17ಕ್ಕೆ ಮೋದಿ ಬರ್ತಡೇ; ಭಾನುವಾರದ ರಜೆ ರದ್ದು; ಭುಗಿಲೆದ್ದ ಆಕ್ರೋಶ
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಉತ್ತರ ಪ್ರದೇಶ ಸರ್ಕಾರಿ ಶಾಲೆಗಳ ಭಾನುವಾರದ ರಜೆ ಕ್ಯಾನ್ಸಲ್. ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಅಲ್ಲಿನ ಶಿಕ್ಷಣ ಸಚಿವರ ಆದೇಶ. ಸರ್ಕಾರದ ಕ್ರಮದ ವಿರುದ್ಧ ಪ್ರತಿಪಕ್ಷಗಳ ಟೀಕೆ.
ಲಕ್ನೋ, ಸೆಪ್ಟೆಂಬರ್ 8: ಇದೇ ತಿಂಗಳ 17ಕ್ಕೆ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ, ಅಂದು ಭಾನುವಾರವಾದರೂ, ಎಲ್ಲಾ ಶಾಲಾ ಮಕ್ಕಳೂ ಶಾಲೆಗಳಿಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಸರ್ಕಾರದ ಪರವಾಗಿ ಆದೇಶ ಹೊರಡಿಸಿರುವ ಪ್ರಾಥಮಿಕ ಶಿಕ್ಷಣ ಸಚಿವೆ ಅನುಪಮಾ ಜೈಸ್ವಾಲ್, ರಾಜ್ಯದಲ್ಲಿರುವ 1.60 ಲಕ್ಷ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪ್ರಧಾನಿ ಹುಟ್ಟುಹಬ್ಬದಂದು ಕಡ್ಡಾಯವಾಗಿ ಶಾಲೆಗಳಿಗೆ ಹಾಜರಾಗಬೇಕೆಂದು ಸೂಚಿಸಿದ್ದಾರೆ.

ಅಂದು, ಶಾಲೆಗಳಲ್ಲಿ ಪಾಠ, ಪ್ರವಚನ ಇಲ್ಲದಿದ್ದರೂ, ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಂಥ ಕಾರ್ಯಕ್ರಮಗಳನ್ನು ನಡೆಸಬೇಕು. ಸ್ವಚ್ಛ ಭಾರತ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಬೇಕು ಎಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ.
ಉತ್ತರ ಪ್ರದೇಶ ಸರ್ಕಾರದ ಈ ಆದೇಶವನ್ನು ತೀವ್ರವಾಗಿ ಖಂಡಿಸಿರುವ ಪ್ರತಿಪಕ್ಷಗಳು, ಮೋದಿ ಹುಟ್ಟುಹಬ್ಬದ ನೆಪದಲ್ಲಿ ಉತ್ತರ ಪ್ರದೇಶ ಸರ್ಕಾರ ಅವರ ಆರಾಧನೆಗೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.
ಆದರೆ, ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶ ಬಿಜೆಪಿ ವಕ್ತಾರ ಚಂದ್ರಮೋಹನ್, ''ಪ್ರಧಾನಿ ಮೋದಿ ಅವರು ಮಕ್ಕಳಿಗೆ ಐಕಾನ್ ಆಗಿದ್ದಾರೆ. ಹಾಗಾಗಿ, ಅವರು ತೋರಿದ ಆದರ್ಶಗಳ ಹಾದಿಯಲ್ಲಿ ನಡೆಯುವಂತೆ ಅವರ ಹುಟ್ಟುಹಬ್ಬದಂದು ಮಕ್ಕಳನ್ನು ಪ್ರೇರಿಪಿಸಲಾಗುವುದು. ಅಲ್ಲದೆ, ಸ್ವಚ್ಛ ಭಾರತದ ಬಗ್ಗೆ ಅವರಲ್ಲಿ ಹೆಚ್ಚಿನ ಅರಿವನ್ನು ಮೂಡಿಸಲಾಗುವುದು'' ಎಂದು ಅವರು ತಿಳಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications