Breaking: 2024ರ ಜನವರಿಯಲ್ಲಿ ಭಕ್ತರಿಗೆ ತೆರೆಯಲಿದೆ ಅಯೋಧ್ಯೆ ರಾಮ ಮಂದಿರ
ನವದೆಹಲಿ, ಅಕ್ಟೋಬರ್ 25: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024ರ ಜನವರಿ ತಿಂಗಳಿನಲ್ಲಿ ಭಕ್ತರಿಗೆ ತೆರೆದಿರುತ್ತದೆ ಎಂದು ದೇಗುಲದ ನಿರ್ಮಾಣದ ಮೇಲ್ವಿಚಾರಣಾ ಟ್ರಸ್ಟ್ನ ಸದಸ್ಯರು ತಿಳಿಸಿದ್ದಾರೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಶೇ.50ರಷ್ಟು ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಒಟ್ಟಾರೆ ಪ್ರಗತಿ ತೃಪ್ತಿಕರವಾಗಿದೆ ಎಂದು ಮಂಗಳವಾರ ಹೇಳಿದ್ದಾರೆ.
ಮಕರ ಸಂಕ್ರಾಂತಿ ಹಬ್ಬದಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024ರ ಜನವರಿಯಲ್ಲಿ ದೇವಾಲಯವನ್ನು ಭಕ್ತರಿಗೆ ತೆರೆಯಲಾಗುವುದು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ. ಮುಂದಿನ ವರ್ಷ ಡಿಸೆಂಬರ್ ವೇಳೆಗೆ ದೇಗುಲದ ನೆಲ ಮಹಡಿ ಸಿದ್ಧಗೊಳ್ಳಲಿದ್ದು, 2024ರ ಜನವರಿ 14ರ ಸುಮಾರಿಗೆ ರಾಮನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

1,800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ:
ಉತ್ತರ ಪ್ರದೇಶದ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ಚಂಪತ್ ರೈ ಹೇಳಿದರು. ಪ್ರಮುಖ ಹಿಂದೂ ಧರ್ಮದರ್ಶಿಗಳ ವಿಗ್ರಹಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ಉಲ್ಲೇಖಿಸಿದರು.
ದೇವಾಲಯದ ನಿರ್ಮಾಣ ಹೇಗಿರಲಿದೆ?:
ರಾಮ ಮಂದಿರ ದೇವಾಲಯದ ನಿರ್ಮಾಣದ ಉಸ್ತುವಾರಿ ಹೊತ್ತ ರಾಮಜನ್ಮಭೂಮಿ ಟ್ರಸ್ಟ್ ಪ್ರಕಾರ ರಾಜಸ್ಥಾನದ ಮಕ್ರಾನಾ ಬೆಟ್ಟಗಳಿಂದ ಬಿಳಿ ಅಮೃತಶಿಲೆಗಳನ್ನು ಗರ್ಭಗುಡಿಯಲ್ಲಿ ಬಳಸಲಾಗುವುದು ಎಂದು ಹೇಳಿದೆ. ದೇವಾಲಯದ ಯೋಜನೆಗೆ 8 ರಿಂದ 9 ಲಕ್ಷ ಕ್ಯೂಬಿಕ್ ಅಡಿ ಕೆತ್ತಿದ ಮರಳುಗಲ್ಲು, 6.37 ಲಕ್ಷ ಕ್ಯೂಬಿಕ್ ಅಡಿ ಕೆತ್ತಿದ ಗ್ರಾನೈಟ್, 4.70 ಲಕ್ಷ ಕ್ಯೂಬಿಕ್ ಅಡಿ ಕೆತ್ತಿದ ಗುಲಾಬಿ ಮರಳುಗಲ್ಲು ಮತ್ತು 13,300 ಕ್ಯೂಬಿಕ್ ಅಡಿ ಮಕ್ರಾನ ಬಿಳಿ ಕೆತ್ತಿದ ಅಮೃತಶಿಲೆಯನ್ನು ದೇವಾಲಯದ ಯೋಜನೆಗೆ ಬಳಸಲಾಗುವುದು ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications