Ayodhya Ram Mandir Inauguration: 8,000 ಗಣ್ಯರು ಸೇರಿ ತೆಂಡೂಲ್ಕರ್, ಕೊಹ್ಲಿಗೆ ಆಹ್ವಾನ-ಮಾಹಿತಿ ತಿಳಿಯಿರಿ
ಅಯೋಧ್ಯೆ, ಡಿಸೆಂಬರ್, 06: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾಮಗಾರಿಯು ಅಂತಿಮ ಹಂತಕ್ಕೆ ತಲುಪಿದ್ದು, 2024ರ ಜನವರಿ 22ರಂದು ಇದನ್ನು ಉದ್ಘಾಟನೆ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ 8,000 ದೇಶದ ಗಣ್ಯರು ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟ್ ತಂಡದ ದಿಗ್ಗಜ ಮಾಜಿ ಆಟಗಾರ ಹಾಗೂ ಹಾಲಿ ಶ್ರೇಷ್ಠ ಕ್ರಿಕೆಟ್ ಆಟಗಾರನಿಗೆ ಆಹ್ವಾನ ನೀಡಲಾಗಿದೆ.
ಜನವರಿ 22ರಂದು ಇಡೀ ದೇಶವೇ ಕಾಯುವ ರಾಮ್ ಲಾಲಾನ ಮೂರ್ತಿಗೆ ಪ್ರಾಣ ಪ್ರತಿಷ್ಠಾನೆ ನಡೆಯಲಿದೆ. ನಂತರ ಇದನ್ನು ಗರ್ಭಗುಡಿಯಲ್ಲಿ ಇರಿಸಿ ಪೂಜೆ ಮಾಡಲಾಗುತ್ತದೆ. ಇದಕ್ಕಾಗಿ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ರಾಮಲಾಲಾ ಪ್ರಾಣ ಪ್ರತಿಷ್ಠಾಪನೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳು ತಯಾರಾಗಿದ್ದು, 8 ಸಾವಿರ ಗಣ್ಯರಿಗೆ ರವಾನಿಸಲಾಗಿದೆ. ಟೀಂ ಇಂಡಿಯಾದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿಗೂ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿ, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ್ ಲಾಲಾನ ಮೂರ್ತಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರ ಜೊತೆ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ನಟರಾದ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ರತನ್ ಟಾಟಾ ಕೂಡ ಇರಲಿದ್ದಾರೆ ಎಂದು ತಿಳಿದುಬಂದಿದೆ.
ವಿರಾಟ್ ಕೊಹ್ಲಿ ಅವರ ವಿವರ
ಕ್ರಿಕೆಟ್ ಲೋಕದಲ್ಲಿ ವಿರಾಟ್ ಕೊಹ್ಲಿ ಅವರು ಈಗಾಗಲೇ ಅವರು ಅನೇಕ ವಿಶ್ವ ದಾಖಲೆಯನ್ನು ನಿರ್ಮಿಸಿದವರಲ್ಲಿ ಒಬ್ಬರಾಗಿದ್ದಾರೆ. ಈ ಮೂಲಕ ಅವರು ಕೊಹ್ಲಿ ಅದೆಷ್ಟೋ ಜನರಿಗೆ ಸ್ಫೂರ್ತಿ ಆಗಿದ್ದಾರೆ. ಅಲ್ಲದೆ ಅಭಿಮಾನಿಗಳ ಪಾಲಿಗೆ ಕಿಂಗ್ ಕೊಹ್ಲಿ ಅಂತಲೇ ಹೆಸರುವಾಸಿಯಾಗಿದ್ದಾರೆ. ಇನ್ನು ಕಿಂಗ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಜೊತೆ ಸೇರಿಕೊಂಡು ಸೇವಾ ಎಂಬ ಹೆಸರಿನ ಎನ್ಜಿವೊ ನಡೆಸುತ್ತಿದ್ದು, ಈ ಮೂಲಕ ಹಲವರಿಗೆ ಸಹಾಯಾಸ್ತವನ್ನು ಚಾಚುವ ಮೂಲಕ ಗಮನ ಸೆಳೆದಿದ್ದಾರೆ.
ಸಚಿನ್ ದಾಖಲೆ ಮುರಿದ ವಿರಾಟ್
ಇತ್ತೀಚೆಗಷ್ಟೇ ವಾಂಖೆಡೆ ಸ್ಟೇಡಿಯಂನಲ್ಲಿ ತೆಂಡೂಲ್ಕರ್ ಅವರ ಜೀವಮಾನದ ಪ್ರತಿಮೆಯನ್ನು ಉದ್ಘಾಟಿಸಲಾಯಿತು. ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೆಮಿಫೈನಲ್ ಪಂದ್ಯಾವಳಿಯ ಮುನ್ನ ಬ್ಯಾಟರ್ ಪ್ರತಿಮೆಯನ್ನು ಉದ್ಘಾಟಿಸಿದರು. ಹಾಗೆಯೇ ಇತ್ತೀಚೆಗಷ್ಟೇ ಕೊಹ್ಲಿ ಅವರು ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ಸುದೀರ್ಘ ದಾಖಲೆಯನ್ನು ಮುರಿದರು.

ತೆಂಡೂಲ್ಕರ್ಗೆ ನಮಿಸಿದ ವಿರಾಟ್
ವಾಂಖೆಡೆ ಸ್ಟೇಡಿಯಂನಲ್ಲಿ ಕೊಹ್ಲಿ ತಮ್ಮ ವಿಗ್ರಹದ ಮುಂದೆ ದಾಖಲೆಯನ್ನು ಮುರಿದಿದ್ದರಿಂದ ಇದು ಕಾಲ್ಪನಿಕ ಕಥೆಯ ಚಲನಚಿತ್ರದಿಂದ ನೇರವಾಗಿ ಹೊರಬಂದಿತು. ಐತಿಹಾಸಿಕ ಹೆಗ್ಗುರುತನ್ನು ದಾಟಿದ ನಂತರ ಕೊಹ್ಲಿ ತೆಂಡೂಲ್ಕರ್ಗೆ ನಮಿಸಿದರು. ಇನ್ನು ನಂತರ ವಿಶ್ವಕಪ್ ಫೈನಲ್ನಲ್ಲಿ IND vs AUS ಫೈನಲ್ ವೀಕ್ಷಿಸಲು ವಿಐಪಿ ಅತಿಥಿಗಳಲ್ಲಿ ತೆಂಡೂಲ್ಕರ್ ಕೂಡ ಒಬ್ಬರಾಗಿದ್ದರು. ಫಲಿತಾಂಶವು ಭಾರತದ ಪರವಾಗಿ ಹೋಗಲಿಲ್ಲ, ಆದರೆ ಇದೇ ಭಾರತದ ಮಾಜಿ ನಾಯಕ ತಂಡದ ಸದಸ್ಯರಿಗೆ ಸಾಂತ್ವನ ಹೇಳಿದರು.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
RCB: ಒಂದೊಂದು ನಿಮಿಷವೂ ಮುಖ್ಯ; ಐಪಿಎಲ್ ಆರಂಭಕ್ಕೂ ಮುನ್ನ ಆರ್ಸಿಬಿ ಸಹ ಆಟಗಾರರಿಗೆ ಕೊಹ್ಲಿ ಖಡಕ್ ವಾರ್ನ್ -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ











Click it and Unblock the Notifications