ಆತ್ಮಹತ್ಯೆ ಯತ್ನ ಅಪರಾಧವಲ್ಲ, ಲೋಕಸಭೆಯಲ್ಲಿ ಮಸೂದೆ ಅಂಗೀಕಾರ
ಆತ್ಮಹತ್ಯೆಗೆ ಯತ್ನಿಸುವುದು ಐಪಿಸಿ 309ರ ಪ್ರಕಾರ ಅಪರಾಧ. ಮಾನಸಿಕ ಒತ್ತಡ, ಸಮಸ್ಯೆಯಿಂದ ಆತ್ಮಹತ್ಯೆಗೆ ಯತ್ನಿಸಿದರೆ ಅಂಥ ವ್ಯಕ್ತಿಗಳಿಗೆ ಶಿಕ್ಷೆ ನೀಡಬಾರದು ಎಂಬ ಮಹತ್ವದ ಅಂಶವುಳ್ಳ ಮಸೂದೆಯನ್ನು ಸೋಮವಾರ ಸಂಸತ್ ನಲ್ಲಿ ಅಂಗೀಕರಿಸಲಾಗಿದೆ
ನವದೆಹಲಿ, ಮಾರ್ಚ್ 28: ಮಾನಸಿಕ ಆರೋಗ್ಯ ರಕ್ಷಣೆಯ ಮಹತ್ವದ ಮಸೂದೆ ಲೋಕಸಭೆಯಲ್ಲಿ ಸೋಮವಾರ ಅಂಗೀಕರವಾಗಿದೆ. ಈ ಮಸೂದೆಯ ಅತಿ ಮುಖ್ಯ ಅಂಶವೆಂದರೆ ಮಾನಸಿಕ ಸಮಸ್ಯೆ ಎದುರಿಸುತ್ತಿರುವವರು ಆತ್ಮಹತ್ಯೆಗೆ ಯತ್ನಿಸಿದರೆ ಅದೊಂದು ಅಪರಾಧ ಎಂದು ಪರಿಗಣಿಸುವಂತಿಲ್ಲ, ಜತೆಗೆ ಮಾನಸಿಕ ಅನಾರೋಗ್ಯ ಇರುವವರಿಗೆ ಅಗತ್ಯ ಸೇವೆ ಒದಗಿಸಲು ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ.
ಭಾರತೀಯ ದಂಡ ಸಂಹಿತೆ 309ರ ಪ್ರಕಾರ ಆತ್ಮಹತ್ಯೆಗೆ ಯತ್ನಿಸುವುದು ಅಪರಾಧ. ಆದರೆ ಆ ವ್ಯಕ್ತಿಗೆ ತೀವ್ರ ಒತ್ತಡ, ಮಾನಸಿಕ ಸಮಸ್ಯೆ ಇದೆ ಎಂದು ಸಾಬೀತಾದಲ್ಲಿ ಆತ್ಮಹತ್ಯೆ ಯತ್ನವನ್ನು ಅಪರಾಧ ಎಂದು ಪರಿಗಣಿಸಬಾರದು ಎಂದು ಮಸೂದೆಯಲ್ಲಿ ಪ್ರಸ್ತಾವ ಮಾಡಲಾಗಿದೆ. ಮತ್ತು ಐಪಿಸಿ 309ರ ಅಡಿಯಲ್ಲಿ ಆ ವ್ಯಕ್ತಿ ಶಿಕ್ಷಾರ್ಹರಲ್ಲ.[ಕನಿಷ್ಠ 6 ಕೋಟಿ ಭಾರತೀಯರಿಗೆ ಮಾನಸಿಕ ಆರೋಗ್ಯ ಸಮಸ್ಯೆ]

ಮಾನಸಿಕ ಆರೋಗ್ಯ ರಕ್ಷಣೆ ಮಸೂದೆಯ ಪ್ರಮುಖ ಅಂಶಗಳು ಹೀಗಿವೆ.
ಸರಕಾರದ ಅನುದಾನ ಅಥವಾ ಸರಕಾರವೇ ನಡೆಸುವ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸೇವೆ ಪಡೆಯುವ ಹಕ್ಕು ಎಲ್ಲರಿಗೂ ಇದೆ. ಉತ್ತಮ ದರ್ಜೆಯ, ಸುಲಭ ಬೆಲೆಯ ಹಾಗೂ ಎಲ್ಲರನ್ನೂ ತಲುಪುವಂಥ ಸೇವೆ ಒದಗಿಸಬೇಕು. ಎಲ್ಲರಿಗೂ ಸಮಾನ ಚಿಕಿತ್ಸೆ ಎಂಬ ಹಕ್ಕಿನ ಹೊರತಾಗಿ ಈ ಎಲ್ಲ ಸೇವೆ ಒದಗಿಸಬೇಕು
ಮಾನಸಿಕ ಆರೋಗ್ಯ ಸಮಸ್ಯೆ ಆಧಾರದಲ್ಲಿ ಆಯಾ ವ್ಯಕ್ತಿಯ ಅಗತ್ಯಕ್ಕೆ ತಕ್ಕಂತೆ ಉನ್ನತ ಮಟ್ಟದ ಚಿಕಿತ್ಸೆ ಒದಗಿಸಬೇಕು. ಆಯಾ ವ್ಯಕ್ತಿಯ ಸಂಬಂಧಪಟ್ಟವರು ಅಪೇಕ್ಷಿಸುವಂಥ ಸೇವೆ ನೀಡಬೇಕು ಮತ್ತು ಸಂಬಂಧಪಟ್ಟ ವೈದ್ಯಕೀಯ ಪರಿಣತರು ಆ ಚಿಕಿತ್ಸೆಗೆ ಸಲಹೆ ಮಾಡಿರಬೇಕು.[ಸ್ನೇಹಭವನದ ಮಮತೆಯ ಮಡಿಲಲ್ಲಿ ಮಾನಸಿಕ ಅಸ್ವಸ್ಥರು]
ಮಾನಸಿಕ ಸಮಸ್ಯೆ ಇರುವವರು ಆತ್ಮಹತ್ಯೆಗೆ ಯತ್ನಿಸಿದರೆ ಭಾರತೀಯ ದಂಡ ಸಂಹಿತೆಯಡಿ ಶಿಕ್ಷಾರ್ಹ ಅಪರಾಧ ಅಲ್ಲ.
ಉನ್ನತ ಮಟ್ಟದ ಪ್ರಕ್ರಿಯೆಗಳ ಪರಿಶೀಲನೆಗಾಗಿ ಅರೆ ನ್ಯಾಯಾಂಗ ವ್ಯವಸ್ಥೆಯೊಂದನ್ನು ರೂಪಿಸಲಾಗುವುದು. ಮಾನಸಿಕ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಯ ರಕ್ಷಣೆಗೆ ಸಂಬಂಧಿಸಿದಂತೆ ಅದು ಸರಕಾರಕ್ಕೆ ಶಿಫಾರಸುಗಳನ್ನು ಮಾಡುತ್ತದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications