ನೋಟು ನಿಷೇಧ ಕ್ರಮ: ಮೋದಿಯನ್ನು ಟೀಕಿಸಿದ ಬಾಬಾ ರಾಮ್ದೇವ್
ನವದೆಹಲಿ, ಮೇ 3: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಪ್ರಮುಖರಲ್ಲಿ ಒಬ್ಬರಾಗಿರುವ ಬಾಬಾ ರಾಮ್ದೇವ್, ಮೋದಿ ಅವರು ತೆಗೆದುಕೊಂಡ ಒಂದು ನಿರ್ಧಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ದಿ ಕ್ವಿಂಟ್' ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮೋದಿ ಅವರ ಅಪನಗದೀಕರಣ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ. ಪ್ರಧಾನಿ ಅವರನ್ನು ಭ್ರಷ್ಟ ಬ್ಯಾಂಕರ್ಗಳು ತಪ್ಪು ದಾರಿಗೆ ಎಳೆದಿದ್ದರು. ಆರ್ಥಿಕತೆಯಲ್ಲಿ ಅಪನಗದೀಕರಣವು 3-5 ಲಕ್ಷ ಕೋಟಿ ರೂಪಾಯಿ ಹಗರಣವನ್ನು ಹೊರಗೆಳೆಯುತ್ತದೆ ಎಂದು ರಾಮ್ದೇವ್ ಆರೋಪಿಸಿದ್ದಾರೆ.
ಅಪನಗದೀಕರಣದಿಂದಾಗಿ ಬ್ಯಾಂಕರ್ಗಳು ಕೋಟ್ಯಂತರ ರೂಪಾಯಿ ಹಣ ಮಾಡಿದರು. ಅವರಲ್ಲಿನ ಭ್ರಷ್ಟಾಚಾರದ ಮಟ್ಟವನ್ನು ಮೋದಿ ಅವರೂ ಅಂದಾಜಿಸಲು ಸಾಧ್ಯವಿಲ್ಲ. 3-5 ಲಕ್ಷ ಕೋಟಿ ರೂಪಾಯಿಯಷ್ಟು ಹಗರಣ ಹೊರಬೀಳುತ್ತದೆ ಎಂದಿದ್ದಾರೆ.

ಭ್ರಷ್ಟ ಬ್ಯಾಂಕರ್ಗಳಿಂದ ಮೋದಿ ಇದರಲ್ಲಿ ಸಿಕ್ಕಿಬಿದ್ದರು. ನಗದು ಪೂರೈಕೆ ಸಮಸ್ಯೆಯಾಗಿರಲಿಲ್ಲ. ಆದರೆ ಎಲ್ಲ ನಗದೂ ಭ್ರಷ್ಟರ ಬಳಿಗೇ ಹೋಗುತ್ತಿದೆ. ನೋಟು ನಿಷೇಧವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಳವಡಿಸಬಹುದಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಆರ್ಬಿಐ ಅಧಿಕಾರಿಗಳನ್ನೂ ಪರಿಶೀಲನೆಗೆ ಒಳಪಡಿಸಲಾಗಿದೆ. ಇದು ತುಂಬಾ ದುರದೃಷ್ಟಕರ. ಇದು ನಮ್ಮ ವ್ಯವಸ್ಥೆಯ ಬಗ್ಗೆ ಗಂಭೀರ ಅನುಮಾನ ಮೂಡಿಸುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications