Get Updates
Get notified of breaking news, exclusive insights, and must-see stories!

ಆತ್ಮಹತ್ಯೆಗೆ ಯತ್ನಿಸುವುದು ಇನ್ನು ಅಪರಾಧವಲ್ಲ!

ನವದೆಹಲಿ, ಡಿ. 10 : ಇನ್ನು ಮುಂದೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಬದುಕುಳಿದರೆ ಪೊಲೀಸರು ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳುವುದಿಲ್ಲ. ಭಾರತೀಯ ದಂಡ ಸಂಹಿತೆಯಲ್ಲಿ ತಿದ್ದುಪಡಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅಪರಾಧ ಪ್ರಕರಣಗಳ ಪಟ್ಟಿಯಿಂದ ಆತ್ಮಹತ್ಯೆ ಯತ್ನವನ್ನು ತೆಗೆದುಹಾಕಲು ನಿರ್ಧರಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ 18 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳು ಸಮ್ಮತಿ ಸೂಚಿಸಿದ್ದು, ಸೆಕ್ಷನ್ 309ಅನ್ನು ತೆಗೆದು ಹಾಕಲು ಸರ್ಕಾರ ಮುಂದಾಗಿದೆ. ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದವರ ವಿರುದ್ಧ ದೂರು ದಾಖಲು ಮಾಡದೆ ಅವರಲ್ಲಿ ಜೀವನೋಲ್ಲಾಸ ತುಂಬಲು ಈ ತೀರ್ಮಾನ ಕೈಗೊಳ್ಳಲಾಗಿದೆ.

Suicide

ಇನ್ನು ಮುಂದೆ 309 ಸೆಕ್ಷನ್‌ ತೆಗೆದು ಹಾಕಲು ನಿರ್ಧರಿಸಲಾಗಿದ್ದು, ಆತ್ಮಹತ್ಯೆ ಯತ್ನ ಮಾಡಿ ಬದುಕುಳಿದ ವ್ಯಕ್ತಿಯ ವಿರುದ್ಧ ದೂರು ಸ್ವೀಕರಿಸುವಂತಿಲ್ಲ. ವಿಚಾರಣೆ ಅಥವಾ ತನಿಖೆ ನಡೆಸುವಂತಿಲ್ಲ ಎಂಬ ನಿಯಮವನ್ನು ರೂಪಿಸಲಾಗುತ್ತದೆ. [ಕಡಿಮೆ ಕಾನೂನು, ಹೆಚ್ಚಿನ ಪ್ರಭಾವ : ಗೌಡರ ಘೋಷಣೆ]

ಸದ್ಯ ಐಪಿಸಿ ಸೆಕ್ಷನ್‌ 309ರ ಅಡಿ ಆತ್ಮಹತ್ಯೆಗೆ ಯತ್ನಿಸಿದವರಿಗೆ 1 ವರ್ಷ ಜೈಲು ಮತ್ತು ದಂಡ ವಿಧಿಸಲಾಗುತ್ತಿತ್ತು. ಕೇಂದ್ರದಲ್ಲಿ ಹೊಸ ಸರ್ಕಾರ ಜಾರಿಗೆ ಬಂದಾಗಲೇ ಅನಗತ್ಯ ಕಾನೂನುಗಳನ್ನು ತೆಗೆದುಹಾಕುವ ಬಗ್ಗೆ ಚರ್ಚೆ ಆರಂಭವಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+