ಮೋದಿ ಹತ್ಯೆಗೆ ಸ್ಕೆಚ್ ಹಾಕಿದ್ದ ಅಬು ಜುಂದಾಲ್ ಗೆ ಜೀವಾವಧಿ ಶಿಕ್ಷೆ
ಮುಂಬೈ, ಆಗಸ್ಟ್ 02: 26/11ಮುಂಬೈ ದಾಳಿಯ ರೂವಾರಿ ಅಬು ಜುಂದಾಲ್ ಗೆ 2006ರಲ್ಲಿ ಔರಂಗಾಬಾದ್ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಕಾ ಕೋರ್ಟಿನಿಂದ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಅಬು ಸೇರಿದಂತೆ ಏಳು ಜನಕ್ಕೆ ಜೀವಾವಧಿ ಶಿಕ್ಷೆ ವಿಧಿಸಿ ಮೋಕಾ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿಇಬ್ಬರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಸಿಕ್ಕಿದ್ದರೆ, ಉಳಿದ ಮೂವರು ಅಪರಾಧಿಗಳಿಗೆ 8 ವರ್ಷ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ 8 ಜನರ ಖುಲಾಸೆಯಾಗಿದ್ದರೆ, ಒಬ್ಬ ಆರೋಪಿ ಇನ್ನೂ ನಾಪತ್ತೆಯಾಗಿದ್ದಾನೆ. ಜುಂದಾಲ್ ಬಂಧನದ ಬಳಿಕ ಮೋಕಾ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಕಳೆದ ಮಾರ್ಚ್ನಲ್ಲಿ ವಿಚಾರಣೆ ಮುಕ್ತಾಯಗೊಂಡಿತ್ತು.

ಮೋದಿ ಹತ್ಯ್ಗೆಗೆ ಸ್ಕೆಚ್ ಹಾಕಿದ್ದ ಜುಂದಾಲ್: 2002ರಲ್ಲಿ ಗೋಧ್ರಾ ಗಲಭೆಯ ಬಳಿಕ ಅಂದಿನ ಗುಜರಾತ್ ಸಿಎಂ ನರೇಂದ್ರ ಮೋದಿ ಮತ್ತು ವಿಶ್ವ ಹಿಂದು ಪರಿಷತ್ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರನ್ನು ಹತೈಗೈಯಲು ಜುಂದಾಲ್ ಸಂಚು ರೂಪಿಸಿದ್ದ. ಇದಕ್ಕಾಗಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಸಂಗ್ರಹಿಸಿದ್ದ.
2005ರ ಮೇ 8ರಂದು ಮಹಾರಾಷ್ಟ್ರ ಎಟಿಎಸ್ ತಂಡವು ಔರಂಗಾಬಾದ್ನ ಚಂದ್ವಾಡ್ - ಮನ್ಮಾದ್ ಹೆದ್ದಾರಿಯಲ್ಲಿ ಟಾಟಾ ಸುಮೋ, ಇಂಡಿಕಾ ಕಾರನ್ನು ಬೆನ್ನಟ್ಟಿ ಮೂವರು ಶಂಕಿತ ಉಗ್ರರನ್ನು ಬಂಧಿಸಿತ್ತು. ಬಂಧಿತರಿಂದ 30 ಕೆ.ಜಿ. ಆರ್ಡಿಎಕ್ಸ್, 10 ಎ.ಕೆ.47ಬಂದೂಕು, 3,200 ಬುಲೆಟ್ಗಳನ್ನು ವಶಪಡಿಸಿ ಕೊಂಡಿತ್ತು.
ಇಂಡಿಕಾ ಕಾರನ್ನು ಚಲಾಯಿಸುತ್ತಿದ್ದ ಜುಂದಾಲ್ ತಪ್ಪಿಸಿಕೊಂಡು ಪರಾರಿಯಾಗಿದ್ದ. 2012ರಲ್ಲಿ ಜುಂದಾಲ್ ಬಂಧನದ ಬಳಿಕ ಆತ ನೀಡಿದ ಮಾಹಿತಿಯಂತೆ ನಾಸಿಕ್ನಲ್ಲಿ 13 ಕೆ.ಜಿ.ಆರ್ಡಿಎಕ್ಸ್, 1,200 ಕ್ಯಾಟ್ರಿಡ್ಜ್, 50 ಹ್ಯಾಂಡ್ ಗ್ರೆನೇಡ್ಗಳು, 22 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications