ವೇಗ ಪಡೆದುಕೊಂಡ ಅಯೋಧ್ಯಾ ರಾಮಮಂದಿರ ನಿರ್ಮಾಣ ಕಾಮಗಾರಿ: 1,600 ಕೆಲಸಗಾರರು, 24×7 ಕೆಲಸ!
ಅಯೋಧ್ಯೆ, ಜುಲೈ. 10: 2024 ರ ಜನವರಿಯಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಾಗಲಿದೆ ಎಂದು ಈ ಹಿಂದೆ ಹಲವು ಬಾರಿ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಹೇಳಿದ್ದಾರೆ. ಹೀಗಾಗಿಯೇ ದೇಗುಲವನ್ನು ಆದಷ್ಟು ಬೇಗ ಭಕ್ತರಿಗಾಗಿ ತೆರೆಯಲು ದೇವಾಲಯ ಕಾಮಗಾರಿ ಕೆಲಸವನ್ನು ತೀವ್ರಗೊಳಿಸಲಾಗುತ್ತಿದೆ.
ಇತ್ತೀಚಿನ ವಾರಗಳಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರದ ಕಾಮಗಾರಿ ವೇಗವಾಗಿ ಸಾಗುತ್ತಿದೆ. ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯ ಮೇಲ್ವಿಚಾರಣೆಗಾಗಿ ಸರ್ಕಾರವು ಸ್ಥಾಪಿಸಿದ ಟ್ರಸ್ಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ (SRJTK) ಆಡಳಿತವು ದೇವಾಲಯ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರ ಸಂಖ್ಯೆಯನ್ನು 550 ರಿಂದ 1,600 ಕ್ಕೆ ಹೆಚ್ಚಿಸಿದೆ.

ಈ ಹಿಂದೆ 18 ಗಂಟೆಗಳ ಪಾಳಿಯಲ್ಲಿ ನಡೆಯುತ್ತಿದ್ದ ಕೆಲಸ ಈಗ ಹಗಲು-ರಾತ್ರಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿಯಲ್ಲಿ 'ಪ್ರಾಣ ಪ್ರತಿಷ್ಠಾ' (ದೇವತೆಯ ಪ್ರತಿಷ್ಠಾಪನೆಯ ಸಮಾರಂಭ) ವನ್ನು ಮಾಡಲು ಭಗವಾನ್ ರಾಮನ ವಿಗ್ರಹವನ್ನು ಸ್ಥಾಪಿಸುವ ಗರ್ಭಗುಡಿಯ ಸಂಕೀರ್ಣದ ನೆಲ ಮಹಡಿಯಲ್ಲಿ ನೆಲಹಾಸು ಮತ್ತು ವಿದ್ಯುತ್ ಕೆಲಸಗಳು ಮಾತ್ರ ಬಾಕಿ ಉಳಿದಿವೆ.
ದೇವಸ್ಥಾನದ ನೆಲ ಮತ್ತು ಮೊದಲ ಮಹಡಿಗಳೆರಡನ್ನೂ ಜನವರಿ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಯೋಜನಾ ವ್ಯವಸ್ಥಾಪಕ ಜಗದೀಶ್ ಅಫಲೆ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ಉಲ್ಲೇಖಿಸಿದೆ.
"ಸದ್ಯ, ಡಿಸೆಂಬರ್ನೊಳಗೆ ನೆಲಮಹಡಿಯನ್ನು ಪೂರ್ಣಗೊಳಿಸಿ 'ಪ್ರಾಣ ಪ್ರತಿಷ್ಠಾ'ಕ್ಕೆ ಸಿದ್ಧಗೊಳಿಸುವುದು ನಮ್ಮ ಆದ್ಯತೆಯಾಗಿದೆ. ಮೊದಲ ಅಂತಸ್ತಿನ ಕಾಮಗಾರಿಯೂ ಜುಲೈ 1 ರಂದು ಆರಂಭವಾಗಿದ್ದು, ಸ್ಲ್ಯಾಬ್ಗಳು ಮತ್ತು ಪಿಲ್ಲರ್ಗಳು ಸೇರಿದಂತೆ ಅದರ ಪ್ರಮುಖ ರಚನೆಗಳು ಜನವರಿ ವೇಳೆಗೆ ಪೂರ್ಣಗೊಳ್ಳಲಿದ್ದು, ಭಕ್ತರು ದೇಗುಲಕ್ಕೆ ಭೇಟಿ ನೀಡಬಹುದಾಗಿದೆ. ಆದರೆ ಮಾರ್ಚ್ 2024 ರವರೆಗೆ ಮೊದಲ ಮಹಡಿಯ ಕೆಲಸ ಪೂರ್ಣಗೊಳ್ಳುವುದಿಲ್ಲ" ಎಂದು ಹೇಳಿದ್ದಾರೆ.

"ಮೂರು ಅಂತಸ್ತಿನ ಕಟ್ಟಡ ಮತ್ತು 'ಪರ್ಕೋಟಾ' (ಸಂಕೀರ್ಣದ ಹೊರ ಗೋಡೆ) ಪೂರ್ಣಗೊಳಿಸಲು ಸುಮಾರು ಒಂದೂವರೆ ವರ್ಷ ತೆಗೆದುಕೊಳ್ಳುತ್ತದೆ. ಮಳೆಯು ಕೆಲವೊಮ್ಮೆ 'ಪಾರ್ಕೋಟಾ' ಕಾಮಗಾರಿಗೆ ಅಡ್ಡಿಪಡಿಸುತ್ತಿದೆ. ಆದರೆ ಮಳೆ ಬಂದರೂ ಮನೆಯೊಳಗಿನ ಕೆಲಸಗಳು ಚಾಲ್ತಿಯಲ್ಲಿದೆ. 24 ಗಂಟೆಯೂ ನಡೆಯುತ್ತಿರುವುದರಿಂದ ಕಾಮಗಾರಿ ವೇಗ ಪಡೆದುಕೊಂಡಿದೆ. ಅಯೋಧ್ಯೆಯ ಹೊರಗಿನ ಎಂಜಿನಿಯರ್ಗಳು, ಮೇಲ್ವಿಚಾರಣಾ ಸಿಬ್ಬಂದಿ ಮತ್ತು ದಿನಗೂಲಿಗಳು ಸೇರಿದಂತೆ ಸುಮಾರು 1,200 ಕಾರ್ಮಿಕರು ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications