ನೋಟು ನಿಷೇಧ ಕ್ರಮ: ಮೋದಿಯನ್ನು ಟೀಕಿಸಿದ ಬಾಬಾ ರಾಮ್ದೇವ್
ನವದೆಹಲಿ, ಮೇ 3: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಪ್ರಮುಖರಲ್ಲಿ ಒಬ್ಬರಾಗಿರುವ ಬಾಬಾ ರಾಮ್ದೇವ್, ಮೋದಿ ಅವರು ತೆಗೆದುಕೊಂಡ ಒಂದು ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ದಿ ಕ್ವಿಂಟ್' ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮೋದಿ ಅವರ ಅಪನಗದೀಕರಣ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ. ಪ್ರಧಾನಿ ಅವರನ್ನು ಭ್ರಷ್ಟ ಬ್ಯಾಂಕರ್ಗಳು ತಪ್ಪು ದಾರಿಗೆ ಎಳೆದಿದ್ದರು. ಆರ್ಥಿಕತೆಯಲ್ಲಿ ಅಪನಗದೀಕರಣವು 3-5 ಲಕ್ಷ ಕೋಟಿ ರೂಪಾಯಿ ಹಗರಣವನ್ನು ಹೊರಗೆಳೆಯುತ್ತದೆ ಎಂದು ರಾಮ್ದೇವ್ ಆರೋಪಿಸಿದ್ದಾರೆ.
ಅಪನಗದೀಕರಣದಿಂದಾಗಿ ಬ್ಯಾಂಕರ್ಗಳು ಕೋಟ್ಯಂತರ ರೂಪಾಯಿ ಹಣ ಮಾಡಿದರು. ಅವರಲ್ಲಿನ ಭ್ರಷ್ಟಾಚಾರದ ಮಟ್ಟವನ್ನು ಮೋದಿ ಅವರೂ ಅಂದಾಜಿಸಲು ಸಾಧ್ಯವಿಲ್ಲ. 3-5 ಲಕ್ಷ ಕೋಟಿ ರೂಪಾಯಿಯಷ್ಟು ಹಗರಣ ಹೊರಬೀಳುತ್ತದೆ ಎಂದಿದ್ದಾರೆ.

ಭ್ರಷ್ಟ ಬ್ಯಾಂಕರ್ಗಳಿಂದ ಮೋದಿ ಇದರಲ್ಲಿ ಸಿಕ್ಕಿಬಿದ್ದರು. ನಗದು ಪೂರೈಕೆ ಸಮಸ್ಯೆಯಾಗಿರಲಿಲ್ಲ. ಆದರೆ ಎಲ್ಲ ನಗದೂ ಭ್ರಷ್ಟರ ಬಳಿಗೇ ಹೋಗುತ್ತಿದೆ. ನೋಟು ನಿಷೇಧವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಳವಡಿಸಬಹುದಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆರ್ಬಿಐ ಅಧಿಕಾರಿಗಳನ್ನೂ ಪರಿಶೀಲನೆಗೆ ಒಳಪಡಿಸಲಾಗಿದೆ. ಇದು ತುಂಬಾ ದುರದೃಷ್ಟಕರ. ಇದು ನಮ್ಮ ವ್ಯವಸ್ಥೆಯ ಬಗ್ಗೆ ಗಂಭೀರ ಅನುಮಾನ ಮೂಡಿಸುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications