ವಿಶಿಷ್ಟಚೇತನರ ಸಭೆಯಲ್ಲಿ 'ಕಾಲು ಮುರೀತಿನಿ' ಎಂದ ಬಿಜೆಪಿ ಸಚಿವ!
ಅಸಾನ್ಸೋಲ್(ಪಶ್ಚಿಮ ಬಂಗಾಳ), ಸೆಪ್ಟೆಂಬರ್ 19: 'ನಾನು ಮಾತನಾಡುತ್ತಿರುವ ಸಮಯದಲ್ಲಿ ಪದೇ ಪದೇ ಎದ್ದು ಓಡಾಡಿದರೆ ಕಾಲು ಮುರಿಯುತ್ತೇನೆ' ಎಂದು ಕೇಂದ್ರ ಬೃಹತ್ ಕೈಗಾರಿಕೆ ರಾಜ್ಯ ಸಚಿವ ಬಾಬುಲ್ ಸುಪ್ರಿಯೋ ಹೇಳಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೈಹಿಕ ನ್ಯೂನತೆಯಿಂದ ಬಳಲುತ್ತಿರುವವರಿಗಾಗಿ ಪಶ್ಚಿಮ ಬಂಗಾಳದ ಅಸಾನ್ಸೋಲ್ ನಲ್ಲಿ ನಡೆಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ವ್ಹೀಲ್ ಚೇರ್ ಗಳನ್ನು ನೀಡಲಾಗುತ್ತಿತ್ತು. ಈ ಕಾರ್ಯಕ್ರಮಕ್ಕೂ ಮುನ್ನ ಬಾಬುಲ್ ಸುಪ್ರಿಯೋ ಮಾತನಾಡುತ್ತಿದ್ದರು. ಆ ಸಮಯದಲ್ಲಿ ವ್ಯಕ್ತಿಯೊಬ್ಬರು ತಾವು ಕುಳಿತ ಜಾಗದಿಂದ ಊರುಗೋಲನ್ನು ಊರುತ್ತ ಎದ್ದು ಹೊರಟರು.
ಆದರೆ ತಕ್ಷಣವೇ ಕೋಪಗೊಂಡ ಸುಪ್ರಿಯೋ, 'ಯಾಕೆ ಎದ್ದು ಹೋಗುತ್ತಿದ್ದೀರಾ? ಏನಾಯ್ತು? ನಾನು ಮಾತನಾಡುವ ಸಂದರ್ಭದಲ್ಲಿ ಇನ್ನೊಮ್ಮೆ ಹೀಗೆ ಎದ್ದು ಹೋದರೆ ನಿಮ್ಮ ಕಾಲನ್ನು ಮುರಿಯುತ್ತೇನೆ. ನಿಮ್ಮ ಊರುಗೋಲನ್ನೂ ಮುರಿದು ಹಾಕುತ್ತೇನೆ. ಸುಮ್ಮನೆ ಕುಳಿತುಕೊಳ್ಳಿ. ತಿಳಿಯಿತಾ?' ಎಂದಿದ್ದಾರೆ. ಅಷ್ಟೇ ಅಲ್ಲ, ಮಾತು ಮುಗಿದ ನಂತರ, 'ಆ ವ್ಯಕ್ತಿಗೆ ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿ' ಎಂದಿದ್ದಾರೆ.
What happened to you? Any problem? I can break one of your legs: Union Minister Babul Supriyo to a man during a program for differently abled people at Nazrul Manch in Asansol #WestBengal pic.twitter.com/cFxpF7K6Pn
— ANI (@ANI) September 18, 2018
ಅವರ ಈ ವರ್ತನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಆ ವ್ಯಕ್ತಿಗೆ ಏನು ಕೆಲಸವಿತ್ತೋ ಏನೋ, ಎದ್ದು ಹೋಗಿದ್ದಕ್ಕೆ ಇವರ್ಯಾಕೆ ಇಂಥ ದುರಹಂಕಾರದ ವರ್ತನೆ ತೋರಬೇಕು? ಸಾರ್ವಜನಿಕವಾಗಿಯೇ ಹೀಗೆ ವರ್ತಿಸುವವರು ಜನರ ಬಗ್ಗೆ ನಿಜಕ್ಕೂ ಕಾಳಜಿ ತೋರುತ್ತಾರಾ? ವಿಶಿಷ್ಟ ಚೇತನರ ಕಾರ್ಯಕ್ರಮಕ್ಕೆ ತೆರಳಿ, ಅವರನ್ನೇ ಹೀಗೆ ಕೀಳಾಗಿ ನೋಡುತ್ತಾರೆ ಅಂದ್ರೆ ಅವರು ತೋರುವ ಕಾಳಜಿಯನ್ನು ನಂಬುವುದು ಹೇಗೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಸುಪ್ರಿಯೋ ಇದೇ ಮೊದಲೇನಲ್ಲ, ಇದಕ್ಕೂ ಮೊದಲೂ ಹಲವು ವಿವಾದಗಳ ಮೂಲಕ ಸುದ್ದಿಯಾಗಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications