ಬಾಬ್ರಿ ಮಸೀದಿ ಕೇಸ್: ಅಡ್ವಾಣಿ ಮತ್ತಿತರರಿಗೆ ಭಾರೀ ಹಿನ್ನಡೆ
ಲಕ್ನೋ, ಮೇ 30: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ ಕೇಂದ್ರ ಸಚಿವೆ ಉಮಾ ಭಾರತಿ ಸೇರಿದಂತೆ 12 ಜನ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಸರಿಯಾಗಿ 25 ವರ್ಷ ಕಳೆದ ನಂತರ 12 ಜನರ ವಿರುದ್ಧ ಕ್ರಿಮನಲ್ ಸಂಚಿನ ಆರೋಪವನ್ನು ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯ ದಾಖಲು ಮಾಡಿಕೊಂಡಿದೆ.
ಆರೋಪಿಗಳು ತಮ್ಮ ವಿರುದ್ಧ ಆರೋಪ ಪಟ್ಟಿ ದಾಖಲಿಸದಂತೆ ವಾದಿಸಿದ್ದರು. ಬಾಬ್ರಿ ಮಸೀದಿ ಧ್ವಂಸದಲ್ಲಿ ನಮ್ಮದೇನೂ ಪಾತ್ರವಿಲ್ಲ. ಮಸೀದಿ ಧ್ವಂಸವಾಗುವಾಗ ನಾವು ಅದನ್ನು ತಡೆಯಲು ಯತ್ನಿಸಿದೆವು ಎಂದು ವಾದಿಸಿದ್ದರು. ಆದರೆ ಇದನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ ಯಾದವ್ ಕ್ರಿಮಿನಲ್ ಸಂಚಿನ ಪ್ರಕರಣ ದಾಖಲಿಸಿದ್ದಾರೆ.[ಬಾಬ್ರಿ ಮಸೀದಿ ಧ್ವಂಸ: ಅಡ್ವಾಣಿ ಸೇರಿ 12 ಜನರಿಗೆ ಜಾಮೀನು]
ಪ್ರತಿದಿನ ವಿಚಾರಣೆ ನಡೆಸಿ ಪ್ರಕರಣವನ್ನು ಎರಡು ವರ್ಷಗಳ ಮೊದಲು ಕೊನೆಗೊಳಿಸಲು ಸುಪ್ರೀಂ ಕೋರ್ಟ್ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ ಈ ನಾಯಕರ ವಿರುದ್ಧ ಇದೀಗ ವಿಚಾರಣೆ ಆರಂಭವಾಗಲಿದೆ.

ಯೋಗಿಯಿಂದ ಭೀಷ್ಮನಿಗೆ ಸ್ವಾಗತ
ಕೋರ್ಟಿಗೆ ಹಾಜರಾಗುವ ಮೊದಲು ಅಡ್ವಾಣಿ ಲಕ್ನೋದ ವಿವಿಐಪಿ ಅತಿಥಿ ಗೃಹಕ್ಕೆ ಭೇಟಿ ನೀಡಿದರು. ಅಲ್ಲಿ ಅವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೂಗುಚ್ಚ ನೀಡಿ ಸ್ವಾಗತ ಕೋರಿದರು.

ಸಂಚು ನಡೆದೇ ಇಲ್ಲ
ವರದಿಗಾರರ ಜತೆ ಮಾತನಾಡಿದ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ, "ನನ್ನನ್ನು ನಾನು ಆರೋಪಿ ಎಂದು ಪರಿಗಣಿಸಲು ಸಿದ್ಧವಿಲ್ಲ. ಇದರಲ್ಲಿ ಸಂಚು ಏನಿಲ್ಲ. ಅದೊಂದು ಬಹಿರಂಗ ಆಂದೋಲನ, ತುರ್ತು ಸಂದರ್ಭದಲ್ಲಿ ಅದರಷ್ಟಕ್ಕೆ ಅದು ನಡೆದು ಹೋಯಿತು," ಎಂದು ಹೇಳಿದ್ದಾರೆ.[25 ವರ್ಷಗಳ ನಂತರ ಬಾಬ್ರಿ ಮಸೀದಿ ಕೆಡವಿದ ಕೇಸ್ ರೀ ಕ್ಯಾಪ್]

ನಾಯಕರನ್ನು ಸಮರ್ಥಿಸಿಕೊಂಡ ಬಿಜೆಪಿ
ಪಕ್ಷದ ನಾಯಕರನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. "ನಮ್ಮ ನಾಯಕರು ಮುಗ್ಧರಾಗಿದ್ದಾರೆ. ಈ ಪ್ರಕರಣದಿಂದ ಅವರು ಹೊರ ಬಂದೇ ಬರುತ್ತಾರೆ," ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ತೀರ್ಪು ನೀಡಲು ಗಡುವು
ಸಂಚಿನ ಆರೋಪ ಹೊರಿಸಲು ಸುಪ್ರೀಂ ಕೋರ್ಟ್ ವಿಶೇಷ ನ್ಯಾಯಾಲಯಕ್ಕೆ 1 ತಿಂಗಳ ಕಾಲಾವಕಾಶ ನೀಡಿತ್ತು. ಇನ್ನು ಎರಡು ವರ್ಷದೊಳಗೆ ತೀರ್ಪು ನೀಡುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿದೆ.

ಎರಡನೇ ಪ್ರಕರಣ
ಡಿಸೆಂಬರ್ 6,1992ರಂದು ಬಾಬ್ರಿ ಮಸೀದಿ ಧ್ವಂಸಕ್ಕೂ ಮೊದಲು ಕರಸೇವಕರನ್ನುದ್ದೇಶಿಸಿ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣವನ್ನು ಈಗಾಗಲೇ ನಾಯಕರು ಎದುರಿಸುತ್ತಿದ್ದಾರೆ. ಇದೀಗ ಕ್ರಿಮಿನಲ್ ಸಂಚಿನ ಪ್ರಕಣವನ್ನೂ ನಾಯಕರು ಎದುರಿಸಬೇಕಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications