ಹೆಸರಾಂತ ಲೇಖಕ ಚೇತನ್ ಭಗತ್ ತಪ್ಪಿಗೆ ಕ್ಷಮೆ ಕೇಳಿದರೂ ಚರ್ಚೆ ನಿಂತಿಲ್ಲ
ಲೇಖಕ-ಅಂಕಣಕಾರ ಚೇತನ್ ಭಗತ್ ಶನಿವಾರ ವಿವಾದವೊಂದರಲ್ಲಿ ಕಾಣಿಸಿಕೊಂಡು, ಮಹಿಳೆಯೊಂದಿಗೆ ನಡೆಸಿದ್ದ ವರ್ಷಗಳ ಹಿಂದಿನ ವಾಟ್ಸ್ ಆಪ್ ಸಂಭಾಷಣೆ ಚರ್ಚೆಗೆ ಕಾರಣವಾಯಿತು. ಕೆಲ ವರ್ಷಗಳ ಹಿಂದೆ ನಾನಾ ಪಾಟೇಕರ್ ರಿಂದ ತನಶ್ರೀ ದತ್ತಾಗೆ ಸಿನಿಮಾ ಸೆಟ್ ನಲ್ಲಿ ಲೈಂಗಿಕ ಶೋಷಣೆ ಆಗಿತ್ತು ಎಂಬ ವಿವಾದ ಮತ್ತೆ ತಲೆ ಎತ್ತಿರುವ ಹಿನ್ನೆಲೆಯಲ್ಲಿ ಚೇತನ್ ಭಗತ್ ವಿವಾದವೂ ಕಾಣಿಸಿಕೊಂಡಿದೆ.
ಆಸಕ್ತಿಕರ ವಿಷಯ ಏನೆಂದರೆ, ತನುಶ್ರೀ ದತ್ತಾ ಮಾಡಿದ ಆರೋಪದ ಬಗ್ಗೆ ಕೇಳಿಸಿಕೊಳ್ಳಬೇಕು ಎಂದು ಚೇತನ್ ಭಗತ್ ಹೇಳಿದ್ದರು. ಮಹಿಳೆಯೊಬ್ಬರು ಆ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಚೇತನ್ ಭಗತ್ ಮಾಡಿದ್ದಾರೆ ಎನ್ನಲಾದ ವಾಟ್ಸ್ ಆಪ್ ಮೆಸೇಜ್ ಪೋಸ್ಟ್ ಮಾಡಿದ್ದರು.
ಅವುಗಳನ್ನು ಕಳಿಸಿದ್ದು ನಾನೇ. ಅದಕ್ಕಾಗಿ ನನ್ನ ಪತ್ನಿಯ ಬಳಿ ಕ್ಷಮೆ ಕೇಳುತ್ತೇನೆ ಎಂದು ಚೇತನ್ ಭಗತ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದಿನ ಆ ಸಂಭಾಷಣೆಯ ಸ್ಕ್ರೀನ್ ಶಾಟ್ ನಲ್ಲಿ ಕಂಡುಬರುವಂತೆ ಪ್ರೀತಿಯನ್ನು ಗಳಿಸುವ ಪ್ರಯತ್ನದಂತೆ ಕಂಡುಬರುತ್ತದೆ. ಮತ್ತು ಆ ಮಹಿಳೆ ಪತ್ರಕರ್ತೆಯಾಗಿ, ಚೇತನ್ ಭಗತ್ ಗೆ ಪರಿಚಿತರು ಎಂದು ತಿಳಿಯುತ್ತದೆ.

ಇಲ್ಲಿ ಇನ್ನೊಂದು ವಿಚಾರ ಸ್ಪಷ್ಟಪಡಿಸುತ್ತೀನಿ. ಅಲ್ಲಿ ಯಾವುದೇ ದೈಹಿಕವಾದ ವಿಚಾರವಲ್ಲ. ಆಕ್ಷೇಪಾರ್ಹವಾದ ಚಿತ್ರ ಅಥವಾ ಮಾತುಗಳನ್ನು ವಿನಿಮಯ ಮಾಡಿಕೊಂಡಿಲ್ಲ. ನಂತರ ಆ ವ್ಯಕ್ತಿಯ ಫೋನ್ ನಂಬರ್ ಡಿಲೀಟ್ ಮಾಡಿದ್ದೇನೆ. ಅವರ ಜತೆಗೆ ಯಾವುದೇ ಸಂಪರ್ಕ ಕೂಡ ಇಲ್ಲ ಎಂದು ಚೇತನ್ ಭಗತ್ ಹೇಳಿದ್ದಾರೆ.
ನಾನಾ ಪಾಟೇಕರ್ ಬಗ್ಗೆ ಲೈಂಗಿಕ ಕಿರುಕುಳದ ಬಾಂಬ್ ಸಿಡಿಸಿದ ತನುಶ್ರೀ ದತ್ತಾ.!
ಸಾಮಾಜಿಕ ಮಾಧ್ಯಮದಲ್ಲಿ ಸಂಭಾಷಣೆಯ ಸ್ಕ್ರೀನ್ ಶಾಟ್ ಹರಿದಾಡುತ್ತಿದ್ದು, ಚೇತನ್ ಭಗತ್ ಪರ ಹಾಗೂ ವಿರುದ್ಧವಾದ ಚರ್ಚೆಗಳು ನಡೆಯುತ್ತಿವೆ. ಲೇಖಕ ಚೇತನ್ ಭಗತ್ ಭಾರತದ ಬೆಸ್ಟ್ ಸೆಲ್ಲರ್ ಗಳಲ್ಲಿ ಒಬ್ಬರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications