1859ರಿಂದಲೂ ಬಗೆಹರಿಯದ ರಾಮಜನ್ಮ ಭೂಮಿ ವಿವಾದ
ಅಯೋಧ್ಯಾ ರಾಮಮಂದಿರ ವಿವಾದಕ್ಕೆ 158 ವರ್ಷಗಳ ಇತಿಹಾಸವಿದೆ. ಹಲವು ಬಾರಿ ರಾಜಿ-ಸಂಧಾನದ ಮೂಲಕ ವಿವಾದ ಬಗೆಹರಿಸಲು ಮಾಡಿದ ಪ್ರಯತ್ನಗಳು ವಿಫಲವಾಗಿವೆ. ಅದರ ಮಾಹಿತಿ ಇಲ್ಲಿದೆ.
ನವದೆಹಲಿ, ಮಾರ್ಚ್ 22: ರಾಮಜನ್ಮ ಭೂಮಿ ವಿವಾದವನ್ನು ಕೋರ್ಟ್ ನ ಹೊರಗೆ ಬಗೆಹರಿಸಿಕೊಳ್ಳುವುದಾದರೆ ಬಗೆಹರಿಸಿಕೊಳ್ಳಿ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ಹೇಳಿದೆ. ಅಂದಹಾಗೆ, ಈ ವಿವಾದವನ್ನು ಕೋರ್ಟ್ ನಿಂದ ಹೊರಗೆ ಬಗೆಹರಿಸಿಕೊಳ್ಳುವಂತೆ ಸಲಹೆ ಕೇಳಿಬರುತ್ತಿರುವುದು ಇದೇ ಮೊದಲ ಬಾರಿ ಏನಲ್ಲ.
ಈ ಹಿಂದೆಯೂ ಸಾಕಷ್ಟು ಸಲ ಇಂಥ ಸನ್ನಿವೇಶಗಳು ಎದುರಾಗಿವೆ. ಈ ವಿಚಾರದಲ್ಲಿ ಮೊದಲ ಬಾರಿಗೆ ಸಂಧಾನದ ಮಾತುಕತೆಯ ಪ್ರಯತ್ನ ಆಗಿದ್ದು 1859ರಲ್ಲಿ. ಯಾವಾಗ ಎರಡು ಕೋಮಿನ ಮಧ್ಯೆ ಸಂಘರ್ಷಗಳು ಕಾಣಿಸಿಕೊಂಡವೋ ಆಗ ಬ್ರಿಟಿಷರ ಮೊದಲ ಬಾರಿಗೆ ಸಂಧಾನ ನಡೆಸಲು ಮುಂದಾದರು.[ರಾಮಮಂದಿರ ನಿರ್ಮಾಣ: ಸಿಎಂ ಯೋಗಿ ಕೈಲಿದೆ 'ಪವರ್' ಅಸ್ತ್ರ]
1859ರಿಂದ ಇಲ್ಲಿವರೆಗೆ ಹಲವಾರು ಸಲ ರಾಜಿ-ಸಂಧಾನದ ಪ್ರಯತ್ನಗಳು ನಡೆದಿವೆ. ನೂರೈವತ್ತು ವರ್ಷಗಳೇ ಕಳೆದುಹೋದ ವಿವಾದವೊಂದು ಶೀಘ್ರವೇ ಬಗೆಹರಿಯಲಿ ಎಂಬುದೇ ಇಡೀ ದೇಶವಷ್ಟೇ ಅಲ್ಲ, ಜಗತ್ತಿನ ನಾನಾ ಭಾಗದಲ್ಲಿರುವ ಜನರ ಆಶೀಸ್ಸು. ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಇದೀಗ ಸುಪ್ರೀಂ ಕೋರ್ಟೇ ಹೇಳಿದೆ. ರಾಮ ಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿದ ಪ್ರಮುಖವಾದ ಬೆಳವಣಿಗೆಗಳ ಹಿನ್ನೋಟ ಇಲ್ಲಿದೆ.

ಬೇಲಿ ನಿರ್ಮಿಸಿದ ಬ್ರಿಟಿಷ್ ಸರಕಾರ
1859ರಲ್ಲಿ ಎರಡೂ ಕೋಮುಗಳ ಮಧ್ಯೆ ಮೊದಲ ಬಾರಿಗೆ ಸಂಘರ್ಷ ಬುಗಿಲೆದ್ದಿತು. ಆಗ ಬ್ರಿಟಿಷ್ ಸರಕಾರ ಮಧ್ಯಪ್ರವೇಶಿಸಿ, ಎರಡೂ ಸ್ಥಳಗಳ ಮಧ್ಯೆ ಬೇಲಿ ನಿರ್ಮಿಸಿತು. ಆ ವ್ಯವಸ್ಥೆ ಹೆಚ್ಚು ಕಾಲ ಇರಲಿಲ್ಲ. ಏಕೆಂದರೆ ಈ ವಿವಾದ ಕೋರ್ಟ್ ಮೆಟ್ಟಿಲೇರಿದ್ದರಿಂದ ರಾಮ ಮಂದಿರ ನಿರ್ಮಾಣದ ವಿವಾದಕ್ಕೆ ಪರಿಹಾರ ಸಿಗಲೇ ಇಲ್ಲ.

ಪ್ರಧಾನಿ ಚಂದ್ರಶೇಖರ್ ಪ್ರಯತ್ನ
ಆ ನಂತರ ಈ ವಿವಾದಕ್ಕೆ ಪೂರ್ಣ ವಿರಾಮ ಹಾಕಬೇಕು ಎಂಬ ಯತ್ನ ನಡೆದಿದ್ದು 1990ರಲ್ಲಿ. ಪ್ರಧಾನಿಯಾಗಿದ್ದ ಚಂದ್ರಶೇಖರ್ ಸಂಧಾನಕ್ಕೆ ಯತ್ನಿಸಿದರು. ಆದರೆ ಮಾತುಕತೆ ವಿಫಲವಾಯಿತು.

ಪಿವಿ ನರಸಿಂಹರಾವ್
ಪಿವಿ ನರಸಿಂಹ ರಾವ್ ಪ್ರಧಾನಿಯಾಗಿದ್ದಾಗ ಬಾಬ್ರಿ ಮಸೀದಿ ಕೆಡವಿದ ನಂತರ ರಾಮ ಜನ್ಮ ಭೂಮಿ ವಿವಾದ ಇತ್ಯರ್ಥಕ್ಕೆ ಆಯೋಗವೊಂದನ್ನು ರಚಿಸಿದ್ದರು. ಅದರ ವರದಿಯನ್ನು ಹದಿನೇಳು ವರ್ಷಗಳ ನಂತರ ನೀಡಿತು.

ಅಟಲ್ ಬಿಹಾರಿ ವಾಜಪೇಯಿ
ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೂ ಅಯೋಧ್ಯಾ ವಿವಾದದ ಸಂಧಾನಕ್ಕೆ ಯತ್ನಿಸಿದರು. ಎರಡೂ ಕಡೆಯ ಮಾತುಕತೆಗಾಗಿ ಆಯೋಧ್ಯಾ ಸೆಲ್ ಎಂದೇ ರಚಿಸಿದರು. ಆದರೆ ಮಾತುಕತೆ ಪ್ರಕ್ರಿಯೆ ಆರಂಭವಾಗಲೇ ಇಲ್ಲ.

ಕೋರ್ಟ್ ನ ಪ್ರಯತ್ನ
ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠವು ತೀರ್ಪು ಕಾಯ್ದಿರಿಸಿದ ನಂತರ, ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಎರಡೂ ಕಡೆಯವರಿಗೆ ಸಲಹೆ ನೀಡಿತು. ಆದರೆ ಇದಕ್ಕೆ ಎರಡೂ ಕಡೆಯವರೂ ಒಪ್ಪಲಿಲ್ಲ.

ಮತ್ತೊಂದು ವಿಫಲ ಯತ್ನ
ಕೋರ್ಟ್ ನ ಹೊರಗೆ ವ್ಯಾಜ್ಯ ಬಗೆಹರಿಸಿಕೊಳ್ಳಲು ಸೂಚಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿವೊಂದನ್ನು ಸಲ್ಲಿಸಲಾಯಿತು. ಆದರೆ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ನ ಲಖನೌ ಪೀಠಕ್ಕೆ ತೀರ್ಪು ನೀಡುವಂತೆ ಆದೇಶ ನೀಡಿತು.

ರಾಜಿ ಸೂತ್ರ ವಿಫಲ
ಹಳೆಯ ದೂರುದಾರ ಮೊಹಮ್ಮದ್ ಹಶೀಂ ಅನ್ಸಾರಿ ಆಕಾರ ಪರಿಷದ್ ಅಧ್ಯಕ್ಷ ಮಹಂತ ಗ್ಯಾನ್ ದಾಸ್ ರನ್ನು ಭೇಟಿಯಾಗಿ ವಿವಾದ ಬಗೆಹರಿಸಲು ಪ್ರಯತ್ನಿಸಿದರು. ಆದರೆ ರಾಜಿ ಸೂತ್ರ ವಿಫಲವಾಯಿತು.

ಮೊದಲ ಸುತ್ತಿನಲ್ಲೇ ವಿಫಲ
ಎರಡೂ ಕಡೆಯವರು ಭೇಟಿಯಾಗಿ ವಿವಾದ ಬಗೆಹರಿಸಿಕೊಳ್ಳಲು 2015ರಲ್ಲಿ ಯತ್ನಿಸಿದರು. ಆದರೆ ಮೊದಲ ಸುತ್ತಿನ ಮಾತುಕತೆಯೇ ವಿಫಲವಾಯಿತು.

ಹಶೀಂ ಅನ್ಸಾರಿ ನಿಧನ
ಮೇ 31, 2016ರಂದು ಮಹಂತ ನರೇಂದ್ರ ಗಿರಿ ಜತೆಗೆ ಹಶೀಂ ಅನ್ಸಾರಿ ಅವರ ಜತೆಗೆ ಭೇಟಿ ನಿಗದಿಯಾಗಿತ್ತು. ಆದರೆ ಅನ್ಸಾರಿ ಅವರು ನಿಧರಾದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications