Shares Price Drop: ಇರಾನ್-ಇಸ್ರೇಲ್ ಯುದ್ಧದಿಂದ ಈ ವೈಮಾನಿಕ ಸಂಸ್ಥೆಗಳ ಶೇರು ಮೌಲ್ಯ ಭಾರೀ ಕುಸಿತ
Iran-Israel War Effect: ಜಾಗತಿಕ ದೃಷ್ಟಿ ಇದೀಗ ಇರಾನ್ ಮತ್ತು ಅಮೆರಿಕ-ಇಸ್ರೇಲ್ ಮಧ್ಯದ ಯುದ್ಧದ ಮೇಲೆ ನೆಟ್ಟಿದೆ. ಯುದ್ಧ ಮುಂದುವರಿದಿದ್ದು, ನಾಗರಿಕ ವಿಮಾನಗಳ ಸಂಚಾರದ ಮೇಲೂ ದುಷ್ಪರಿಣಾಮ ಬೀರಿದೆ. ಒಂದೊಂದೇ ವಲಯಗಳ ಮೇಲೆ ಯುದ್ಧದ ಪ್ರಭಾವ ಬಿದ್ದಿದೆ. ಇದೀಗ ವೈಮಾನಿಕ ಸಂಸ್ಥೆಗಳಾದ ಇಂಡಿಗೋ, ಸ್ಪೈಸ್ಜೆಟ್ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಷೇರುಗಳ ಮೌಲ್ಯ ತೀವ್ರವಾಗಿ ಕುಸಿದಿದೆ.
ವಾಯು ಪ್ರದೇಶಗಳು ನಿರ್ಬಂಧ
ಶನಿವಾರ ಆರಂಭದವಾದ ಯುದ್ಧ ಇಂದು ಸೋಮವಾರವು (ಮಾರ್ಚ್ 02) ಮುಂದುವರಿದಿದೆ. ಇಂಡಿಗೋದ ಮಾತೃ ಸಂಸ್ಥೆಯಾದ ಇಂಟರ್ಗ್ಲೋಬ್ ಏವಿಯೇಷನ್ ಮತ್ತು ಸ್ಪೈಸ್ಜೆಟ್ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು ಹಾಗೂ ಇಕ್ಸಿಗೋ ಮತ್ತು ಈಸಿ ಟ್ರಿಪ್ ಪ್ಲಾನರ್ಸ್ನಂತಹ ಆನ್ಲೈನ್ ಪ್ರಯಾಣ ಸಂಸ್ಥೆಗಳ ಷೇರುಗಳು ಸೋಮವಾರ ಒಂದೇ ದಿನ ಶೇಕಡ 13.5ರಷ್ಟು ಕುಸಿತ ಕಂಡಿವೆ. ಇರಾನ್, ಇಸ್ರೇಲ್ ಸೇರಿ ಮಧ್ಯಪ್ರಾಚ್ಯ ದೇಶಗಳ ವಾಯು ಪ್ರದೇಶ ನಿರ್ಬಂಧಿಸಲಾಗಿದೆ. ಯಾವುದೇ ನಾಗರಿಕ ವಿಮಾನ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಎಂಟು ದೇಶಗಳ ವಾಯಯಾನ ಸ್ಥಗಿತ
ದೇಶಿಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯ ದೊಡ್ಡ ವೈಮಾನಿಕ ಸಂಸ್ಥೆಯಾಗಿರುವ ಇಂಡಿಗೋ, ಮಧ್ಯಪ್ರಾಚ್ಯಕ್ಕೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ. ಏರ್ ಇಂಡಿಯಾ ಶನಿವಾರ ರಾತ್ರಿಯೇ ವಾಯುಯಾನ ಸ್ಥಗಿತಗೊಳಿಸಿ ಪ್ರಯಾಣಿಕರಿಗೆ ಧೈರ್ಯ ತುಂಬಿದೆ. ಹೆಚ್ಚು ಪ್ರಯಾಣಿಕರು ಓಡಾಡುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕೇಂದ್ರವಾದ ದುಬೈ, ಯುನೈಟೆಡ್ ಅರಬ್ ಎಮಿರೇಟ್ಸ್ನ ಅಬುಧಾಬಿ ಮತ್ತು ಕತಾರ್ನ ದೋಹಾದಂತಹ ಪ್ರಮುಖ ಸಾರಿಗೆ ಕೇಂದ್ರಗಳು ಯುದ್ಧ ಭೀತಿಗೆ ಬಂದ್ ಆಗಿವೆ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಯುದ್ಧಗಳು ದಾಳಿಗಳ ನಂತರ ಹಲವು ದೇಶಗಳು, ನಗರಗಳು ವಾಯು ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ. ಕನ್ನಡಿಗರು ದುಬೈ ಸೇರಿ ಬೇರೆ ಬೇರೆ ರಾಷ್ಟ್ರಗಳ ಏರ್ಪೋರ್ಟ್ನಲ್ಲಿ ಸಿಲುಕಿದ್ದಾರೆ. ಅವರನ್ನು ಕರೆತರುವ ಪ್ರಯತ್ನ ನಡೆಯುತ್ತಿದೆ.
ಯುದ್ಧ ಶುರುವಾಗುತ್ತಿದ್ದಂತೆ ಇರಾನ್, ಇಸ್ರೇಲ್, ಇರಾಕ್, ಜೋರ್ಡಾನ್, ಕತಾರ್, ಬಹ್ರೇನ್, ಕುವೈತ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಸೇರಿದಂತೆ ಕನಿಷ್ಠ ಎಂಟು ದೇಶಗಳ ವಾಯುಯಾನವು ಸ್ಥಗಿತಗೊಂಡಿದೆ. ಈ ಬಗ್ಗೆ ಆಯಾ ವೈಮಾನಿಕ ಸಂಸ್ಥೆಗಳು ಅಧಿಕೃತ ಮಾಹಿತಿ ಘೋಷಿಸಿವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications