಜ. 8: ಕೇಂದ್ರ ಸರ್ಕಾರದ ಅಪನಗದೀಕರಣ ನಿರ್ಧಾರದ ಹಿನ್ನೆಲೆಯಲ್ಲಿ ಹಠಾತ್ ಏರಿಕೆ ಕಂಡಿರುವ ನಗದು ರಹಿತ ಪಾವತಿ ಪದ್ಧತಿಯಿಂದಾಗಿ 2020ರ ಹೊತ್ತಿಗೆ ಎಂಟಿಎಂಗಳು, ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡುಗಳು ನಿರುಪಯುಕ್ತ ಎನಿಸಲಿವೆ ಎಂದು ರಾಷ್ಟ್ರೀಯ ನೀತಿ ಆಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೂರು ದಿನಗಳ ಪ್ರವಾಸಿ ಭಾರತೀಯ ದಿವಸ್ ನ ಅಂಗವಾಗಿ ಆಯೋಜಿಸಲಾಗಿರುವ ಯುವ ಪ್ರವಾಸಿ ಭಾರತೀಯ ದಿವಸ್ ವಿಭಾಗದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿ ಈ ವಿಷಯ ತಿಳಿಸಿದರು.

ಅಪನಗದೀಕರಣ ನಂತರದ ಕಾಲಘಟ್ಟದಲ್ಲಿ ಭಾರತವು ಹೊಸ ಹೊಸ ಆರ್ಥಿಕ ತಂತ್ರಜ್ಞಾನಗಳನ್ನು ಹಾಗೂ ಸಾಮಾಜಿಕ ಸ್ತರಗಳಲ್ಲಿ ಡಿಜೆಟಲ್ ಪೇಮೆಂಟ್ ಕುರಿತಂತೆ ಹೆಚ್ಚೆಚ್ಚು ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಇದು ನಗದು ಮುಕ್ತ ಸಮಾಜದತ್ತ ದೈತ್ಯ ಹೆಜ್ಜೆ ಇಡಲು ಸಹಕಾರಿಯಾಗಲಿದೆ ಎಂದರು.
ನಗದು ರಹಿತ ಪಾವತಿಯನ್ನು ಸುಲಭವಾಗಿಸುವ ನಿಟ್ಟಿನಲ್ಲಿ ಭಾರತ ಕೈಗೊಳ್ಳಲಿರುವ ಹಲವಾರು ಯೋಜನೆಗಳು 2020ರ ಹೊತ್ತಿಗೆ ಸರ್ವಪ್ಯಾಪಿಯಾಗಲಿವೆ. ಇದರ ಫಲವಾಗಿ ಆಧಾರ್ ಕಾರ್ಡುಗಳ ಮೂಲಕ, ಬೆರಳ ಗುರುತಿನ ಮೂಲಕ ಕೇವಲ 30 ಸೆಕೆಂಡ್ ಗಳೊಳಗೆ ಪಾವತಿಸುವ ಸೌಲಭ್ಯ ದೊರೆಯಲಿದೆ. ಆಗ, ಎಟಿಎಂ ಹಾಗೂ ನಮ್ಮ ಬಳಿಯಿರುವ ಕ್ರೆಡಿಟ್, ಡೆಬಿಟ್ ಕಾರ್ಡುಗಳು ನಿರುಪಯುಕ್ತ ಎನಿಸಲಿವೆ ಎಂದು ಅವರು ವಿವರಿಸಿದರು.
ಇದೇ ವೇಳೆ, ಗ್ರಾಮೀಣ ಭಾಗದ ಜನರಿಗೆ ನಗದು ರಹಿತ ಪಾವತಿಗಳ ತಂತ್ರಜ್ಞಾನ ಹಾಗೂ ವಿಧಾನಗಳು ಕ್ಲಿಷ್ಟಕರವಾಗಿರುವುದನ್ನು ಕೇಂದ್ರ ಸರ್ಕಾರ ಗಮನಿಸಿದೆ. ಈ ತೊಡಕನ್ನು ನಿವಾರಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ, ಗ್ರಾಮೀಣ ಪ್ರದೇಶದ ಜನರಿಗೆ ನಗದು ರಹಿತ ಪಾವತಿಯ ಬಗ್ಗೆ ಹೆಚ್ಚೆಚ್ಚು ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications