ಸಂಸದರ ಗೈರು ಹಾಜರಿ: ಗಂಭೀರ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ
ಕಲಾಪಗಳಿಗೆ ಗೈರಾಗುವ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಗಂಭೀರ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ, ಮಾರ್ಚ್ 22: ರಾಜ್ಯ ಸಭೆ ಮತ್ತು ಲೋಕಸಭೆ ಕಲಾಪಗಳಿಗೆ ಸಂಸದರು ಗೈರಾಗುವುದು ದೇಶದ ಬಗೆಗಿನ ಅವರ ನಿಷ್ಕಾಳಜಿಯನ್ನು ತೋರಿಸುತ್ತದೆ. ಸಕಾರಣವಿಲ್ಲದೆ ಕಲಾಪಗಳಿಗೆ ಗೈರಾಗಬೇಡಿ, ಇದು ನಾನು ಮನವಿ ಮಾಡಿಕೊಂಡು ತಿಳಿಸಬೇಕಾದ ವಿಷಯವಲ್ಲ. ನೀವೇ ಜವಾಬ್ದಾರಿಯಿಂದ ಅರಿಯಬೇಕಾದ ವಿಷಯ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸಂಸದರಿಗೆ ಗಂಭೀರವಾಗಿ ಎಚ್ಚರಿಕೆ ನೀಡಿದ್ದಾರೆ.
ಮಾರ್ಚ್ 21, ಮಂಗಳವಾರ ಬೆಳಗ್ಗೆ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಬಿಜೆಪಿ ಸಂಸದರಿಗೆ ನೇರವಾಗಿ ಎಚ್ಚರಿಕೆ ನೀಡಿದ ಮೋದಿ, ನಾನು ಯಾವುದೇ ಸಮಯದಲ್ಲಿ ನಿಮ್ಮನ್ನು ನನ್ನ ಕಚೇರಿಗೆ ಕರೆಸಿಕೊಳ್ಳಬಹುದು ಎಂದೂ ಹೇಳಿದ್ದಾರೆ.[ವಿಜಯೋತ್ಸವ ಭಾಷಣದಲ್ಲಿ ನರೇಂದ್ರ ಮೋದಿ ಟಾಪ್ 10 ಹೇಳಿಕೆಗಳು]

ಬಜೆಟ್ ಅಧಿವೇಶನದ ಸಂದರ್ಭದಲ್ಲೂ ಕೆಲವು ಸಂಸದರು ಸಂಸತ್ತಿಗೆ ಹಾಜರಿರದಿದ್ದ ವಿಷಯವನ್ನು ಗಮನದಲ್ಲಿಟ್ಟುಕೊಂಡಿದ್ದ ಅವರು, ಲಕ್ಷಾಂತರ ಜನರ ಪ್ರತಿನಿಧಿಯಾಗಿರುವ ನೀವು ಕಲಾಪಗಳಲ್ಲಿ ಗಂಭೀರವಾಗಿ ಭಾಗವಹಿಸಿದರೆ ಮಾತ್ರ ನಿಮ್ಮನ್ನು ಆಯ್ಕೆ ಮಾಡಿದ ಜನರಿಗೂ ನಿಮ್ಮ ಬಗ್ಗೆ ಗೌರವ ಉಳಿಯುತ್ತದೆ ಎಂದರು.[ನರೇಂದ್ರ ಮೋದಿ ಅಶ್ವಮೇಧ ಯಾಗ ವಿಫಲಗೊಳಿಸಲು ಮೆಗಾಪ್ಲಾನ್]
ರಾಜ್ಯದ ಬಿಜೆಪಿ ಸಂಸದರಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಶೇ.98 ರಷ್ಟು ಹಾಜಾರಾತಿ ಹೊಂದಿ ಅಗ್ರಸ್ಥಾನ ಪಡೆದಿದ್ದರೆ, ಬಿ.ಶ್ರೀರಾಮುಲು ಶೇ.56 ಹಾಜರಾತಿ ಪಡೆದು ಅತೀ ಕಡಿಮೆ ಹಾಜರಾತಿ ಹೊಂದಿರುವ ಸಂಸದರೆನ್ನಿಸಿದ್ದಾರೆ.[ಸಂಸದನಾಗಿ ಯೋಗಿ ಮಾಡಿದ ಕೊನೆಯ ಹೃದಯಂಗಮ ಭಾಷಣ]
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications