ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಯಾ ಮುಸ್ಲಿಮರ ಬೆಂಬಲ

By Mahesh
|
Google Oneindia Kannada News

ನವದೆಹಲಿ, ಡಿಸೆಂಬರ್ 05: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ನಡೆದು ಬುಧವಾರಕ್ಕೆ 25 ವರ್ಷವಾಗುತ್ತದೆ. ಇದರ ಮುನ್ನಾ ದಿನವೇ ಇಂದು ವಿವಾದದ ಅಂತಿಮ ವಿಚಾರಣೆ ನಡೆಯಿತು. ಅಗತ್ಯ ದಾಖಲೆಗಳ ತರ್ಜುಮೆ ಕೆಲಸಕ್ಕೆ ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಸುನ್ನಿ ಮುಸ್ಲಿಂ ಪಂಗಡದವರು ಕೋರಿದರು. ಫೆಬ್ರವರಿ 08, 2018ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

25 ವರ್ಷಗಳ ನಂತರ ಬಾಬ್ರಿ ಮಸೀದಿ ಕೆಡವಿದ ಕೇಸ್ ರೀ ಕ್ಯಾಪ್25 ವರ್ಷಗಳ ನಂತರ ಬಾಬ್ರಿ ಮಸೀದಿ ಕೆಡವಿದ ಕೇಸ್ ರೀ ಕ್ಯಾಪ್

ಈ ನಡುವೆ ಶಿಯಾ ಮುಸ್ಲಿಂ ಸಂಘಟನೆಯೊಂದು ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಿಸಲು ನಮ್ಮ ಅಭ್ಯಂತರವೇನು ಇಲ್ಲ ಎಂದು ಕೋರ್ಟಿಗೆ ಹೇಳಿರುವುದು ಎಲ್ಲರ ಹುಬ್ಬೇರಿಸಿದೆ.

Ayodhya SC verdict updates: Muslim group favours temple on disputed land

ಮುಖ್ಯ ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಅಬ್ದುಲ್ ನಜೀರ್ ಅವರಿರುವ ತ್ರಿಸದಸ್ಯ ಪೀಠ ಆಯೋಧ್ಯಾ ವಿವಾದಿತ ತಾಣದ ವಿಚಾರಣೆಯನ್ನು ಆಲಿಸಿದರು.

ರಾಮಮಂದಿರ ನಿರ್ಮಾಣ: ಸಿಎಂ ಯೋಗಿ ಕೈಲಿದೆ 'ಪವರ್' ಅಸ್ತ್ರರಾಮಮಂದಿರ ನಿರ್ಮಾಣ: ಸಿಎಂ ಯೋಗಿ ಕೈಲಿದೆ 'ಪವರ್' ಅಸ್ತ್ರ

2010ರಲ್ಲಿ ವಿವಾದದ ಸಂಬಂಧ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ 13 ಅರ್ಜಿಗಳ ವಿಚಾರಣೆಯನ್ನು ಕೋರ್ಟ್ ನಡೆಸುತ್ತಿದೆ.

1859ರಿಂದಲೂ ಬಗೆಹರಿಯದ ರಾಮಜನ್ಮ ಭೂಮಿ ವಿವಾದ1859ರಿಂದಲೂ ಬಗೆಹರಿಯದ ರಾಮಜನ್ಮ ಭೂಮಿ ವಿವಾದ

ಉತ್ತರಪ್ರದೇಶದ ಶಿಯಾ ಕೇಂದ್ರ ವಕ್ಫ್ ಮಂಡಳಿಯ ಸದಸ್ಯರು, ವಿವಾದಕ್ಕೆ ಅಂತ್ಯ ಹಾಡಲು ಯತ್ನಿಸಿದ್ದು, ಈ ಕುರಿತಂತೆ ಕೋರ್ಟಿನ ಮುಂದೆ ಅರ್ಜಿ ಸಲ್ಲಿಸಿದ್ದಾರೆ. ರಾಮಜನ್ಮಭೂಮಿಯ ವಿವಾದಿತ ಸ್ಥಳದಿಂದ ಅನತಿ ದೂರದಲ್ಲಿ ಮಸೀದಿ ನಿರ್ಮಿಸಲು ಸಿದ್ಧ. ಆ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಅಭ್ಯಂತರವೇನು ಇಲ್ಲ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

Ayodhya SC verdict updates: Muslim group favours temple on disputed land

2010ರಲ್ಲಿ ಅಲಹಾಬಾದ್ ಹೈಕೋರ್ಟ್ ವಿವಾದಿತ ಬಾಬ್ರಿ ಮಸೀದಿ ಜಾಗ(2.77 ಎಕರೆ)ವನ್ನು ಹಿಂದೂ ಮಹಾಸಭಾ, ನಿರ್ಮೋಹಿ ಅಖಾಡ ಮತ್ತು ಸುನ್ನಿ ಸಮಿತಿಗೆ 2:1 ಅನುಪಾತದಂತೆ ಹಂಚಿಕೆ ಮಾಡಿತ್ತು.

ರಾಮಜನ್ಮ ಭೂಮಿ ವಿವಾದವನ್ನು ಕೋರ್ಟ್ ನ ಹೊರಗೆ ಬಗೆಹರಿಸಿಕೊಳ್ಳುವುದಾದರೆ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂಕೋರ್ಟ್ ಈ ಹಿಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಸುನ್ನಿ ಮುಸ್ಲಿಮರ ಪಂಗಡದ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು 19 ಸಾವಿರಕ್ಕೂ ಅಧಿಕ ಪುಟಗಳ ದಾಖಲೆಗಳನ್ನು ಕೋರ್ಟಿಗೆ ಸಲ್ಲಿಸಲು ಕಾಲಾವಕಾಶ ಕೋರಿದರು. ಮುಂದಿನ ವಿಚಾರಣೆಯನ್ನು ಲೋಕಸಭೆ ಚುನಾವಣೆ 2019ಗೂ ಮುನ್ನ ನಡೆಸಬೇಕು ಎಂದು ಕೋರಿದರು.

English summary
Ayodhya SC verdict updates: Shia Muslim group favours temple on disputed land. A Three Judge Bench of CJI Dipak Misra and Justices Ashok Bhushan and Abdul Nazeer defer hearing the #Ayodhya Case to 8 Feb 2018 after Sunni board seeks 'reasonable' time to file documents.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X