ಶ್ರೀ ರವಿಶಂಕರ್ ಭೇಟಿಯಿಂದ ಬಗೆಹರಿಯುತ್ತಾ ಅಯೋಧ್ಯಾ ವಿವಾದ?
ಅಯೋಧ್ಯೆ, ನವೆಂಬರ್ 15: ಅಯೋಧ್ಯೆ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಲು ಅಧ್ಯಾತ್ಮ ಗುರು, ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ನ.16 ರಂದು ಅಯೋಧ್ಯೆಗೆ ತೆರಳಲಿದ್ದಾರೆ.
ಇಂದು(ನ.15) ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ಅವರು, 'ಇದೊಂದು ಸೌಜನ್ಯದ ಭೇಟಿ' ಎಂದಿದ್ದಾರೆ.(ಚಿತ್ರಕೃಪೆ: ಟ್ವಿಟ್ಟರ್)

ಇದೇ ಡಿಸೆಂಬರ್ 5 ರಂದು ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ಅಂತಿಮ ವಿಚಾರಣೆ ನಡೆಯಲಿದೆ. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ನಂತರ ರಾಮಜನ್ಮಭೂಮಿ ವಿಚಾರ ಮತ್ತಷ್ಟು ಸುದ್ದಿಯಾಗುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ 137 ಕೋಟಿ ರೂ. ಖರ್ಚು ಮಾಡಿ ಅಡಿಗಲ್ಲು ಹಾಕಲಾಗಿದೆ.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಅಧ್ಯಕ್ಷ ವಾಸಿಮ್ ರಿಜ್ವಿ ಅವರನ್ನು ಈಗಾಗಲೇ ಶ್ರೀ ರವಿಶಂಕರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
CM @myogiadityanath receives Gurudev @SriSri ahead of #Ayodhya visit pic.twitter.com/Be0PPCusXH
— Swamiji (@AOLSwamiji) November 15, 2017
ರಾಮ ಮಂದಿರ ನಿರ್ಮಾಣದ ಕುರಿತು ಆಸ್ಥೆ ವಹಿಸುತ್ತಿರುವ ಶ್ರೀ ರವಿಶಂಕರ್ ಗುರೂಜಿ ಅವರನ್ನು ಕಾಂಗ್ರೆಸ್ 'ಸರ್ಕಾರದ ಏಜೆಂಟ್' ಎಂದು ಕರೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ರವಿಶಂಕರ್ ಗುರೂಜಿ, ನಾನು ಯಾರ ಏಜೆಂಟ್ ಕೂಡ ಅಲ್ಲ. ಯಾವುದೇ ಪಕ್ಷದ ಕುರಿತೂ ನನಗೆ ಒಲವಾಗಲೀ, ವಿರೋಧವಾಗಲೀ ಇಲ್ಲ. ಹಲವು ದಶಕಗಳಿಂದ ಸಮಸ್ಯೆಯಾಗಿ ನಿಂತಿರು ಈ ವಿವಾದವನ್ನು ಬಗೆಹರಿಸುವ ಸಣ್ಣ ಪ್ರಯತ್ನ ಇದು ಅಷ್ಟೇ. ಇದರಿಂದ ನನಗ್ಯಾವ ಲಾಭವೂ ಇಲ್ಲ" ಎಂದಿದ್ದಾರೆ.
ಇದು ಮೊದಲ ಸಲವೇನಲ್ಲ. ರವಿಶಂಕರ್ ಗುರೂಜಿಯವರು ಅಯೋಧ್ಯಾ ವಿವಾದವನ್ನು ಬಗೆಹರಿಸುವುದಕ್ಕಾಗಿ 2001 ರಲ್ಲೇ ಪ್ರಯತ್ನಿಸಿ ವಿಫಲರಾಗಿದ್ದರು. ಇದೀಗ ನ.16 ರಂದು ಅಯೋಧ್ಯಗೆ ತೆರಳಿ ಎಲ್ಲಾ ಪ್ರಮುಖರನ್ನೂ ಮಾತನಾಡಿಸಿ, ವಿವಾದ ಬಗೆಹರಿಸುವ ಯತ್ನದಲ್ಲಿ ಗುರೂಜಿ ಇದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications