ಅಜಂ ಖಾನ್ ಮುಸ್ಲಿಂ ದೇಶದಲ್ಲಿದ್ದಿದ್ದರೆ ಯಾವತ್ತೋ ತಲೆ ಉರುಳುತ್ತಿತ್ತು: ಸ್ವಾಮಿ
ಭಾರತದಲ್ಲಿರುವುದರಿಂದ ಅಜಂ ಖಾನ್, ಪ್ರಜಾಪ್ರಭುತ್ವ ನೀಡಿದ ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದಾರೆ, ಬೇರೆ ಯಾವುದೇ ಮುಸ್ಲಿಂ ದೇಶದಲ್ಲಿದ್ದುಕೊಂಡು ಸೇನೆಯ ವಿರುದ್ಧ ಇಂಥ ಹೇಳಿಕೆ ನೀಡಿದ್ದರೆ ಅಲ್ಲಿ ಎಂದೋ ಅವರ ತಲೆಯನ್ನು ಕಡಿಯಲಾಗುತ್ತಿತ್ತು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಟಾಂಕ್ ನೀಡಿದ್ದಾರೆ.
ಜೂನ್ 28 ರಂದು ಮಾಧ್ಯಮದ ಜೊತೆ ಮಾತನಾಡುತ್ತಿದ್ದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್, "ಕಾಶ್ಮೀರ, ಅಸ್ಸಾಂ, ಜಾರ್ಖಂಡ್ ಗಳಲ್ಲಿ ಸೈನಿಕರ ಮೇಲೆ ಮಹಿಳೆಯರು ದಾಳಿ ನಡೆಸುತ್ತಿದ್ದಾರೆ. ನಿಜಹೇಳಬೇಕೆಂದರೆ ಸೇನೆ ಮಹಿಳೆಯರ ಮೇಲೆ ನಡೆಸಿದ ಅತ್ಯಾಚಾರಕ್ಕೆ ಮಹಿಳೆಯರು ಅನಿವಾರ್ಯವಾಗಿ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ. ಇದು ಹಿಂದೂಸ್ಥಾನ ತಲೆ ತಗ್ಗಿಸುವ ವಿಚಾರ," ಎಂದಿದ್ದರು. ಈ ಕುರಿತು ದೇಶದಾದ್ಯಂತ ಚರ್ಚೆ ನಡೆದು, ಅಜಂ ಖಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸುಬ್ರಮಣಿಯನ್ ಸ್ವಾಮಿ, ದೇಶವನ್ನು ಕಾಪಾಡುತ್ತಿರುವ ಸೈನಿಕರ ವಿರುದ್ಧ ಇಂಥ ಹೇಳಿಕೆ ನೀಡುತ್ತಿರುವ ಅಜಂ ಖಾನ್, ಭಾರತದಲ್ಲಿರುವುದರಿಂದ ಬಚಾವ್ ಆಗಿದ್ದಾರೆ. ಬೇರೆ ಮುಸ್ಲಿಂ ದೇಶದಲ್ಲಿದ್ದಿದ್ದರೆ ಇಷ್ಟರಲ್ಲೇ ಅವರ ತಲೆಕಡಿಯಲಾಗುತ್ತಿತ್ತು ಎಂದು ಪ್ರತಿಕ್ರಿಯಿಸಿದ್ದು, ಈ ಹೇಳಿಕೆಯೂ ಮತ್ತೊಂದು ವಿವಾದ ಸೃಷ್ಟಿಸುವ ಸಾಧ್ಯತೆ ಹೆಚ್ಚಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications